April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಿಜೆಪಿ ಸಕ್ರಿಯ ಸದಸ್ಯತ್ವ ಅಭಿಯಾನದಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟರಿಂದ ಸದಸ್ಯತ್ವ ಮರು ನೋಂದಣಿ

ಮಂಗಳೂರು: ಸಕ್ರಿಯ ಸದಸ್ಯತ್ವ ಅಭಿಯಾನದ ಭಾಗವಾಗಿ ಭಾರತೀಯ ಜನತಾ ಪಾರ್ಟಿಯ ಸಕ್ರಿಯ ಸದಸ್ಯನಾಗಿ ಕ್ಯಾ. ಬ್ರಿಜೇಶ್ ಚೌಟ ಅವರು ತಮ್ಮ ಸದಸ್ಯತ್ವವನ್ನು ಮರು ನೋಂದಣಿ ಮಾಡಿಸಿಕೊಂಡಿದ್ದಾರೆ.

ಮಂಗಳೂರಿನಲ್ಲಿರುವ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಅ.22 ರಂದು ನಡೆದ ಸಕ್ರಿಯ ಸದಸ್ಯತ್ವ ಅಭಿಯಾನ ಕಾರ್ಯಕ್ರಮದಲ್ಲಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ಅವರ ಸಮ್ಮುಖದಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರು ಸಕ್ರಿಯ ಸದಸ್ಯನಾಗಿ ನೋಂದಣಿ ಮಾಡಿಕೊಂಡರು.

ಈ ವೇಳೆ ಮಾತನಾಡಿದ ಕ್ಯಾ. ಚೌಟ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಕ್ರಿಯ ಸದಸ್ಯತಾ ಅಭಿಯಾನವನ್ನು ಪ್ರಾರಂಭಿಸುವ ಮೂಲಕ ಭಾರತೀಯ ಜನತಾ ಪಾರ್ಟಿಯ ಮೊದಲ ಸಕ್ರಿಯ ಸದಸ್ಯರಾಗಿ ತಮ್ಮ ಸದಸ್ಯತ್ವವನ್ನು ಮರು ನೋಂದಣಿ ಮಾಡಿಸಿಕೊಂಡಿದ್ದಾರೆ. ನಮ್ಮ ಪಾರ್ಟಿಯನ್ನು ತಳಮಟ್ಟದಲ್ಲಿ ಮತ್ತಷ್ಟು ಬಲಪಡಿಸಲು ಹಾಗೂ ಪ್ರಧಾನಿ‌ ನರೇಂದ್ರ ಮೋದಿಯವರ ವಿಕಸಿತ ಭಾರತದ ಪರಿಕಲ್ಪನೆಗೆ ವೇಗ ನೀಡುವ ನಿಟ್ಟಿನಲ್ಲಿ ಈ ಅಭಿಯಾನ ಬಹಳ ಪ್ರಾಮುಖ್ಯತೆಯನ್ನು ಪಡೆದುಕೊಂಡಿದೆ ಎಂದರು.

ಸಂಘಟನಾ ಪರ್ವದ ರಾಜ್ಯ ಚುನಾವಣಾಧಿಕಾರಿ ಕ್ಯಾಪ್ಟನ್ ಗಣೇಶ್‌ ಕಾರ್ಣಿಕ್ ಮತ್ತು ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್ ಮೊದಲಾದವರು ಉಪಸ್ಥಿತರಿದ್ದರು.

Related posts

ನಾರಾವಿ: ಬೈಕ್ ಗೆ ಡಿಕ್ಕಿ ಹೊಡೆದ ಆಟೋರಿಕ್ಷಾ : ಬೈಕ್ ಸವಾರರಿಗೆ ಗಾಯ

Suddi Udaya

ನಿಡ್ಲೆ 18ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿ ರಚನೆ: ಅಧ್ಯಕ್ಷರಾಗಿ ತಿಮ್ಮಪ್ಪ ಗೌಡ ನೂಜಿಲ

Suddi Udaya

ಬೆಳಾಲು ಶ್ರೀ ಧ.ಮಂ.ಅ. ಪ್ರೌಢ ಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya

ವಿದ್ಯುತ್ ಪರಿವರ್ತಕದಿಂದ ಕಿಡಿಗಳು ಸಿಡಿದು ವ್ಯಾಪಿಸಿದ ಬೆಂಕಿ; ಅನಾಹುತ ತಪ್ಪಿಸಿದ ಸ್ಥಳೀಯ ನಾಗರಿಕರು

Suddi Udaya

ಇಂದಬೆಟ್ಟು: ಕರುವಲ್ಲ ಕಲ್ಲಗುಂಡ ದೇವಸ್ಥಾನ ಹಾಗೂ ಬಂಗಾಡಿ ಹಾಡಿ ದೈವಗಳ ಕಾಣಿಕೆ ಡಬ್ಬಿ ಕಳ್ಳತನ

Suddi Udaya

ಬೆನ್ನುಹುರಿ ಅಪಘಾತಕ್ಕೊಳಗಾದವರಿಗಾಗಿ ಉಚಿತ ಆರೋಗ್ಯ ತಪಾಸಣೆ ಮತ್ತು ಜಾಗೃತಿ ಶಿಬಿರದಲ್ಲಿ ಗಾಲಿಕುರ್ಚಿ ಜಾಥಾ

Suddi Udaya
error: Content is protected !!