23.5 C
ಪುತ್ತೂರು, ಬೆಳ್ತಂಗಡಿ
June 8, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಾಣಿ ಪ.ಪೂ. ಕಾಲೇಜಿನಲ್ಲಿ “ಗೆಳತಿ” ಭರವಸೆಯ ನಾಳೆಗಾಗಿ ಆಪ್ತ ಸಮಾಲೋಚನ ಕಾರ್ಯಕ್ರಮ

ಬೆಳ್ತಂಗಡಿ: ದೈಹಿಕ ಹಾಗೂ ಮಾನಸಿಕ ಬದಲಾವಣೆ ಹೊಂದುವ ಹದಿಹರೆಯದವರಲ್ಲಿ ಸಂವಹನವನ್ನು ನಡೆಸುವುದರಿಂದ ಅವರಲ್ಲಿರುವ ಸಂದೇಹ, ಆತಂಕಗಳನ್ನು ದೂರ ಮಾಡಲು ಸಾಧ್ಯವಿದೆ ಎಂದು ಮಂಗಳೂರು ರೋಶನಿ ನಿಲಯದ ಸಹಾಯಕ ಪ್ರಾಧ್ಯಾಪಕರಾದ ಶ್ರೀಮತಿ ರಮ್ಯಾ. ಬಿ ಹೇಳಿದರು.

ಅವರು ವಾಣಿ ಪದವಿ ಪೂರ್ವ ಕಾಲೇಜಿನ ಮಹಿಳಾ ಕ್ಷೇಮ ಪಾಲನಾ ಸಂಘದ ಆಶ್ರಯದಲ್ಲಿ ನಡೆದ “ಗೆಳತಿ” ಭರವಸೆಯ ನಾಳೆಗಾಗಿ ಎಂಬ ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿನಿಯರೊಂದಿಗೆ ಸಂವಹನವನ್ನು ನಡೆಸುತ್ತಾ, ಹೆಣ್ಣು ಮಕ್ಕಳ ಜೀವನ ಕ್ರಮ, ದೈಹಿಕ ಶುಚಿತ್ವ ಹಾಗೂ ಮಾನಸಿಕ ಒತ್ತಡವನ್ನು ನಿವಾರಣೆ ಮಾಡುವ ವಿಚಾರಗಳು ಕುರಿತು ಮಾತನಾಡಿದರು.

ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡ ಅಧ್ಯಕ್ಷತೆ ವಹಿಸಿದ್ದರು. ಉಪ ಪ್ರಾಂಶುಪಾಲ ವಿಷ್ಣುಪ್ರಕಾಶ್ ಉಪಸ್ಥಿತರಿದ್ದರು.

ಮಹಿಳಾ ಕ್ಷೇಮಪಾಲನಾ ಸಂಘದ ಸಂಯೋಜಕರಾದ ಶ್ರೀಮತಿ ಶಾಂತಿ ಪ್ರಿಯ ಪಿಂಟೋ ಸ್ವಾಗತಿಸಿದರು. ಶ್ರೀಮತಿ ರಾಧಿಕಾ ಎಂ ಧನ್ಯವಾದವಿತ್ತರು.

Related posts

ಮಾ16: ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ನೇತೃತ್ವ , ವಂದೇ ಮಾತರಂ, ನನ್ನ ಸೇವೆ ದೇಶಕ್ಕಾಗಿ ಧ್ಯೇಯದೊಂದಿಗೆ ನೇತ್ರಾವತಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಉಜಿರೆ: ಕಿರಿಯಾಡಿಯಲ್ಲಿ ಶ್ರೀ ಬಾಲ ಗೋಕುಲಾಷ್ಟಮಿ ಆಚರಣೆ

Suddi Udaya

ಕರ್ನಾಟಕ ಪಬ್ಲಿಕ್ ಸ್ಕೂಲ್, ಪುಂಜಾಲಕಟ್ಟೆಯ ಪ್ರಥಮ ದರ್ಜೆ ಸಹಾಯಕ ಪ್ರವೀಣ್ ಕುಮಾರ್ ರವರಿಗೆ ಬೀಳ್ಕೊಡುಗೆ

Suddi Udaya

ಮೇ 31: ಭಾರತದ ಉಪ ರಾಷ್ಟ್ರಪತಿ ಸಿ.ಪಿ ರಾಧಾಕೃಷ್ಣನ್‌ರವರಿಂದ ಸಿರಿ ಸಂಸ್ಥೆಯ`ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್’ ಲೋಕಾರ್ಪಣೆ

Suddi Udaya

ಧರ್ಮಸ್ಥಳ: ಆಕಸ್ಮಿಕ ಗ್ಯಾಸ್ ಸೋರಿಕೆ: ಸುಟ್ಟು ಕರಕಲಾದ ಅಡುಗೆ ಮನೆ

Suddi Udaya

ಎಕ್ಸೆಲ್ ಕಾಲೇಜಿನಲ್ಲಿ 78ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ

Suddi Udaya
error: Content is protected !!