September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಿಜೆಪಿ ಸಕ್ರಿಯ ಸದಸ್ಯತ್ವ ಅಭಿಯಾನದಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟರಿಂದ ಸದಸ್ಯತ್ವ ಮರು ನೋಂದಣಿ

ಮಂಗಳೂರು: ಸಕ್ರಿಯ ಸದಸ್ಯತ್ವ ಅಭಿಯಾನದ ಭಾಗವಾಗಿ ಭಾರತೀಯ ಜನತಾ ಪಾರ್ಟಿಯ ಸಕ್ರಿಯ ಸದಸ್ಯನಾಗಿ ಕ್ಯಾ. ಬ್ರಿಜೇಶ್ ಚೌಟ ಅವರು ತಮ್ಮ ಸದಸ್ಯತ್ವವನ್ನು ಮರು ನೋಂದಣಿ ಮಾಡಿಸಿಕೊಂಡಿದ್ದಾರೆ.

ಮಂಗಳೂರಿನಲ್ಲಿರುವ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಅ.22 ರಂದು ನಡೆದ ಸಕ್ರಿಯ ಸದಸ್ಯತ್ವ ಅಭಿಯಾನ ಕಾರ್ಯಕ್ರಮದಲ್ಲಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ಅವರ ಸಮ್ಮುಖದಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರು ಸಕ್ರಿಯ ಸದಸ್ಯನಾಗಿ ನೋಂದಣಿ ಮಾಡಿಕೊಂಡರು.

ಈ ವೇಳೆ ಮಾತನಾಡಿದ ಕ್ಯಾ. ಚೌಟ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಕ್ರಿಯ ಸದಸ್ಯತಾ ಅಭಿಯಾನವನ್ನು ಪ್ರಾರಂಭಿಸುವ ಮೂಲಕ ಭಾರತೀಯ ಜನತಾ ಪಾರ್ಟಿಯ ಮೊದಲ ಸಕ್ರಿಯ ಸದಸ್ಯರಾಗಿ ತಮ್ಮ ಸದಸ್ಯತ್ವವನ್ನು ಮರು ನೋಂದಣಿ ಮಾಡಿಸಿಕೊಂಡಿದ್ದಾರೆ. ನಮ್ಮ ಪಾರ್ಟಿಯನ್ನು ತಳಮಟ್ಟದಲ್ಲಿ ಮತ್ತಷ್ಟು ಬಲಪಡಿಸಲು ಹಾಗೂ ಪ್ರಧಾನಿ‌ ನರೇಂದ್ರ ಮೋದಿಯವರ ವಿಕಸಿತ ಭಾರತದ ಪರಿಕಲ್ಪನೆಗೆ ವೇಗ ನೀಡುವ ನಿಟ್ಟಿನಲ್ಲಿ ಈ ಅಭಿಯಾನ ಬಹಳ ಪ್ರಾಮುಖ್ಯತೆಯನ್ನು ಪಡೆದುಕೊಂಡಿದೆ ಎಂದರು.

ಸಂಘಟನಾ ಪರ್ವದ ರಾಜ್ಯ ಚುನಾವಣಾಧಿಕಾರಿ ಕ್ಯಾಪ್ಟನ್ ಗಣೇಶ್‌ ಕಾರ್ಣಿಕ್ ಮತ್ತು ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್ ಮೊದಲಾದವರು ಉಪಸ್ಥಿತರಿದ್ದರು.

Related posts

ಶಿಶಿಲ ಸ.ಉ.ಹಿ.ಪ್ರಾ. ಶಾಲೆಯ ನೂತನ ಕಟ್ಟಡ ಉದ್ಘಾಟಿಸಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸಿ.ಎಂ ಸಿದ್ದರಾಮಯ್ಯ ಹಾಗೂ ಡಿ.ಸಿ.ಎಂ ಡಿ.ಕೆ ಶಿವಕುಮಾರ್ ಭೇಟಿ: ದೇವರಿಗೆ ವಿಶೇಷ ಪೂಜೆ

Suddi Udaya

ಸುಲ್ಕೇರಿಯಲ್ಲಿ ಟಾಟಾ ಗೂಡ್ಸ್ ವಾಹನಕ್ಕೆ ಈಚರ್ ಲಾರಿ ಡಿಕ್ಕಿ

Suddi Udaya

ಕೊಯ್ಯೂರು : ಪಂಚಶ್ರೀ ಸ್ವಸಹಾಯ ಸಂಘದ ವತಿಯಿಂದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ವಿಜಯ ಕುಮಾರ್ ಎಂ. ರವರಿಗೆ ಸನ್ಮಾನ

Suddi Udaya

ಕೊಕ್ಕಡ: ಕಲ್ಲಡ್ಕ ನಿವಾಸಿ ಬಾಬು ಮಲೆಕುಡಿಯ ನಿಧನ

Suddi Udaya

ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ ಸತ್ಯಾಸತ್ಯತೆ ಶೀಘ್ರವಾಗಿ ಹೊರಬರಲಿದೆ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ವಿಜಯೇಂದ್ರ ಹೇಳಿಕೆ

Suddi Udaya
error: Content is protected !!