25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಭಾರಿ ಮಳೆಗೆ ಅರಸಿನಮಕ್ಕಿಯ ಕಾನದಲ್ಲಿ ಗುಡ್ಡದಿಂದ ರಭಸವಾಗಿ ಬಂದ ನೀರಿನಿಂದ ಮನೆಗೆ ಹಾನಿ

ಅರಸಿನಮಕ್ಕಿ :ಅ. 24ರಂದು ಸಂಜೆ ಸುರಿದ ಭಾರಿ ಮಳೆಗೆ ಅರಸಿನಮಕ್ಕಿಯ ಕಾನ ಎಂಬಲ್ಲಿ ಹತ್ತಿರದ ಗುಡ್ಡದಿಂದ ಬಂದ ನೀರು ತೋಡಿಗೆ ಬಂದು ಅಲ್ಲಿಂದ ರಸ್ತೆಗೆ ಅಪಾರ ಪ್ರಮಾಣದ ನೀರು ನುಗ್ಗಿದ್ದ ಪರಿಣಾಮ ಜಾನಕಿ ಎಂಬವರ ಮನೆಗೆ ಹಾನಿ ಉಂಟುಮಾಡಿದ್ದು ಮನೆಯ ವಸ್ತುಗಳು ನೀರಿನಲ್ಲಿ ತೇಲಿ ಹೋದ ಘಟನೆ ನಡೆದಿದೆ.

ಏಕಾಏಕಿ ಬಂದ ನೀರಿನಿಂದಾಗಿ ಮನೆಯಲ್ಲಿದ್ದ ತಾಯಿ, ಮಗಳು ಹಾಗೂ ಮಕ್ಕಳನ್ನು ರಿಕ್ಷಾ ಚಾಲಕರು ನೋಡಿ ಅವರನ್ನು ಪಕ್ಕದ ರಬ್ಬರ್ ಗುಡ್ಡೆಗೆ ಸ್ಥಳಾಂತರಿಸಿದರಿಂದ ಯಾವುದೇ ಪ್ರಾಣಪಾಯವಾಗಲಿಲ್ಲ. ಮನೆಯಲ್ಲಿದ್ದ ಕಡೆಯುವ ಕಲ್ಲು ಹಾಗೂ ಸ್ಕೂಟಿ ಕೂಡ ನೀರಿನಲ್ಲಿ ತೇಲಿ ಹೋಗಿದೆ.

ಇಂದು (ಅ.25 ) ಅರಸಿನಮಕ್ಕಿಯ ರಿಕ್ಷಾ ಚಾಲಕರು ಸೇರಿ ಹಾನಿಯಾದ ಮನೆಯ ದುರಸ್ತಿ ಕಾರ್ಯ ನಡೆಸಿದರು.

ಈ ಸಂದರ್ಭದಲ್ಲಿ ಅರಸಿನಮಕ್ಕಿ ಪಿಡಿಒ ಜಯರಾಜ್, ಗ್ರಾ.ಪಂ. ಉಪಾಧ್ಯಕ್ಷ ಸುಧೀರ್ ಕುಮಾರ್, ಗಣೇಶ್ ಹೊಸ್ತೋಟ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Related posts

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಪೆರಿಂಜೆ ಶ್ರೀ ಧ.ಮಂ.ಅ. ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಸಾಮಾಜಿಕ & ಶೈಕ್ಷಣಿಕ ಸಮೀಕ್ಷೆ ತಾಂತ್ರಿಕ ಸಮಸ್ಯೆಯನ್ನು ಬಗೆಹರಿಸುವಂತೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ತಾ.ಪಂ. ಕಾರ್ಯನಿರ್ವಹಣಾಧಿಕಾರಿಗೆ ಮನವಿ

Suddi Udaya

ಡಿ.12ರಂದು ಬೆಳ್ತಂಗಡಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಕೊಕ್ರಾಡಿ ಸರಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಪದ್ಮುಂಜದಲ್ಲಿ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಕೇಂದ್ರ ಉದ್ಘಾಟನೆ

Suddi Udaya

ವೇಣೂರು ಯುವವಾಹಿನಿ ಘಟಕದ ವತಿಯಿಂದ ಗುರುಪೂರ್ಣಿಮಾ ಕಾರ್ಯಕ್ರಮ

Suddi Udaya
error: Content is protected !!