April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಭಾರಿ ಮಳೆಗೆ ಅರಸಿನಮಕ್ಕಿಯ ಕಾನದಲ್ಲಿ ಗುಡ್ಡದಿಂದ ರಭಸವಾಗಿ ಬಂದ ನೀರಿನಿಂದ ಮನೆಗೆ ಹಾನಿ

ಅರಸಿನಮಕ್ಕಿ :ಅ. 24ರಂದು ಸಂಜೆ ಸುರಿದ ಭಾರಿ ಮಳೆಗೆ ಅರಸಿನಮಕ್ಕಿಯ ಕಾನ ಎಂಬಲ್ಲಿ ಹತ್ತಿರದ ಗುಡ್ಡದಿಂದ ಬಂದ ನೀರು ತೋಡಿಗೆ ಬಂದು ಅಲ್ಲಿಂದ ರಸ್ತೆಗೆ ಅಪಾರ ಪ್ರಮಾಣದ ನೀರು ನುಗ್ಗಿದ್ದ ಪರಿಣಾಮ ಜಾನಕಿ ಎಂಬವರ ಮನೆಗೆ ಹಾನಿ ಉಂಟುಮಾಡಿದ್ದು ಮನೆಯ ವಸ್ತುಗಳು ನೀರಿನಲ್ಲಿ ತೇಲಿ ಹೋದ ಘಟನೆ ನಡೆದಿದೆ.

ಏಕಾಏಕಿ ಬಂದ ನೀರಿನಿಂದಾಗಿ ಮನೆಯಲ್ಲಿದ್ದ ತಾಯಿ, ಮಗಳು ಹಾಗೂ ಮಕ್ಕಳನ್ನು ರಿಕ್ಷಾ ಚಾಲಕರು ನೋಡಿ ಅವರನ್ನು ಪಕ್ಕದ ರಬ್ಬರ್ ಗುಡ್ಡೆಗೆ ಸ್ಥಳಾಂತರಿಸಿದರಿಂದ ಯಾವುದೇ ಪ್ರಾಣಪಾಯವಾಗಲಿಲ್ಲ. ಮನೆಯಲ್ಲಿದ್ದ ಕಡೆಯುವ ಕಲ್ಲು ಹಾಗೂ ಸ್ಕೂಟಿ ಕೂಡ ನೀರಿನಲ್ಲಿ ತೇಲಿ ಹೋಗಿದೆ.

ಇಂದು (ಅ.25 ) ಅರಸಿನಮಕ್ಕಿಯ ರಿಕ್ಷಾ ಚಾಲಕರು ಸೇರಿ ಹಾನಿಯಾದ ಮನೆಯ ದುರಸ್ತಿ ಕಾರ್ಯ ನಡೆಸಿದರು.

ಈ ಸಂದರ್ಭದಲ್ಲಿ ಅರಸಿನಮಕ್ಕಿ ಪಿಡಿಒ ಜಯರಾಜ್, ಗ್ರಾ.ಪಂ. ಉಪಾಧ್ಯಕ್ಷ ಸುಧೀರ್ ಕುಮಾರ್, ಗಣೇಶ್ ಹೊಸ್ತೋಟ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Related posts

ಬೆಳ್ತಂಗಡಿ ತಾಲೂಕು ಆದಿದ್ರಾವಿಡ ಸಮಾಜ ಸೇವಾ ಸಂಘದ ಕುಕ್ಕಳ – ಮಡಂತ್ಯಾರು ಗ್ರಾಮ ಸಮಿತಿ ರಚನೆ

Suddi Udaya

ಅಯೋಧ್ಯೆಯಲ್ಲಿ ಶ್ರೀ ರಾಮಲಲ್ಲಾ ಪ್ರಾಣಪ್ರತಿಷ್ಠೆ, ವೀರಕೇಸರಿ ಹಿಂದೂಪುರ ಸಂಘಟನೆಯಿಂದ ಬಳಂಜ ಪೇಟೆಯಲ್ಲಿ ಶ್ರೀರಾಮದೇವರ ಶೃಂಗಾರ ಮಂಟಪ

Suddi Udaya

ಅರಸಿನಮಕ್ಕಿಯಲ್ಲಿ ಉಚಿತ ಟೈಲರಿಂಗ್ ತರಬೇತಿ ಶಿಬಿರದ ಉದ್ಘಾಟನೆ

Suddi Udaya

ರಾಜಕೀಯ ಪ್ರೇರಿತವಾಗಿ ಶಾಸಕ ಹರೀಶ್ ಪೂಂಜರನ್ನು ಪೊಲೀಸರು ಬಂಧಿಸಿದರೆ ಉಗ್ರ ಹೋರಾಟ: ಕಟೀಲ್

Suddi Udaya

ರೂ.1.50 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ “ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡ” ಇದರ ನೂತನ ಕಟ್ಟಡದ ಉದ್ಘಾಟನೆ: ಸ್ಮಾರ್ಟ್ ಕ್ಲಾಸ್ ತರಗತಿಗೆ ಚಾಲನೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ನೇತೃತ್ವದಲ್ಲಿ ಉಚಿತ ಆರೋಗ್ಯ ತಪಾಸಣೆ ಮತ್ತು ಉಚಿತ ದಂತ ಚಿಕಿತ್ಸಾ ಶಿಬಿರ

Suddi Udaya
error: Content is protected !!