25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಭಾರಿ ಮಳೆಗೆ ಅರಸಿನಮಕ್ಕಿಯ ಕಾನದಲ್ಲಿ ಗುಡ್ಡದಿಂದ ರಭಸವಾಗಿ ಬಂದ ನೀರಿನಿಂದ ಮನೆಗೆ ಹಾನಿ

ಅರಸಿನಮಕ್ಕಿ :ಅ. 24ರಂದು ಸಂಜೆ ಸುರಿದ ಭಾರಿ ಮಳೆಗೆ ಅರಸಿನಮಕ್ಕಿಯ ಕಾನ ಎಂಬಲ್ಲಿ ಹತ್ತಿರದ ಗುಡ್ಡದಿಂದ ಬಂದ ನೀರು ತೋಡಿಗೆ ಬಂದು ಅಲ್ಲಿಂದ ರಸ್ತೆಗೆ ಅಪಾರ ಪ್ರಮಾಣದ ನೀರು ನುಗ್ಗಿದ್ದ ಪರಿಣಾಮ ಜಾನಕಿ ಎಂಬವರ ಮನೆಗೆ ಹಾನಿ ಉಂಟುಮಾಡಿದ್ದು ಮನೆಯ ವಸ್ತುಗಳು ನೀರಿನಲ್ಲಿ ತೇಲಿ ಹೋದ ಘಟನೆ ನಡೆದಿದೆ.

ಏಕಾಏಕಿ ಬಂದ ನೀರಿನಿಂದಾಗಿ ಮನೆಯಲ್ಲಿದ್ದ ತಾಯಿ, ಮಗಳು ಹಾಗೂ ಮಕ್ಕಳನ್ನು ರಿಕ್ಷಾ ಚಾಲಕರು ನೋಡಿ ಅವರನ್ನು ಪಕ್ಕದ ರಬ್ಬರ್ ಗುಡ್ಡೆಗೆ ಸ್ಥಳಾಂತರಿಸಿದರಿಂದ ಯಾವುದೇ ಪ್ರಾಣಪಾಯವಾಗಲಿಲ್ಲ. ಮನೆಯಲ್ಲಿದ್ದ ಕಡೆಯುವ ಕಲ್ಲು ಹಾಗೂ ಸ್ಕೂಟಿ ಕೂಡ ನೀರಿನಲ್ಲಿ ತೇಲಿ ಹೋಗಿದೆ.

ಇಂದು (ಅ.25 ) ಅರಸಿನಮಕ್ಕಿಯ ರಿಕ್ಷಾ ಚಾಲಕರು ಸೇರಿ ಹಾನಿಯಾದ ಮನೆಯ ದುರಸ್ತಿ ಕಾರ್ಯ ನಡೆಸಿದರು.

ಈ ಸಂದರ್ಭದಲ್ಲಿ ಅರಸಿನಮಕ್ಕಿ ಪಿಡಿಒ ಜಯರಾಜ್, ಗ್ರಾ.ಪಂ. ಉಪಾಧ್ಯಕ್ಷ ಸುಧೀರ್ ಕುಮಾರ್, ಗಣೇಶ್ ಹೊಸ್ತೋಟ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Related posts

ಬೆಳ್ತಂಗಡಿ: ಸರ್ವೆಯರ್ ವಿಶ್ವನಾಥ್ ರಾವ್ ಹೃದಯಾಘಾತದಿಂದ ಸಾವು

Suddi Udaya

” ವಿಂಶತಿ” ಸಂಭ್ರಮದ ಆಚರಣೆ: ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ರಾಜ್ಯಪಠ್ಯಕ್ರಮ) ಶಾಲೆಯ ವಿದ್ಯಾರ್ಥಿಗಳಿಗೆ ಹಲವು ಬಹುಮಾನಗಳು

Suddi Udaya

ಗಂಡಿಬಾಗಿಲು: ಸಿಯೋನ್ ಆಶ್ರಮದಲ್ಲಿ 26ನೇ ವಾರ್ಷಿಕೋತ್ಸವ ಆಚರಣೆ

Suddi Udaya

ಕಳಿಯ ಗ್ರಾಮ ಪಂಚಾಯತು ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕಮೋಡ್ ವೀಲ್‌ಚೇರ್ ವಿತರಣೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ 2ನೇ ಬಾರಿ ಎನ್.ಎ.ಬಿ.ಹೆಚ್ ಪ್ರಮಾಣಪತ್ರ

Suddi Udaya
error: Content is protected !!