25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಭಾರಿ ಮಳೆಗೆ ಅರಸಿನಮಕ್ಕಿಯ ಕಾನದಲ್ಲಿ ಗುಡ್ಡದಿಂದ ರಭಸವಾಗಿ ಬಂದ ನೀರಿನಿಂದ ಮನೆಗೆ ಹಾನಿ

ಅರಸಿನಮಕ್ಕಿ :ಅ. 24ರಂದು ಸಂಜೆ ಸುರಿದ ಭಾರಿ ಮಳೆಗೆ ಅರಸಿನಮಕ್ಕಿಯ ಕಾನ ಎಂಬಲ್ಲಿ ಹತ್ತಿರದ ಗುಡ್ಡದಿಂದ ಬಂದ ನೀರು ತೋಡಿಗೆ ಬಂದು ಅಲ್ಲಿಂದ ರಸ್ತೆಗೆ ಅಪಾರ ಪ್ರಮಾಣದ ನೀರು ನುಗ್ಗಿದ್ದ ಪರಿಣಾಮ ಜಾನಕಿ ಎಂಬವರ ಮನೆಗೆ ಹಾನಿ ಉಂಟುಮಾಡಿದ್ದು ಮನೆಯ ವಸ್ತುಗಳು ನೀರಿನಲ್ಲಿ ತೇಲಿ ಹೋದ ಘಟನೆ ನಡೆದಿದೆ.

ಏಕಾಏಕಿ ಬಂದ ನೀರಿನಿಂದಾಗಿ ಮನೆಯಲ್ಲಿದ್ದ ತಾಯಿ, ಮಗಳು ಹಾಗೂ ಮಕ್ಕಳನ್ನು ರಿಕ್ಷಾ ಚಾಲಕರು ನೋಡಿ ಅವರನ್ನು ಪಕ್ಕದ ರಬ್ಬರ್ ಗುಡ್ಡೆಗೆ ಸ್ಥಳಾಂತರಿಸಿದರಿಂದ ಯಾವುದೇ ಪ್ರಾಣಪಾಯವಾಗಲಿಲ್ಲ. ಮನೆಯಲ್ಲಿದ್ದ ಕಡೆಯುವ ಕಲ್ಲು ಹಾಗೂ ಸ್ಕೂಟಿ ಕೂಡ ನೀರಿನಲ್ಲಿ ತೇಲಿ ಹೋಗಿದೆ.

ಇಂದು (ಅ.25 ) ಅರಸಿನಮಕ್ಕಿಯ ರಿಕ್ಷಾ ಚಾಲಕರು ಸೇರಿ ಹಾನಿಯಾದ ಮನೆಯ ದುರಸ್ತಿ ಕಾರ್ಯ ನಡೆಸಿದರು.

ಈ ಸಂದರ್ಭದಲ್ಲಿ ಅರಸಿನಮಕ್ಕಿ ಪಿಡಿಒ ಜಯರಾಜ್, ಗ್ರಾ.ಪಂ. ಉಪಾಧ್ಯಕ್ಷ ಸುಧೀರ್ ಕುಮಾರ್, ಗಣೇಶ್ ಹೊಸ್ತೋಟ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Related posts

ಲಾಯಿಲ ಗ್ರಾಮೀಣ ಶ್ರೇಷ್ಠತಾ ಕೇಂದ್ರ ತರಬೇತಿ ಸಂಸ್ಥೆಯಲ್ಲಿ ಕಂಪ್ಯೂಟರ್‌ ತರಬೇತಿಯ ಪ್ರಮಾಣ ಪತ್ರ ವಿತರಣೆ

Suddi Udaya

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕ ಪದಗ್ರಹಣ ಸಮಾರಂಭದಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪುರಸ್ಕೃತೆ ಕನ್ನಾಜೆಯ ಸುರಕ್ಷಾ ಆಚಾರ್ಯರಿಗೆ ಸನ್ಮಾನ

Suddi Udaya

ಎ.30 ಉಜಿರೆಯಲ್ಲಿ‌ ಬೃಹತ್ ರಕ್ತದಾನ ಶಿಬಿರ

Suddi Udaya

ಶಿಬಾಜೆ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಕುಂಭಶ್ರೀ ಪ.ಪೂ. ಕಾಲೇಜಿನಲ್ಲಿ ಸಂಕಲ್ಪ–2026: ವಿದ್ಯಾರ್ಥಿಗಳ ಭವಿಷ್ಯಕ್ಕೆ ದಾರಿ ತೋರಿದ ಪ್ರೇರಣಾದಾಯಕ ಓರಿಯಂಟೇಷನ್ ಕಾರ್ಯಕ್ರಮ

Suddi Udaya

ಇಳಂತಿಲ ಶಾಲೆಗೆ ನುಗ್ಗಿದ ಕಳ್ಳರು: ಕಪಾಟಿನಲ್ಲಿ ಇಟ್ಟಿದ್ದ ನಗದು ಕಳವು

Suddi Udaya
error: Content is protected !!