22.6 C
ಪುತ್ತೂರು, ಬೆಳ್ತಂಗಡಿ
July 23, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಾಣಿ ಪ.ಪೂ. ಕಾಲೇಜಿನಲ್ಲಿ “ಗೆಳತಿ” ಭರವಸೆಯ ನಾಳೆಗಾಗಿ ಆಪ್ತ ಸಮಾಲೋಚನ ಕಾರ್ಯಕ್ರಮ

ಬೆಳ್ತಂಗಡಿ: ದೈಹಿಕ ಹಾಗೂ ಮಾನಸಿಕ ಬದಲಾವಣೆ ಹೊಂದುವ ಹದಿಹರೆಯದವರಲ್ಲಿ ಸಂವಹನವನ್ನು ನಡೆಸುವುದರಿಂದ ಅವರಲ್ಲಿರುವ ಸಂದೇಹ, ಆತಂಕಗಳನ್ನು ದೂರ ಮಾಡಲು ಸಾಧ್ಯವಿದೆ ಎಂದು ಮಂಗಳೂರು ರೋಶನಿ ನಿಲಯದ ಸಹಾಯಕ ಪ್ರಾಧ್ಯಾಪಕರಾದ ಶ್ರೀಮತಿ ರಮ್ಯಾ. ಬಿ ಹೇಳಿದರು.

ಅವರು ವಾಣಿ ಪದವಿ ಪೂರ್ವ ಕಾಲೇಜಿನ ಮಹಿಳಾ ಕ್ಷೇಮ ಪಾಲನಾ ಸಂಘದ ಆಶ್ರಯದಲ್ಲಿ ನಡೆದ “ಗೆಳತಿ” ಭರವಸೆಯ ನಾಳೆಗಾಗಿ ಎಂಬ ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿನಿಯರೊಂದಿಗೆ ಸಂವಹನವನ್ನು ನಡೆಸುತ್ತಾ, ಹೆಣ್ಣು ಮಕ್ಕಳ ಜೀವನ ಕ್ರಮ, ದೈಹಿಕ ಶುಚಿತ್ವ ಹಾಗೂ ಮಾನಸಿಕ ಒತ್ತಡವನ್ನು ನಿವಾರಣೆ ಮಾಡುವ ವಿಚಾರಗಳು ಕುರಿತು ಮಾತನಾಡಿದರು.

ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡ ಅಧ್ಯಕ್ಷತೆ ವಹಿಸಿದ್ದರು. ಉಪ ಪ್ರಾಂಶುಪಾಲ ವಿಷ್ಣುಪ್ರಕಾಶ್ ಉಪಸ್ಥಿತರಿದ್ದರು.

ಮಹಿಳಾ ಕ್ಷೇಮಪಾಲನಾ ಸಂಘದ ಸಂಯೋಜಕರಾದ ಶ್ರೀಮತಿ ಶಾಂತಿ ಪ್ರಿಯ ಪಿಂಟೋ ಸ್ವಾಗತಿಸಿದರು. ಶ್ರೀಮತಿ ರಾಧಿಕಾ ಎಂ ಧನ್ಯವಾದವಿತ್ತರು.

Related posts

ಅಳದಂಗಡಿ: ಜನಮಂಗಳ ಕಾರ್ಯಕ್ರಮದಡಿ ವಿಲ್ ಚೇರ್ ವಿತರಣೆ

Suddi Udaya

ಉಜಿರೆಯ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಪರೀಕ್ಷಾ ತಯಾರಿಯ ಧನಾತ್ಮಕ ಮಾರ್ಗಗಳ ಕಾರ್ಯಾಗಾರ

Suddi Udaya

ಬೆಳಾಲು ಗ್ರಾ.ಪಂ. ನಲ್ಲಿ ನೂತನವಾಗಿ ನಿರ್ಮಾಣಗೊಂಡ ವಾಣಿಜ್ಯ ಸಂಕೀರ್ಣ ಕಟ್ಟಡ ಉದ್ಘಾಟನೆ

Suddi Udaya

ಎಸ್ಸೆಸ್ಸೆಲ್ಸಿ ಫಲಿತಾಂಶ: ಹೋಲಿ ರಿಡೀಮರ್ ಶಾಲೆಗೆ ಸತತ 11ನೇ ಬಾರಿಗೆ ಶೇ.100 ಫಲಿತಾಂಶ

Suddi Udaya

ಫೆ 14, 15: ಮುಗೇರಡ್ಕ ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ ರಜತ ಸಂಭ್ರಮದ ಪ್ರಯುಕ್ತ ರಜತ ಪಥ : ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಹರೀಶ್ ಪೂಂಜ ನವ ಬೆಳ್ತಂಗಡಿಯ ಹರಿಕಾರ” ಆಲ್ಬಮ್ ಸಾಂಗ್ ಬಿಡುಗಡೆ

Suddi Udaya
error: Content is protected !!