24 C
ಪುತ್ತೂರು, ಬೆಳ್ತಂಗಡಿ
June 8, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಧಾರವಾಡ ಎಸ್.ಡಿ.ಎಂ ಯೂನಿರ್ವಸಿಟಿ ರಿಜಿಸ್ಟ್ರಾರ್ ಭೇಟಿ

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಧಾರವಾಡ ಎಸ್.ಡಿ.ಎಂ ಯೂನಿರ್ವಸಿಟಿಯ ರಿಜಿಸ್ಟ್ರಾರ್ ಹಾಗೂ ಮೂಳೆ ಚಿಕಿತ್ಸಾ ವಿಭಾಗದ ಮುಖ್ಯಸ್ಥರೂ ಆಗಿರುವ ಡಾ| ಚಿದೇಂದ್ರ ಎಂ. ಶೆಟ್ಟರ್ ಅ. 24ರಂದು ಭೇಟಿ ನೀಡಿದರು.

ಬಳಿಕ ಎಲ್ಲಾ ವಿಭಾಗದ ಮುಖ್ಯಸ್ಥರನ್ನು ಉದ್ದೇಶಿಸಿ ಮಾತನಾಡಿದ ಅವರು, ಕೇವಲ ವಿಶಾಲವಾದ ಕಟ್ಟಡ ನೋಡಿ ಯಾವ ರೋಗಿಯೂ ಬರುವುದಿಲ್ಲ. ಆಸ್ಪತ್ರೆ ಅಭಿವೃದ್ಧಿಯಾಗಬೇಕಾದರೆ ಅಲ್ಲಿ ತುರ್ತಾಗಿ ದೊರೆಯುವ ಉತ್ತಮ ಸೇವೆ ಹಾಗೂ ರೋಗಿ ಮತ್ತು ರೋಗಿಯ ಸಹಾಯಕರೊಂದಿಗೆ ನಾವು ನಡೆಸುವ ಸಂವಹಣ ಕೂಡ ಪ್ರಮುಖ ಪಾತ್ರ ವಹಿಸುತ್ತದೆ. ಧಾರವಾಡ ಆಸ್ಪತ್ರೆ ಪ್ರಾರಂಭಗೊಂಡಾಗ ಅಲ್ಲಿ ವಿಶಾಲವಾದ ಕಟ್ಟಡ, ವಿಶಾಲವಾದ ಹೊರಾಂಗಣ ಎಲ್ಲವೂ ಖಾಲಿ ಖಾಲಿ ಇತ್ತು, ಕೆಲವೇ ವರ್ಷದಲ್ಲಿ ಆ ಆಸ್ಪತ್ರೆಯಲ್ಲಿ ಜಾಗದ ಕೊರತೆ ಆಗುವಂತೆ ರೋಗಿಗಳ ಸಂಖ್ಯೆ ಜಾಸ್ತಿಯಾಯಿತು. ವೈದ್ಯರ, ದಾದಿಯರ ಹಾಗೂ ಸಿಬ್ಬಂದಿಗಳ ದುಡಿಮೆ ಮತ್ತು ತ್ಯಾಗದಿಂದ ಮಾತ್ರ ಇದು ಸಾಧ್ಯ. ಉಜಿರೆಯ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯೂ ಕೂಡ ಇದೇ ರೀತಿ ಅಭಿವೃದ್ಧಿ ಹೊಂದುತ್ತಿದೆ. ಹೊರರೋಗಿ ವಿಭಾಗ ಹಾಗೂ ಒಳರೋಗಿ ವಿಭಾಗದಲ್ಲಿ ಸಾಕಷ್ಟು ರೋಗಿಗಳಿದ್ದಾರೆ. ಮುಂದಿನ ದಿನಗಳಲ್ಲಿ ಇಲ್ಲಿಯೂ ಖಾಲಿ ಜಾಗ ಕಾಣಲು ಸಾಧ್ಯವಿಲ್ಲ ಎಂದರು.


ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಬಾಬಣ್ಣ ಶೆಟ್ಟಿಗಾರ್ ಮಾತನಾಡುತ್ತಾ, ನಾವು ಮಾಡುವ ಕೆಲಸದಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಂಡು ಛಲದೊಂದಿಗೆ ಶ್ರಮಪಟ್ಟಾಗ ಉನ್ನತ ಹುದ್ದೆಗೆ ನಮ್ಮನ್ನು ಕೊಂಡೊಯ್ಯಬಲ್ಲದು. ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ತೊಂದರೆಯಾಗದಂತೆ ಎಲ್ಲಾ ವೈದ್ಯಕೀಯ ಸೇವೆ ಅಚ್ಚುಕಟ್ಟಾಗಿ ಮತ್ತು ವ್ಯವಸ್ಥಿವಾಗಿ ನಡೆಯುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.


ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ಸ್ವಾಗತಿಸಿದರು. ವೈದ್ಯಕೀಯ ಅಧೀಕ್ಷಕ ಡಾ| ದೇವೇಂದ್ರ ಕುಮಾರ್. ಪಿ, ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞೆ ಡಾ| ಸ್ವರ್ಣಲತಾ, ಕಿವಿ,ಮೂಗು,ಗಂಟಲು ತಜ್ಞ ಡಾ| ರೋಹನ್ ದೀಕ್ಷಿತ್, ಪೇಥಲಾಜಿಸ್ಟ್ ಡಾ| ವಿನಿತಾ ಅಗಸ್ಟಿನ್ ಹಾಗೂ ಎಲ್ಲಾ ವಿಭಾಗ ಮುಖ್ಯಸ್ಥರು ಉಪಸ್ಥಿತರಿದ್ದರು.

Related posts

ಪ್ರೊ.ಎಸ್ ಪ್ರಭಾಕರ್ ನಿಧನಕ್ಕೆ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಸಂತಾಪ

Suddi Udaya

ಕುವೆಟ್ಟು: ಕೇದಳಿಕೆ ನಿವಾಸಿ ಬಾಬು ನಾಯ್ಕ್ ನಿಧನ

Suddi Udaya

ಬಜೆಟ್ ನಲ್ಲಿ ನಕ್ಸಲ್ ಪೀಡಿತ ಪ್ರದೇಶಗಳ ಅಭಿವೃದ್ಧಿಗಾಗಿ 10 ಕೋಟಿ ವಿಶೇಷ ಪ್ಯಾಕೇಜ್ ಘೋಷಣೆ:ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ : ಶೇಖರ್ ಲಾಯಿಲ

Suddi Udaya

ಸವಣಾಲು : ಕೋಟಿ ಚೆನ್ನಯ್ಯ ಸೈಬರ್ ಸೆಂಟರ್ ಶುಭಾರಂಭ

Suddi Udaya

ಉಜಿರೆ ಅನುಗ್ರಹ ಪ.ಪೂ ಕಾಲೇಜು ಶೇ. 100 ಫಲಿತಾಂಶ

Suddi Udaya

ಬೆಳ್ತಂಗಡಿ ರೋಟರಿ ಆಯನ್ಸ್ ಕ್ಲಬ್ ವತಿಯಿಂದ ಸರ್ಕಾರಿ ಪ್ರೌಢಶಾಲೆ ನೇಲ್ಯಡ್ಕಕ್ಕೆ ವಿಜ್ಞಾನ ಉಪಕರಣಗಳ ಕೊಡುಗೆ

Suddi Udaya
error: Content is protected !!