25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಭಾರಿ ಮಳೆಗೆ ಅರಸಿನಮಕ್ಕಿಯ ಕಾನದಲ್ಲಿ ಗುಡ್ಡದಿಂದ ರಭಸವಾಗಿ ಬಂದ ನೀರಿನಿಂದ ಮನೆಗೆ ಹಾನಿ

ಅರಸಿನಮಕ್ಕಿ :ಅ. 24ರಂದು ಸಂಜೆ ಸುರಿದ ಭಾರಿ ಮಳೆಗೆ ಅರಸಿನಮಕ್ಕಿಯ ಕಾನ ಎಂಬಲ್ಲಿ ಹತ್ತಿರದ ಗುಡ್ಡದಿಂದ ಬಂದ ನೀರು ತೋಡಿಗೆ ಬಂದು ಅಲ್ಲಿಂದ ರಸ್ತೆಗೆ ಅಪಾರ ಪ್ರಮಾಣದ ನೀರು ನುಗ್ಗಿದ್ದ ಪರಿಣಾಮ ಜಾನಕಿ ಎಂಬವರ ಮನೆಗೆ ಹಾನಿ ಉಂಟುಮಾಡಿದ್ದು ಮನೆಯ ವಸ್ತುಗಳು ನೀರಿನಲ್ಲಿ ತೇಲಿ ಹೋದ ಘಟನೆ ನಡೆದಿದೆ.

ಏಕಾಏಕಿ ಬಂದ ನೀರಿನಿಂದಾಗಿ ಮನೆಯಲ್ಲಿದ್ದ ತಾಯಿ, ಮಗಳು ಹಾಗೂ ಮಕ್ಕಳನ್ನು ರಿಕ್ಷಾ ಚಾಲಕರು ನೋಡಿ ಅವರನ್ನು ಪಕ್ಕದ ರಬ್ಬರ್ ಗುಡ್ಡೆಗೆ ಸ್ಥಳಾಂತರಿಸಿದರಿಂದ ಯಾವುದೇ ಪ್ರಾಣಪಾಯವಾಗಲಿಲ್ಲ. ಮನೆಯಲ್ಲಿದ್ದ ಕಡೆಯುವ ಕಲ್ಲು ಹಾಗೂ ಸ್ಕೂಟಿ ಕೂಡ ನೀರಿನಲ್ಲಿ ತೇಲಿ ಹೋಗಿದೆ.

ಇಂದು (ಅ.25 ) ಅರಸಿನಮಕ್ಕಿಯ ರಿಕ್ಷಾ ಚಾಲಕರು ಸೇರಿ ಹಾನಿಯಾದ ಮನೆಯ ದುರಸ್ತಿ ಕಾರ್ಯ ನಡೆಸಿದರು.

ಈ ಸಂದರ್ಭದಲ್ಲಿ ಅರಸಿನಮಕ್ಕಿ ಪಿಡಿಒ ಜಯರಾಜ್, ಗ್ರಾ.ಪಂ. ಉಪಾಧ್ಯಕ್ಷ ಸುಧೀರ್ ಕುಮಾರ್, ಗಣೇಶ್ ಹೊಸ್ತೋಟ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Related posts

ಕುಕ್ಕೇಡಿ: ಶ್ರೀ ಶಾರಾದಾಂಬ ಮಹಿಳಾ ಭಜನಾ ಸಮಿತಿಯ ವಾರ್ಷಿಕ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಉರುವಾಲು: ಹಲೇಜಿ ನಿವಾಸಿ ಮೋನಪ್ಪ ಮೂಲ್ಯ ನಿಧನ

Suddi Udaya

ಚೆಸ್ ಪಂದ್ಯಾಟ: ವೈಬ್ರೆಂಟ್ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಅಪಘಾತದಲ್ಲಿ ಸಾವು; ನವೋದಯ ಗುಂಪಿನ ಸದಸ್ಯೆಗೆ 1 ಲಕ್ಷ ರೂ. ವಿಮೆ ಚೆಕ್ ಹಸ್ತಾಂತರ

Suddi Udaya

ಕನ್ಯಾಡಿ: ನೇರೋಳ್ ಪಲ್ಕೆ ಕೇಸರಿ ಗೆಳೆಯರ ಬಳಗದಿಂದ 11ನೇ ವರ್ಷದ ಸಾಮೂಹಿಕ ಶ್ರೀ ಶನೀಶ್ವರ ಪೂಜೆ

Suddi Udaya

ವೇಣೂರು: ಮಹಾಮಸ್ತಕಾಭಿಷೇಕ ಮಹೋತ್ಸವದ ನೋಡೆಲ್ ಅಧಿಕಾರಿಯಾಗಿ ಮಾಣಿಕ್ಯ ಹಾಗೂ ಸಮನ್ವಯ ಅಧಿಕಾರಿಯಾಗಿ ಕೆ. ಜಯಕೀರ್ತಿ ಜೈನ್ ನೇಮಕ

Suddi Udaya
error: Content is protected !!