April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅ. 29: ಅಳದಂಗಡಿ ಪ್ರಾ.ಕೃ.ಪ.ಸ. ಸಂಘ ನವೀಕೃತಗೊಂಡ ಪೆರೋಡಿತ್ತಾಯಕಟ್ಟೆ ಶಾಖೆಯ ಉದ್ಘಾಟನೆ ಹಾಗೂ ಬೃಹತ್ ರಕ್ತದಾನ ಶಿಬಿರ

ಅಳದಂಗಡಿ: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಇದರ ನವೀಕೃತಗೊಂಡ ಪೆರೋಡಿತ್ತಾಯಕಟ್ಟೆ ಶಾಖೆಯ ಉದ್ಘಾಟನಾ ಸಮಾರಂಭ ಮತ್ತು ಗ್ರಾಮ ಪಂಚಾಯತ್ ಬಳಂಜ, ಹಳೇ ವಿದ್ಯಾರ್ಥಿ ಸಂಘ ಪೆರೋಡಿತ್ತಾಯಕಟ್ಟೆ, ಮೀಡಿಯಾ ಕ್ಲಬ್ ಬೆಳ್ತಂಗಡಿ ಇವರ ಸಹಯೋಗದೊಂದಿಗೆ ಬೃಹತ್ ರಕ್ತದಾನ ಶಿಬಿರ ಅ. 29ರಂದು ಪೆರೋಡಿತ್ತಾಯಕಟ್ಟೆಯಲ್ಲಿ ನಡೆಯಲಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜರವರು ನೆರವೇರಿಸಲಿದ್ದಾರೆ.

ಅಧ್ಯಕ್ಷತೆಯನ್ನು ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ, ಅಧ್ಯಕ್ಷ ರಾಕೇಶ್ ಹೆಗ್ಡೆ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಉಭಯ ಜಿಲ್ಲಾ ಜನಜಾಗೃತಿ ವೇದಿಕೆ ಸ್ಥಾಪಕಾಧ್ಯಕ್ಷ ಕೆ. ವಸಂತ ಸಾಲ್ಯಾನ್, ಎಸ್‌.ಡಿ.ಎಂ. ಮಲ್ಟಿ ಸ್ಪೆಷಾಲಿಟಿ, ಆಸ್ಪತ್ರೆ ಉಜಿರೆ ಮ್ಯಾನೆಜಿಂಗ್ ಡೈರೆಕ್ಟರ್ ಎಂ. ಜನಾರ್ಧನ, ಬಳಂಜ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಶೋಭಾ ಕುಲಾಲ್, ಪೆರೋಡಿತ್ತಾಯಕಟ್ಟೆ ಹಾಲು ಉತ್ಪಾದಕರ ಸಹಕಾರಿ ಸಂಘ ಅಧ್ಯಕ್ಷ ಅರ್ಕಕೀರ್ತಿ ಹೆಗ್ಡೆ , ಹಳೇ ವಿದ್ಯಾರ್ಥಿ ಸಂಘ / ಮೀಡಿಯಾ ಕ್ಲಬ್ ಬೆಳ್ತಂಗಡಿ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ ನೇಸರ, ವಿಠಲ ಹೆಗ್ಡೆ ಕಟ್ಟಡದ ಮಾಲಕರು, ಪೆರೋಡಿತ್ತಾಯಕಟ್ಟೆ, ಬಳಂಜ ಗ್ರಾಮ ಪಂಚಾಯತ್ ಪಿ.ಡಿ.ಒ. ಗಣೇಶ್ ಶೆಟ್ಟಿ, ಪೆರೋಡಿತ್ತಾಯಕಟ್ಟೆ ಸ.ಉ. ಪ್ರಾಥಮಿಕ ಶಾಲೆ ಮುಖ್ಯೋಪಾಧ್ಯಾಯರು ಬೆನೆಡಿಕ್ಟ್ ಪ್ಯಾಸ್, ಪೆರೋಡಿತ್ತಾಯಕಟ್ಟೆ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಮುಸ್ತಫಾ ಮಂಜೊಟ್ಟಿ ಭಾಗವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ. – ಪಿ.ಯು.ಸಿ. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಯಲಿದೆ,

Related posts

ಜೆ ಡಿ ಎಸ್ ಅಭ್ಯರ್ಥಿಯಿಂದ ತಾಲೂಕಿನಲ್ಲಿ ಮತಯಾಚನೆ   

Suddi Udaya

ಕೊಲ್ಲಿ ಶ್ರೀ ದುರ್ಗಾ ದೇವಿ ದೇವಸ್ಥಾನ ದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಕುತ್ಲೂರು ಉ.ಸ.ಹಿ. ಪ್ರಾಥಮಿಕ ಶಾಲೆಯಲ್ಲಿ “ಚಿಣ್ಣರ ಅಂಗಳ” ಉದ್ಘಾಟನೆ

Suddi Udaya

ಜು.25: ಹಾಲು ಹೆಚ್ಚಳ ಮತ್ತು ಹೈನುಗಾರಿಕಾ ಮಾಹಿತಿ ಕಾರ್ಯಕ್ರಮ

Suddi Udaya

ಕೋಟದಲ್ಲಿ ಗ್ರಾಮ‌ ಪಂಚಾಯತ್ ಸದಸ್ಯರಿಗೆ ಕ್ರೀಡಾಕೂಟ: ಚಂದ್ರಯಾನ 3 ಬಾಹ್ಯಾಕಾಶ ನೌಕೆ ಸ್ಥಬ್ದ ಚಿತ್ರದಲ್ಲಿ ನಾರಾವಿ ಗ್ರಾ.ಪಂ. ಗೆ ಪ್ರಶಸ್ತಿ

Suddi Udaya

ಪಿಯುಸಿ ವಾಣಿಜ್ಯ ವಿಭಾಗದಲ್ಲಿ ಸಾಧನೆಗೈದ “ಮುಸ್ಕಾನ್ ಕೌಸರ್” ರಿಗೆ ಬ್ಯಾರೀಸ್‌ ವೆಲ್‌ಫೇ‌ರ್ ಅಸೋಸಿಯೇಷನ್ ಮೂಲಕ ಶಿಕ್ಷಣ ಸಚಿವರಿಂದ ಸನ್ಮಾನ

Suddi Udaya
error: Content is protected !!