24 C
ಪುತ್ತೂರು, ಬೆಳ್ತಂಗಡಿ
April 3, 2025
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಾಣಿ ಪ.ಪೂ. ಕಾಲೇಜಿನಲ್ಲಿ “ಗೆಳತಿ” ಭರವಸೆಯ ನಾಳೆಗಾಗಿ ಆಪ್ತ ಸಮಾಲೋಚನ ಕಾರ್ಯಕ್ರಮ

ಬೆಳ್ತಂಗಡಿ: ದೈಹಿಕ ಹಾಗೂ ಮಾನಸಿಕ ಬದಲಾವಣೆ ಹೊಂದುವ ಹದಿಹರೆಯದವರಲ್ಲಿ ಸಂವಹನವನ್ನು ನಡೆಸುವುದರಿಂದ ಅವರಲ್ಲಿರುವ ಸಂದೇಹ, ಆತಂಕಗಳನ್ನು ದೂರ ಮಾಡಲು ಸಾಧ್ಯವಿದೆ ಎಂದು ಮಂಗಳೂರು ರೋಶನಿ ನಿಲಯದ ಸಹಾಯಕ ಪ್ರಾಧ್ಯಾಪಕರಾದ ಶ್ರೀಮತಿ ರಮ್ಯಾ. ಬಿ ಹೇಳಿದರು.

ಅವರು ವಾಣಿ ಪದವಿ ಪೂರ್ವ ಕಾಲೇಜಿನ ಮಹಿಳಾ ಕ್ಷೇಮ ಪಾಲನಾ ಸಂಘದ ಆಶ್ರಯದಲ್ಲಿ ನಡೆದ “ಗೆಳತಿ” ಭರವಸೆಯ ನಾಳೆಗಾಗಿ ಎಂಬ ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿನಿಯರೊಂದಿಗೆ ಸಂವಹನವನ್ನು ನಡೆಸುತ್ತಾ, ಹೆಣ್ಣು ಮಕ್ಕಳ ಜೀವನ ಕ್ರಮ, ದೈಹಿಕ ಶುಚಿತ್ವ ಹಾಗೂ ಮಾನಸಿಕ ಒತ್ತಡವನ್ನು ನಿವಾರಣೆ ಮಾಡುವ ವಿಚಾರಗಳು ಕುರಿತು ಮಾತನಾಡಿದರು.

ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡ ಅಧ್ಯಕ್ಷತೆ ವಹಿಸಿದ್ದರು. ಉಪ ಪ್ರಾಂಶುಪಾಲ ವಿಷ್ಣುಪ್ರಕಾಶ್ ಉಪಸ್ಥಿತರಿದ್ದರು.

ಮಹಿಳಾ ಕ್ಷೇಮಪಾಲನಾ ಸಂಘದ ಸಂಯೋಜಕರಾದ ಶ್ರೀಮತಿ ಶಾಂತಿ ಪ್ರಿಯ ಪಿಂಟೋ ಸ್ವಾಗತಿಸಿದರು. ಶ್ರೀಮತಿ ರಾಧಿಕಾ ಎಂ ಧನ್ಯವಾದವಿತ್ತರು.

Related posts

ಶಿಶಿಲ: ಆಚಾರಿಪಾಲ್ ನಿವಾಸಿ ರಘುರಾಮ ಗೋಖಲೆ ನಿಧನ

Suddi Udaya

ಬೆಳ್ತಂಗಡಿ ಮಾಸ್ಟರ್ಸ್ ಕೋಚಿಂಗ್ ಕ್ಲಾಸ್ ನಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಕುವೆಟ್ಟು :ಶ್ರೀ ಗುರುನಾರಾಯಣ‌ ಸ್ವಾಮಿ ಸೇವಾ‌ ಸಂಘ ಯುವ ಬಿಲ್ಲವ ವೇದಿಕೆ, ಮಹಿಳಾ ಬಿಲ್ಲವ ವೇದಿಕೆ, ಕುವೆಟ್ಟು ಗ್ರಾಮ ಸಮಿತಿಯಿಂದ  ಗುರು ಪೂಜೆ ಹಾಗೂ ಸಾರ್ವಜನಿಕ ಶನೈಶ್ಚರ ಪೂಜೆ

Suddi Udaya

ಗುರುವಾಯನಕೆರೆ: ಏಕದಿನ ಶೈಕ್ಷಣಿಕ ಸಮ್ಮೇಳನ ಸಮಾರೋಪ: ಪಠ್ಯಪುಸ್ತಕ ರಚನೆಯಲ್ಲಿ ರಾಜಕೀಯ ಹಸ್ತಕ್ಷೇಪ ಸಲ್ಲದು: ಎಮ್.ಎಲ್.ಸಿ ಭೋಜೇ ಗೌಡ

Suddi Udaya

ಧಾರಕಾರವಾಗಿ ಸುರಿಯುತ್ತಿರುವ ಮಳೆಯಿಂದ ಸೇತುವೆಯಿಲ್ಲದೆ ಶಿಶಿಲ- ಒಟ್ಲ ಭಾಗದ ಜನರಿಗೆ ಸಂಕಷ್ಟ: ಸೇತುವೆ ನಿರ್ಮಾಣಕ್ಕೆ ಒಟ್ಲ ಭಾಗದ ಜನರ ಒತ್ತಾಯ

Suddi Udaya

ಕಳಿಯ ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya
error: Content is protected !!