22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಮಾಜ ಕಾರ್ಯ ವಿಭಾಗದಿಂದ ಆರ್ಥಿಕ ಶಿಸ್ತು ಕುರಿತು ಸಂವಾದ ಕಾರ್ಯಕ್ರಮ

ಮಂಗಳೂರು : ಎಸ್‌ಡಿಎಂ ಸ್ನಾತಕೋತ್ತರ ಕೇಂದ್ರದಲ್ಲಿ ಸಮಾಜ ಕಾರ್ಯ ವಿಭಾಗ ಹಮ್ಮಿಕೊಂಡಿದ್ದ ಸಿನರ್ಜಿ ಎಚ್‌ಆರ್‌ಡಿ ಸರಣಿಯ ಮೂರನೇ ಆವೃತ್ತಿಯು ಇತ್ತೀಚೆಗೆ ನಡೆಯಿತು. ಕಾರ್ಯಕ್ರಮದಲ್ಲಿ ಆರ್ಥಿಕ ಶಿಸ್ತು ಕುರಿತು, ಸಂವಾದ ನಡೆಯಿತು.

ಪ್ರಮುಖ ವಾಗ್ಮಿ ಜನಾರ್ಧನ ಪಡಿಲ್ಲಾಯ ಮ್ಯೂಚುವಲ್ ಫಂಡ್‌ಗಳು ಮತ್ತು ವಿಮಾ ಆಯ್ಕೆಗಳ ಕುರಿತಾಗಿ ಮಾತನಾಡಿ ಮ್ಯೂಚುವಲ್ ಫಂಡ್ ಹೂಡಿಕೆಗಳ ಸೂಕ್ಷ್ಮತೆಗಳನ್ನು ವಿವರಿಸಿದರು. ಪರಿಣಾಮಕಾರಿಯಾಗಿ ಹಣ ಉಳಿಸುವ ಬಗ್ಗೆ ವಿವರಿಸಿದ ಅವರು, ವಿಮಾ ಪಾಲಿಸಿಗಳು, ವಿಶೇಷವಾಗಿ ಆರೋಗ್ಯ ವಿಮೆಯ ಪ್ರಾಮುಖ್ಯತೆಯನ್ನು ಒತ್ತಿಹೇಳಿದರು. ಸಂವಾದದಲ್ಲಿ ಉಳಿತಾಯ ಬ್ಯಾಂಕ್ ಖಾತೆಗಳ ಪರಿಕಲ್ಪನೆಯ ಬಗ್ಗೆಯೂ ಚರ್ಚಿಸಲಾಯಿತು. ಅಲ್ಲದೆ, ಹಣಕಾಸಿನ ಯೋಜನೆಯ ಪ್ರಾಮುಖ್ಯತೆಯನ್ನು ಸ್ಪಷ್ಟಪಡಿಸಿದರು.

ಅಭೀಷ ಸ್ವಾಗತಿಸಿದರು. ಶಹೀದ್ ಪರಿಚಯಾತ್ಮಕ ಟಿಪ್ಪಣಿ ವಾಚಿಸಿದರು. ಸಿಂಚನ ಧನ್ಯವಾದ ಸಲ್ಲಿಸಿದರು.

Related posts

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಬುರುಡೆ ಚಿನ್ನಯ್ಯ ನನ್ನು ಬೆಳ್ತಂಗಡಿ ಕೋರ್ಟ್ ಗೆ ಹಾಜರುಪಡಿಸಲಿರುವ ಅಧಿಕಾರಿಗಳು: ಚಿನ್ನಯ್ಯ ಪರ ನಾಲ್ಕು ಮಂದಿ ವಕೀಲರ ಆಗಮನ

Suddi Udaya

ಮಲೆಬೆಟ್ಟು: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಾಣಾಪಾಯದಿಂದ ಪಾರು

Suddi Udaya

ಅಗ್ರಿಲೀಫ್ ಸಂಸ್ಥೆಯಲ್ಲಿ ಐಡಿಯಾಥಾನ್ ವಾರಾಚರಣೆ

Suddi Udaya

ಮಿತ್ತಬಾಗಿಲು ಗ್ರಾ.ಪಂ. ಮಾಜಿ ಸದಸ್ಯೆ ನಂದಾರು ನಿಧನ

Suddi Udaya

ಮಡಂತ್ಯಾರು: ಹೆದ್ದಾರಿಯ ರಸ್ತೆ ಕಾಮಗಾರಿ ಕಳಪೆ: ಸಾರ್ವಜನಿಕರ ಆಕ್ರೋಶ

Suddi Udaya
error: Content is protected !!