23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮಿನಿ-ಅನ್ವೇಷಣಾ-2024

ಉಜಿರೆ: ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜು ಮತ್ತು ಅಗಸ್ತ್ಯ ಅಂತರಾಷ್ಟ್ರೀಯ ಫೌಂಡೇಶನ್, ಬೆಂಗಳೂರು ಸಹಯೋಗದಲ್ಲಿ “ಮಿನಿ-ಅನ್ವೇಷಣಾ-2024 Present your Innovative Ideas”  ಕಾರ್ಯಕ್ರಮವನ್ನು ಅ.18 ರಂದು ಕಾಲೇಜಿನಲ್ಲಿ ಆಯೋಜಿಸಲಾಗಿತ್ತು.

ಈ ಅನ್ವೇಷಣಾ ಕಾರ್ಯಕ್ರಮದಲ್ಲಿ ಒಟ್ಟು ೧೮೦ ವಿದ್ಯಾರ್ಥಿಗಳು 45 ತಂಡಗಳಾಗಿ ಭಾಗವಹಿಸಿದರು. ವಿವಿಧ ಸಮಸ್ಯೆಗಳಿಗೆ ತಂತ್ರಜ್ಞಾನದ ಅಳವಡಿಕೆ ಮೂಲಕ ಪರಿಹಾರ ಕಂಡುಕೊಳ್ಳುವಲ್ಲಿ ವಿದ್ಯಾರ್ಥಿಗಳು ತಮ್ಮ ನವೀನ ಕಲ್ಪನೆಗಳನ್ನು ಪ್ರಸ್ತುತಪಡಿಸಿದರು. ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಪ್ರಾಂಶುಪಾಲರಾದ ಡಾ. ಆಶೋಕ್ ಕುಮಾರ್, ಇಲೆಕ್ಟ್ರಾನಿಕ್ಸ್ ವಿಭಾಗ ಮುಖ್ಯಸ್ಥರಾದ ಡಾ. ಮಧುಸೂದನ ಮತ್ತು ನೇಮಕಾತಿ ಅಧಿಕಾರಿ ಡಾ. ಸುಬ್ರಮಣ್ಯ ತೋಳ್ಪಾಡಿತ್ತಾಯ ಉಪಸ್ಥಿತರಿದ್ದರು.

ಅಗಸ್ತ್ಯ ಫೌಂಡೇಶನ್‌ನ ಭಾಸ್ಕರ್, ಪ್ರೊಫೆಸರ್ ಡಾ. ಸಂದೀಪ್, MITE ಮೂಡಬಿದ್ರಿಯ ಅಸೋಸಿಯೇಟ್ ಪ್ರೊಫೆಸರ್ ಡಾ. ಶಿವರಾಮ್, ಕಾರ್ಯಕ್ರಮ ಸಂಯೋಜಕ ಡಾ. ಮೋಹನ್ ನಾಯ್ಕ ತೀರ್ಪುಗಾರರಾಗಿ ಸಹಕರಿಸಿದರು. ವಿಜೇತ ತಂಡಗಳಿಗೆ ಪ್ರಾಂಶುಪಾಲರು ನಗದು ಬಹುಮಾನ ವಿತರಿಸಿದರು.

ಡಾ. ಆಶೋಕ್ ಕುಮಾರ್
ಪ್ರಾಂಶುಪಾಲರು

Related posts

ಮಡಂತ್ಯಾರು: ರಚನಾ ಸಿಲ್ಕ್ ನಲ್ಲಿ ಆಷಾಡ ಡಿಸ್ಕೌಂಟ್ ಸೇಲ್

Suddi Udaya

ಬೆಳ್ತಂಗಡಿ ಎಸ್.ಡಿ.ಎಂ ಶಾಲೆಯಲ್ಲಿ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟನಾ ಕಾರ್ಯಕ್ರಮ

Suddi Udaya

ಎಸ್,ಎಸ್.ಎಲ್.ಸಿ ಪರೀಕ್ಷೆಯಲ್ಲಿ ತಾಲೂಕಿಗೆ ಮೂರನೇ ಸ್ಥಾನ ಪಡೆದ ಸುಪ್ರಿಯಾ ಎಸ್ ಇವರನ್ನು ಮೂಡುಕೋಡಿ ಬಿಲ್ಲವ ಸಂಘ ಮತ್ತು ವೇಣೂರು ಯುವವಾಹಿನಿ ಘಟಕದ ವತಿಯಿಂದ ಸನ್ಮಾನ

Suddi Udaya

ಗುರುವಾಯನಕೆರೆ ಶ್ರೀ ಕ್ಷೇ. ಧ. ಗ್ರಾ. ಯೋಜನೆಯಲ್ಲಿ ಆಯುಧ ಪೂಜೆ

Suddi Udaya

ಕರಿಕಲ್ ಶಾಖಾ ಮಠದಲ್ಲಿ ಜು.21ರಿಂದ ಆ.30ರವರೆಗೆ ಕನ್ಯಾಡಿ ಶ್ರೀ ರಾಮಕ್ಷೇತ್ರದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಯವರ ಚಾತುರ್ಮಾಸ್ಯ ವ್ರತ

Suddi Udaya

ತಾಲೂಕು ಚಿತ್ಪಾವನ ಬ್ರಾಹ್ಮಣರ ಸಂಘದ ಮಹಿಳಾ ಘಟಕದ ಉದ್ಘಾಟನಾ ಸಮಾರಂಭ

Suddi Udaya
error: Content is protected !!