July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಹಿಳೆಯರ ಬಗ್ಗೆ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಅವಹೇಳನಕಾರಿ ಹೇಳಿಕೆ ಖಂಡನೀಯ : ಸುಧೀರ್ ಆರ್ ಸುವರ್ಣ

ಬೆಳ್ತಂಗಡಿ: ಸಾಮಾಜಿಕ ಜಾಲತಾಣದಲ್ಲಿಹಿಂದುಳಿದ ವರ್ಗದ ಹಿಂದೂ ಸಮುದಾಯದ ಮಹಿಳೆಯರನ್ನು ಅಸಹ್ಯ
ವಾಗಿ ಅವಹೇಳನಕಾರಿಯಾಗಿ ಹೀಯಾಳಿಸಿದ ಅರಣ್ಯಾಧಿಕಾರಿ ಸಂಜೀವ್ ಪೂಜಾರಿ ಕಾಣಿಯೂರು ರವರ ವರ್ತನೆ ಖಂಡನಿಯವೆಂದು ಬೆಳ್ತಂಗಡಿ ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಸುಧೀರ್ ಆರ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರ್ನಾಟಕ ಸರಕಾರದ ಅರಣ್ಯ ಇಲಾಖೆಯಲ್ಲಿ 28 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಸಂಜೀವ ಪೂಜಾರಿ ಅವರ ಈ ಹೇಳಿಕೆ ಗಮನಿಸಿದಾಗ ಅವರ ಮನಸ್ಥಿತಿಯೂ ಅವರ ವೃತ್ತಿ ಜೀವನದ ಪಾವಿತ್ರತೆಯನ್ನು ಉಲ್ಲಂಘಿಸಿದ್ದಾರೆ ಎಂಬುದನ್ನು ಸೂಚಿಸಿತ್ತದೆ. ಸಮಾಜದಲ್ಲಿ ಹೆಣ್ಣನ್ನು ದೇವತೆಯಾಗಿ ಗೌರವಿಸಿ ಪೂಜಿಸುವ ಸಂಸ್ಕೃತಿ ನಮ್ಮದು. ನವರಾತ್ರಿ ಶುಭ ಗಳಿಗೆಯಲ್ಲಿ ಸಂಜೀವ ಪೂಜಾರಿಯವರ ಬಾಯಲ್ಲಿ ಇಂತಹ ಅಸಹ್ಯ ನುಡಿಮುತ್ತುಗಳು ಉದುರಬಾರದಿತ್ತು, ಅವರು ಇಡೀ ಹಿಂದೂ ಸಮಾಜದ ಸಾರ್ವತ್ರಿಕ ಕ್ಷಮೆ ಕೇಳಬೇಕೆಂದು ಆಗ್ರಹಿಸಿದರು.

ಚುನಾವಣೆಯ ಸಂದರ್ಭದಲ್ಲಿ ಕ್ಷುಲ್ಲಕ ಜಾತಿ ರಾಜಕಾರಣ ಮಾಡುವ ಜಾತಿ ಸಂಘಗಳು ಇಂತಹ ಗಂಭೀರ ವಿಚಾರದಲ್ಲಿ ಮೌನಕ್ಕೆ ಶರಣಾಗಿರುವುದು ಬಗ್ಗೆ ತೀವ್ರ ಬೇಸರ ಹೊರ ಹಾಕಿದ್ದಾರೆ.

Related posts

ಮದ್ದಡ್ಕ ರೀನು ಫೂಟ್ ವೆರ್ ನ ಅಂಗಡಿ ಮಾಲಕ ಸುಮೋದ್ ದಾಸ್ ಹೃದಯಾಘಾತದಿಂದ ನಿಧನ

Suddi Udaya

ನೇಣುಬಿಗಿದು ಯುವಕ ಆತ್ಮಹತ್ಯೆಗೆ ಶರಣು: ವಿಷಯ ತಿಳಿದು ತಂದೆ ಕೂಡ ಆತ್ಮಹತ್ಯೆ ಪ್ರಯತ್ನ

Suddi Udaya

ದೀಪದ ಬೆಳಕಿನಲ್ಲಿ ಅರಳಿದ ಯಕ್ಷಗಾನ ಸೌಂದರ್ಯ

Suddi Udaya

ಬಳಂಜ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬಳಂಜ- ನಾಲ್ಕೂರು-ತೆಂಕಕಾರಂದೂರು: 36ನೇ ವರ್ಷದ ಆಚರಣಾ ಸಮಿತಿ ಅಧ್ಯಕ್ಷರಾಗಿ ಯುವ ಉದ್ಯಮಿ ರಾಕೇಶ್ ಹೆಗ್ಡೆ ಬಳಂಜ ಆಯ್ಕೆ

Suddi Udaya

ಕರಾವಳಿ ಜಾನಪದ ಕ್ರೀಡೆ ಕಂಬಳಕ್ಕೆ ಸುಪ್ರೀಂ ಕೋರ್ಟ್ ಅನುಮತಿ ಕಂಬಳ ಅಭಿಮಾನಿಗಳ ಹೋರಾಟಕ್ಕೆ ಸಂದ ಜಯ :ರಕ್ಷಿತ್ ಶಿವರಾಂ

Suddi Udaya

ಪೆರಿಂಜೆ: ಕಾರು ಹಾಗೂ ರಿಕ್ಷಾ ನಡುವೆ ಭೀಕರ ರಸ್ತೆ ಅಪಘಾತ

Suddi Udaya
error: Content is protected !!