37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಭಾರಿ ಮಳೆಗೆ ಅರಸಿನಮಕ್ಕಿಯ ಕಾನದಲ್ಲಿ ಗುಡ್ಡದಿಂದ ರಭಸವಾಗಿ ಬಂದ ನೀರಿನಿಂದ ಮನೆಗೆ ಹಾನಿ

ಅರಸಿನಮಕ್ಕಿ :ಅ. 24ರಂದು ಸಂಜೆ ಸುರಿದ ಭಾರಿ ಮಳೆಗೆ ಅರಸಿನಮಕ್ಕಿಯ ಕಾನ ಎಂಬಲ್ಲಿ ಹತ್ತಿರದ ಗುಡ್ಡದಿಂದ ಬಂದ ನೀರು ತೋಡಿಗೆ ಬಂದು ಅಲ್ಲಿಂದ ರಸ್ತೆಗೆ ಅಪಾರ ಪ್ರಮಾಣದ ನೀರು ನುಗ್ಗಿದ್ದ ಪರಿಣಾಮ ಜಾನಕಿ ಎಂಬವರ ಮನೆಗೆ ಹಾನಿ ಉಂಟುಮಾಡಿದ್ದು ಮನೆಯ ವಸ್ತುಗಳು ನೀರಿನಲ್ಲಿ ತೇಲಿ ಹೋದ ಘಟನೆ ನಡೆದಿದೆ.

ಏಕಾಏಕಿ ಬಂದ ನೀರಿನಿಂದಾಗಿ ಮನೆಯಲ್ಲಿದ್ದ ತಾಯಿ, ಮಗಳು ಹಾಗೂ ಮಕ್ಕಳನ್ನು ರಿಕ್ಷಾ ಚಾಲಕರು ನೋಡಿ ಅವರನ್ನು ಪಕ್ಕದ ರಬ್ಬರ್ ಗುಡ್ಡೆಗೆ ಸ್ಥಳಾಂತರಿಸಿದರಿಂದ ಯಾವುದೇ ಪ್ರಾಣಪಾಯವಾಗಲಿಲ್ಲ. ಮನೆಯಲ್ಲಿದ್ದ ಕಡೆಯುವ ಕಲ್ಲು ಹಾಗೂ ಸ್ಕೂಟಿ ಕೂಡ ನೀರಿನಲ್ಲಿ ತೇಲಿ ಹೋಗಿದೆ.

ಇಂದು (ಅ.25 ) ಅರಸಿನಮಕ್ಕಿಯ ರಿಕ್ಷಾ ಚಾಲಕರು ಸೇರಿ ಹಾನಿಯಾದ ಮನೆಯ ದುರಸ್ತಿ ಕಾರ್ಯ ನಡೆಸಿದರು.

ಈ ಸಂದರ್ಭದಲ್ಲಿ ಅರಸಿನಮಕ್ಕಿ ಪಿಡಿಒ ಜಯರಾಜ್, ಗ್ರಾ.ಪಂ. ಉಪಾಧ್ಯಕ್ಷ ಸುಧೀರ್ ಕುಮಾರ್, ಗಣೇಶ್ ಹೊಸ್ತೋಟ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Related posts

ಬಿಲ್ಡ‌ರ್ ಜಿತೇಂದ್ರ ಕೊಟ್ಟಾರಿಯವರ ಮನೆಗೆ ನುಗ್ಗಿ ಹಲ್ಲೆಗೆ ಯತ್ನ: ಎನ್.ಎಸ್.ಯು.ಐ ಕಾರ್ಯಕರ್ತ ಉಜಿರೆ ನಿವಾಸಿ ತನುಷ್ ಶೆಟ್ಟಿ ಮತ್ತು ಕದ್ರಿ ನಿವಾಸಿ ಅಂಕಿತ್ ಶೆಟ್ಟಿ ಬಂಧನ

Suddi Udaya

ಲಾಯಿಲ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂಘ ಉದ್ಘಾಟನೆ

Suddi Udaya

ಬಾರ್ಯ- ಪುತ್ತಿಲ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಲಾರಿ ಮತ್ತು ಕಾರು ಡಿಕ್ಕಿ: ನಾಲ್ವರಿಗೆ ಗಾಯ

Suddi Udaya

ವೇಣೂರು: ಗಂಭೀರ ಸ್ಥಿತಿಯಲ್ಲಿದ್ದ ವ್ಯಕ್ತಿಯೋರ್ವರನ್ನು ಅಂಬ್ಯುಲೆನ್ಸ್‌ನಲ್ಲಿ ವೇಣೂರಿನಿಂದ ಕೇವಲ 45 ನಿಮಿಷಗಳಲ್ಲಿ ಕೆಎಂಸಿ ಆಸ್ಪತ್ರೆಗೆ ತಲುಪಿಸಿದ ಚಾಲಕ ಪ್ರಸಾದ್

Suddi Udaya

ಜೆಸಿ ಸಪ್ತಾಹ ಅಂಗವಾಗಿ ತರಬೇತಿ ದಿನದ ಆಚರಣೆ

Suddi Udaya
error: Content is protected !!