July 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಭಾರಿ ಮಳೆಗೆ ಅರಸಿನಮಕ್ಕಿಯ ಕಾನದಲ್ಲಿ ಗುಡ್ಡದಿಂದ ರಭಸವಾಗಿ ಬಂದ ನೀರಿನಿಂದ ಮನೆಗೆ ಹಾನಿ

ಅರಸಿನಮಕ್ಕಿ :ಅ. 24ರಂದು ಸಂಜೆ ಸುರಿದ ಭಾರಿ ಮಳೆಗೆ ಅರಸಿನಮಕ್ಕಿಯ ಕಾನ ಎಂಬಲ್ಲಿ ಹತ್ತಿರದ ಗುಡ್ಡದಿಂದ ಬಂದ ನೀರು ತೋಡಿಗೆ ಬಂದು ಅಲ್ಲಿಂದ ರಸ್ತೆಗೆ ಅಪಾರ ಪ್ರಮಾಣದ ನೀರು ನುಗ್ಗಿದ್ದ ಪರಿಣಾಮ ಜಾನಕಿ ಎಂಬವರ ಮನೆಗೆ ಹಾನಿ ಉಂಟುಮಾಡಿದ್ದು ಮನೆಯ ವಸ್ತುಗಳು ನೀರಿನಲ್ಲಿ ತೇಲಿ ಹೋದ ಘಟನೆ ನಡೆದಿದೆ.

ಏಕಾಏಕಿ ಬಂದ ನೀರಿನಿಂದಾಗಿ ಮನೆಯಲ್ಲಿದ್ದ ತಾಯಿ, ಮಗಳು ಹಾಗೂ ಮಕ್ಕಳನ್ನು ರಿಕ್ಷಾ ಚಾಲಕರು ನೋಡಿ ಅವರನ್ನು ಪಕ್ಕದ ರಬ್ಬರ್ ಗುಡ್ಡೆಗೆ ಸ್ಥಳಾಂತರಿಸಿದರಿಂದ ಯಾವುದೇ ಪ್ರಾಣಪಾಯವಾಗಲಿಲ್ಲ. ಮನೆಯಲ್ಲಿದ್ದ ಕಡೆಯುವ ಕಲ್ಲು ಹಾಗೂ ಸ್ಕೂಟಿ ಕೂಡ ನೀರಿನಲ್ಲಿ ತೇಲಿ ಹೋಗಿದೆ.

ಇಂದು (ಅ.25 ) ಅರಸಿನಮಕ್ಕಿಯ ರಿಕ್ಷಾ ಚಾಲಕರು ಸೇರಿ ಹಾನಿಯಾದ ಮನೆಯ ದುರಸ್ತಿ ಕಾರ್ಯ ನಡೆಸಿದರು.

ಈ ಸಂದರ್ಭದಲ್ಲಿ ಅರಸಿನಮಕ್ಕಿ ಪಿಡಿಒ ಜಯರಾಜ್, ಗ್ರಾ.ಪಂ. ಉಪಾಧ್ಯಕ್ಷ ಸುಧೀರ್ ಕುಮಾರ್, ಗಣೇಶ್ ಹೊಸ್ತೋಟ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Related posts

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ.ಪೂ. ಕಾಲೇಜಿನಲ್ಲಿ ‘ಆಪ್ತ ಸಮಾಲೋಚನೆ ಮತ್ತು ವಿದ್ಯಾರ್ಥಿ ನಡವಳಿಕೆ’ ಕುರಿತು ತರಬೇತಿ ಕಾರ್ಯಾಗಾರ

Suddi Udaya

ಪಡ್ಡಂದಡ್ಕ ನೂರುಲ್ ಹುಧಾ ಮಸೀದಿಯಲ್ಲಿ ಸಂಭ್ರಮದ ಈದ್ ಆಚರಣೆ

Suddi Udaya

ಗುರುವಾಯನಕೆರೆ: ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದಲ್ಲಿ ಸನ್ಯಾಸಿ ಹಾಗೂ ಗುಳಿಗ ದೈವದ ಆರೂಢ ಶಿಲಾನ್ಯಾಸ

Suddi Udaya

ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಶಿಕ್ಷಕ-ಪೋಷಕರ ಸಭೆ

Suddi Udaya

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕೆಂಪೇಗೌಡರ ಜಯಂತಿ ಆಚರಣೆ

Suddi Udaya

ಬೆಳಾಲು: ದಿ| ದಿನೇಶ್ ಪೂಜಾರಿ ಉಪ್ಪಾರು ಸ್ಮರಣಾರ್ಥವಾಗಿ ನಿರ್ಮಾಣಗೊಂಡಿರುವ ಅನಂತೋಡಿ ವೃತ್ತ ಲೋಕಾರ್ಪಣೆ

Suddi Udaya
error: Content is protected !!