September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅ. 29: ಅಳದಂಗಡಿ ಪ್ರಾ.ಕೃ.ಪ.ಸ. ಸಂಘ ನವೀಕೃತಗೊಂಡ ಪೆರೋಡಿತ್ತಾಯಕಟ್ಟೆ ಶಾಖೆಯ ಉದ್ಘಾಟನೆ ಹಾಗೂ ಬೃಹತ್ ರಕ್ತದಾನ ಶಿಬಿರ

ಅಳದಂಗಡಿ: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಇದರ ನವೀಕೃತಗೊಂಡ ಪೆರೋಡಿತ್ತಾಯಕಟ್ಟೆ ಶಾಖೆಯ ಉದ್ಘಾಟನಾ ಸಮಾರಂಭ ಮತ್ತು ಗ್ರಾಮ ಪಂಚಾಯತ್ ಬಳಂಜ, ಹಳೇ ವಿದ್ಯಾರ್ಥಿ ಸಂಘ ಪೆರೋಡಿತ್ತಾಯಕಟ್ಟೆ, ಮೀಡಿಯಾ ಕ್ಲಬ್ ಬೆಳ್ತಂಗಡಿ ಇವರ ಸಹಯೋಗದೊಂದಿಗೆ ಬೃಹತ್ ರಕ್ತದಾನ ಶಿಬಿರ ಅ. 29ರಂದು ಪೆರೋಡಿತ್ತಾಯಕಟ್ಟೆಯಲ್ಲಿ ನಡೆಯಲಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜರವರು ನೆರವೇರಿಸಲಿದ್ದಾರೆ.

ಅಧ್ಯಕ್ಷತೆಯನ್ನು ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ, ಅಧ್ಯಕ್ಷ ರಾಕೇಶ್ ಹೆಗ್ಡೆ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಉಭಯ ಜಿಲ್ಲಾ ಜನಜಾಗೃತಿ ವೇದಿಕೆ ಸ್ಥಾಪಕಾಧ್ಯಕ್ಷ ಕೆ. ವಸಂತ ಸಾಲ್ಯಾನ್, ಎಸ್‌.ಡಿ.ಎಂ. ಮಲ್ಟಿ ಸ್ಪೆಷಾಲಿಟಿ, ಆಸ್ಪತ್ರೆ ಉಜಿರೆ ಮ್ಯಾನೆಜಿಂಗ್ ಡೈರೆಕ್ಟರ್ ಎಂ. ಜನಾರ್ಧನ, ಬಳಂಜ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಶೋಭಾ ಕುಲಾಲ್, ಪೆರೋಡಿತ್ತಾಯಕಟ್ಟೆ ಹಾಲು ಉತ್ಪಾದಕರ ಸಹಕಾರಿ ಸಂಘ ಅಧ್ಯಕ್ಷ ಅರ್ಕಕೀರ್ತಿ ಹೆಗ್ಡೆ , ಹಳೇ ವಿದ್ಯಾರ್ಥಿ ಸಂಘ / ಮೀಡಿಯಾ ಕ್ಲಬ್ ಬೆಳ್ತಂಗಡಿ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ ನೇಸರ, ವಿಠಲ ಹೆಗ್ಡೆ ಕಟ್ಟಡದ ಮಾಲಕರು, ಪೆರೋಡಿತ್ತಾಯಕಟ್ಟೆ, ಬಳಂಜ ಗ್ರಾಮ ಪಂಚಾಯತ್ ಪಿ.ಡಿ.ಒ. ಗಣೇಶ್ ಶೆಟ್ಟಿ, ಪೆರೋಡಿತ್ತಾಯಕಟ್ಟೆ ಸ.ಉ. ಪ್ರಾಥಮಿಕ ಶಾಲೆ ಮುಖ್ಯೋಪಾಧ್ಯಾಯರು ಬೆನೆಡಿಕ್ಟ್ ಪ್ಯಾಸ್, ಪೆರೋಡಿತ್ತಾಯಕಟ್ಟೆ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಮುಸ್ತಫಾ ಮಂಜೊಟ್ಟಿ ಭಾಗವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ. – ಪಿ.ಯು.ಸಿ. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಯಲಿದೆ,

Related posts

ಮಾ.19-26: ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ, ಶ್ರೀ ದುರ್ಗಾದೇವಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ ಮತ್ತು ವಾರ್ಷಿಕ ಪ್ರತಿಷ್ಠಾ ವರ್ಧಂತಿ ಉತ್ಸವ-ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳಾಲು ಗ್ರಾ.ಪಂ. ನಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ ಹಾಗೂ ವಿಕಲಚೇತನರ ವಿಶೇಷ ಸಮನ್ವಯ ಗ್ರಾಮ ಸಭೆ

Suddi Udaya

ಮಾಜಿ ಶಾಸಕ ವಸಂತ ಬಂಗೇರರ ನಿಧನಕ್ಕೆ ಬೆಳ್ತಂಗಡಿ ಮಾಜಿ ಸೈನಿಕರ ಸಂಘದಿಂದ ಸಂತಾಪ

Suddi Udaya

ಪಡಂಗಡಿ:ಎಡೆಬಿಡದೆ ಸುರಿಯುತ್ತಿರುವ ಗಾಳಿ ಮಳೆ, ಮನೆಗೆ ಗುಡ್ಡ ಕುಸಿತ, ಹಾನಿ

Suddi Udaya

ಮಧ್ವ ಓಂಕಾರ ಫ್ರೆಂಡ್ಸ್ ಹಾಗೂ ಓಂಕಾರ ಮಹಿಳಾ ಘಟಕದ ವಾರ್ಷಿಕೋತ್ಸವ

Suddi Udaya

ಕರಂಬಾರು:ವಿಪರೀತ ಮಳೆಯಿಂದ ಅಣೆಕಟ್ಟಿನಲ್ಲಿ ಮರಗಳ ರಾಶಿ, ಪಕ್ಕದ ತೋಟಕ್ಕೆ ಹರಿದ ನೀರು, ಕೃಷಿಗೆ ಹಾನಿ

Suddi Udaya
error: Content is protected !!