25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಭಾರಿ ಮಳೆಗೆ ಅರಸಿನಮಕ್ಕಿಯ ಕಾನದಲ್ಲಿ ಗುಡ್ಡದಿಂದ ರಭಸವಾಗಿ ಬಂದ ನೀರಿನಿಂದ ಮನೆಗೆ ಹಾನಿ

ಅರಸಿನಮಕ್ಕಿ :ಅ. 24ರಂದು ಸಂಜೆ ಸುರಿದ ಭಾರಿ ಮಳೆಗೆ ಅರಸಿನಮಕ್ಕಿಯ ಕಾನ ಎಂಬಲ್ಲಿ ಹತ್ತಿರದ ಗುಡ್ಡದಿಂದ ಬಂದ ನೀರು ತೋಡಿಗೆ ಬಂದು ಅಲ್ಲಿಂದ ರಸ್ತೆಗೆ ಅಪಾರ ಪ್ರಮಾಣದ ನೀರು ನುಗ್ಗಿದ್ದ ಪರಿಣಾಮ ಜಾನಕಿ ಎಂಬವರ ಮನೆಗೆ ಹಾನಿ ಉಂಟುಮಾಡಿದ್ದು ಮನೆಯ ವಸ್ತುಗಳು ನೀರಿನಲ್ಲಿ ತೇಲಿ ಹೋದ ಘಟನೆ ನಡೆದಿದೆ.

ಏಕಾಏಕಿ ಬಂದ ನೀರಿನಿಂದಾಗಿ ಮನೆಯಲ್ಲಿದ್ದ ತಾಯಿ, ಮಗಳು ಹಾಗೂ ಮಕ್ಕಳನ್ನು ರಿಕ್ಷಾ ಚಾಲಕರು ನೋಡಿ ಅವರನ್ನು ಪಕ್ಕದ ರಬ್ಬರ್ ಗುಡ್ಡೆಗೆ ಸ್ಥಳಾಂತರಿಸಿದರಿಂದ ಯಾವುದೇ ಪ್ರಾಣಪಾಯವಾಗಲಿಲ್ಲ. ಮನೆಯಲ್ಲಿದ್ದ ಕಡೆಯುವ ಕಲ್ಲು ಹಾಗೂ ಸ್ಕೂಟಿ ಕೂಡ ನೀರಿನಲ್ಲಿ ತೇಲಿ ಹೋಗಿದೆ.

ಇಂದು (ಅ.25 ) ಅರಸಿನಮಕ್ಕಿಯ ರಿಕ್ಷಾ ಚಾಲಕರು ಸೇರಿ ಹಾನಿಯಾದ ಮನೆಯ ದುರಸ್ತಿ ಕಾರ್ಯ ನಡೆಸಿದರು.

ಈ ಸಂದರ್ಭದಲ್ಲಿ ಅರಸಿನಮಕ್ಕಿ ಪಿಡಿಒ ಜಯರಾಜ್, ಗ್ರಾ.ಪಂ. ಉಪಾಧ್ಯಕ್ಷ ಸುಧೀರ್ ಕುಮಾರ್, ಗಣೇಶ್ ಹೊಸ್ತೋಟ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Related posts

ಪ್ಲಾಂಟೇಶನ್ ಬೆಳೆಗಳನ್ನು ಗುತ್ತಿಗೆ ನೀಡಲು ಅರ್ಜಿ ಆಹ್ವಾನ: ಜುಲೈ 15 ರವರೆಗೆ ಕಾಲಾವಕಾಶ

Suddi Udaya

ಜಿಲ್ಲೆಯಾಧ್ಯಂತ ಸಂಚರಿಸಲಿರುವ “ವಿಜಯ ಸಂಕಲ್ಪ ಯಾತ್ರೆ” : ಬೆಳ್ತಂಗಡಿ ಶ್ರೀ ಕುತ್ಯಾರು ದೇವಸ್ಥಾನ ಬಳಿಯಿಂದ ಲಾಯಿಲಾದ ವರೆಗೆ ಬೃಹತ್ ರೋಡ್ ಶೋ ಹಾಗೂ ಬೈಕ್ ಜಾಥಾ

Suddi Udaya

ಧರ್ಮಸ್ಥಳ ನೇರ್ತನೆಯಲ್ಲಿ ಕಾಡಾನೆ ದಾಳಿ :ಕೃಷಿಗೆ ಹಾನಿ   

Suddi Udaya

ಕನ್ಯಾಡಿಯ ಶ್ರೀರಾಮ ಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಸ್ವಾಮೀಜಿಯವರಿಂದ ಮುಂಬಯಿ ಬಿಲ್ಲವ ಸಮುದಾಯ ಭವನ, ಗುರುಮಂದಿರ ಉದ್ಘಾಟನೆ

Suddi Udaya

ವೇಣೂರು: ಮಹಾವೀರ ನಗರ ನಿವಾಸಿ ಶ್ರೀಮತಿ ಕಮಲ ನಿಧನ

Suddi Udaya

ನಾಳ : ತೇರಾ ಬಾಕಿಮಾರು ಗದ್ದೆಯಲ್ಲಿ ನೇಜಿ ನಾಟಿ

Suddi Udaya
error: Content is protected !!