September 6, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಾಣಿ ಪ.ಪೂ. ಕಾಲೇಜಿನಲ್ಲಿ “ಗೆಳತಿ” ಭರವಸೆಯ ನಾಳೆಗಾಗಿ ಆಪ್ತ ಸಮಾಲೋಚನ ಕಾರ್ಯಕ್ರಮ

ಬೆಳ್ತಂಗಡಿ: ದೈಹಿಕ ಹಾಗೂ ಮಾನಸಿಕ ಬದಲಾವಣೆ ಹೊಂದುವ ಹದಿಹರೆಯದವರಲ್ಲಿ ಸಂವಹನವನ್ನು ನಡೆಸುವುದರಿಂದ ಅವರಲ್ಲಿರುವ ಸಂದೇಹ, ಆತಂಕಗಳನ್ನು ದೂರ ಮಾಡಲು ಸಾಧ್ಯವಿದೆ ಎಂದು ಮಂಗಳೂರು ರೋಶನಿ ನಿಲಯದ ಸಹಾಯಕ ಪ್ರಾಧ್ಯಾಪಕರಾದ ಶ್ರೀಮತಿ ರಮ್ಯಾ. ಬಿ ಹೇಳಿದರು.

ಅವರು ವಾಣಿ ಪದವಿ ಪೂರ್ವ ಕಾಲೇಜಿನ ಮಹಿಳಾ ಕ್ಷೇಮ ಪಾಲನಾ ಸಂಘದ ಆಶ್ರಯದಲ್ಲಿ ನಡೆದ “ಗೆಳತಿ” ಭರವಸೆಯ ನಾಳೆಗಾಗಿ ಎಂಬ ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿನಿಯರೊಂದಿಗೆ ಸಂವಹನವನ್ನು ನಡೆಸುತ್ತಾ, ಹೆಣ್ಣು ಮಕ್ಕಳ ಜೀವನ ಕ್ರಮ, ದೈಹಿಕ ಶುಚಿತ್ವ ಹಾಗೂ ಮಾನಸಿಕ ಒತ್ತಡವನ್ನು ನಿವಾರಣೆ ಮಾಡುವ ವಿಚಾರಗಳು ಕುರಿತು ಮಾತನಾಡಿದರು.

ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡ ಅಧ್ಯಕ್ಷತೆ ವಹಿಸಿದ್ದರು. ಉಪ ಪ್ರಾಂಶುಪಾಲ ವಿಷ್ಣುಪ್ರಕಾಶ್ ಉಪಸ್ಥಿತರಿದ್ದರು.

ಮಹಿಳಾ ಕ್ಷೇಮಪಾಲನಾ ಸಂಘದ ಸಂಯೋಜಕರಾದ ಶ್ರೀಮತಿ ಶಾಂತಿ ಪ್ರಿಯ ಪಿಂಟೋ ಸ್ವಾಗತಿಸಿದರು. ಶ್ರೀಮತಿ ರಾಧಿಕಾ ಎಂ ಧನ್ಯವಾದವಿತ್ತರು.

Related posts

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ಗೌಸಿಯಾ ಜಾಮಿಯಾ ಮಸೀದಿಯಲ್ಲಿ ಏಪ್ರಿಲ್ 11 ಮತ್ತು 12 ರಂದು ನಡೆಯಲಿರುವ ಬೃಹತ್ ವಾರ್ಷಿಕ ಜಲಾಲಿಯ್ಯಾ ರಾತೀಬ್ ಮಜ್ಲಿಸ್ ಕಾರ್ಯಕ್ರಮ

Suddi Udaya

ಮೇ 5: ಕುಂಡದಬೆಟ್ಟು ಮಂಜುಶ್ರೀ ಭಜನಾ ಮಂಡಳಿಯ ಪ್ರಾಯೋಜಕತ್ವದಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

Suddi Udaya

ಗುರುವಾಯನಕೆರೆ ಎಕ್ಸೆಲ್ ನಲ್ಲಿ 10 ಪ್ಲಸ್ ವಿಶೇಷ ಕಾರ್ಯಾಗಾರ

Suddi Udaya

ಜಿಲ್ಲಾ ಮಟ್ಟದ ಟೇಬಲ್ ಟೆನಿಸ್ ಪಂದ್ಯಾಟ: ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯ ಇಬ್ಬರು ವಿದ್ಯಾರ್ಥಿನಿಯರು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಪುಂಜಾಲಕಟ್ಟೆಯಲ್ಲಿ ರಾಜ್ಯಮಟ್ಟದ ಕರಾಟೆ ಸ್ಪರ್ಧೆ ಸಾಧಕ 10 ವಿದ್ಯಾರ್ಥಿಗಳಿಗೆ ಸನ್ಮಾನ

Suddi Udaya
error: Content is protected !!