22.6 C
ಪುತ್ತೂರು, ಬೆಳ್ತಂಗಡಿ
July 23, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಾಣಿ ಪ.ಪೂ. ಕಾಲೇಜಿನಲ್ಲಿ “ಗೆಳತಿ” ಭರವಸೆಯ ನಾಳೆಗಾಗಿ ಆಪ್ತ ಸಮಾಲೋಚನ ಕಾರ್ಯಕ್ರಮ

ಬೆಳ್ತಂಗಡಿ: ದೈಹಿಕ ಹಾಗೂ ಮಾನಸಿಕ ಬದಲಾವಣೆ ಹೊಂದುವ ಹದಿಹರೆಯದವರಲ್ಲಿ ಸಂವಹನವನ್ನು ನಡೆಸುವುದರಿಂದ ಅವರಲ್ಲಿರುವ ಸಂದೇಹ, ಆತಂಕಗಳನ್ನು ದೂರ ಮಾಡಲು ಸಾಧ್ಯವಿದೆ ಎಂದು ಮಂಗಳೂರು ರೋಶನಿ ನಿಲಯದ ಸಹಾಯಕ ಪ್ರಾಧ್ಯಾಪಕರಾದ ಶ್ರೀಮತಿ ರಮ್ಯಾ. ಬಿ ಹೇಳಿದರು.

ಅವರು ವಾಣಿ ಪದವಿ ಪೂರ್ವ ಕಾಲೇಜಿನ ಮಹಿಳಾ ಕ್ಷೇಮ ಪಾಲನಾ ಸಂಘದ ಆಶ್ರಯದಲ್ಲಿ ನಡೆದ “ಗೆಳತಿ” ಭರವಸೆಯ ನಾಳೆಗಾಗಿ ಎಂಬ ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿನಿಯರೊಂದಿಗೆ ಸಂವಹನವನ್ನು ನಡೆಸುತ್ತಾ, ಹೆಣ್ಣು ಮಕ್ಕಳ ಜೀವನ ಕ್ರಮ, ದೈಹಿಕ ಶುಚಿತ್ವ ಹಾಗೂ ಮಾನಸಿಕ ಒತ್ತಡವನ್ನು ನಿವಾರಣೆ ಮಾಡುವ ವಿಚಾರಗಳು ಕುರಿತು ಮಾತನಾಡಿದರು.

ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡ ಅಧ್ಯಕ್ಷತೆ ವಹಿಸಿದ್ದರು. ಉಪ ಪ್ರಾಂಶುಪಾಲ ವಿಷ್ಣುಪ್ರಕಾಶ್ ಉಪಸ್ಥಿತರಿದ್ದರು.

ಮಹಿಳಾ ಕ್ಷೇಮಪಾಲನಾ ಸಂಘದ ಸಂಯೋಜಕರಾದ ಶ್ರೀಮತಿ ಶಾಂತಿ ಪ್ರಿಯ ಪಿಂಟೋ ಸ್ವಾಗತಿಸಿದರು. ಶ್ರೀಮತಿ ರಾಧಿಕಾ ಎಂ ಧನ್ಯವಾದವಿತ್ತರು.

Related posts

ನ.16-17: ಎಕ್ಸೆಲ್ ಕಾಲೇಜಿನಲ್ಲಿ ಎಕ್ಸೆಲ್ ಪರ್ಬ, ಸಾಂಸ್ಕೃತಿಕ ವೈವಿಧ್ಯ

Suddi Udaya

ಎಸ್ ಡಿ ಯಂ ಪಾಲಿಟೆಕ್ನಿಕ್ – ಸ್ವಯಂ ಪ್ರೇರಿತ ರಕ್ತದಾನ ಶಿಬಿರ

Suddi Udaya

ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ನಿಧನಕ್ಕೆ ಧರ್ಮಸ್ಥಳದ ಡಾ. ಡಿ.ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಬಳ್ಳಮಂಜ ಬ್ರಹ್ಮಕಲಶ: ಈಶ್ವರ ದೇವರ ಲಿಂಗ ಪುನ:ಪ್ರತಿಷ್ಠೆ ಅಷ್ಟಬಂಧ ಪ್ರತಿಷ್ಠೆ-ಗರುಡ ಪ್ರದಕ್ಷಿಣೆ

Suddi Udaya

ಕಳೆಂಜ ಗ್ರಾಮ ಪಂಚಾಯತ್ ನ ಗ್ರಾಮ ಸಭೆ

Suddi Udaya

ಮಡಂತ್ಯಾರು: ಬಿ ಎಂ ಆಟೋ ಚಾಲಕ ಮಾಲಕರ ಸಂಘದ ವಾರ್ಷಿಕ ಸಭೆ

Suddi Udaya
error: Content is protected !!