25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿ

ಮಿತ್ತಬಾಗಿಲು:‌ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ

ಮಿತ್ತಬಾಗಿಲು: ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ(ಶ್ರೀ ದುರ್ಗಾದೇವಿ) ದೇವಸ್ಥಾನ ಮಿತ್ತ ಬಾಗಿಲು ಮತ್ತು ಕಂಪಾನಿ ಯೋ ನೆಮ್ಮದಿ ವೆಲ್ ನೆಸ್ಸ್ ಸೆಂಟರ್ ಪುತ್ತೂರು ಇದರ ಸಹಯೋಗದಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರವು ದೇವಸ್ಥಾನದ ಕಲ್ಯಾಣ ಮಂಟಪದಲ್ಲಿ ಹದಿನೈದು ದಿನಗಳ ಕಾಲ ನಡೆಯಿತು.

ಕೊನೆಯ ದಿನವಾದ ಸಂಸ್ಥೆಯ ಮುಖ್ಯಸ್ಥ ಹಾಗೂ ಸಿಬಂದಿ ವರ್ಗದವರನ್ನು ಗೌರವಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಸಭಾಧ್ಯಕ್ಷರಾಗಿ ದೇವಾಲಯದ ಆಡಳಿತ ಧಿಕಾರಿಯವರಾದ ಮೋಹನ್ ಬಂಗೇರಾರವರು ವಹಿಸಿದ್ದು, ಮುಖ್ಯ ಅತಿಥಿಗಳಾಗಿ ಮಿತ್ತ ಬಾಗಿಲು ಗ್ರಾಮದ ಗ್ರಾಮಕರಣಿ ರಾದ ಸಂತೋಷ್ ಹಾಗೂ ಸ್ಥಳೀಯರಾದ ಮೋಹನ್ ಪೂಜಾರಿ ಕಿಲ್ಲಾರುರವರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಕಂಪಾನಿಯೋ ಮುಖ್ಯಸ್ಥರಾದ ಪ್ರಭಾಕರ ಸಾಲಿಯಾನ್ ಸಿಬಂದಿಗಳಾದ ಕಾವ್ಯ, ಜ್ಯೋತಿ, ದೀವಾಕರ ಸಾಲಿಯಾನ್ ಇವರುಗಳನ್ನು ಶಾಲು ಹಾಕಿ ಫಲ ಪುಸ್ಪವನ್ನಿತ್ತು ಗೌರವಿಸಲಾಯಿತು. ಶಿಬಿರದಲ್ಲಿ ಮುನ್ನೂರಕ್ಕಿಂತಲೂ ಹೆಚ್ಚು ಶಿಭಿರಾರ್ಥಿಗಳು ಭಾಗವಹಿಸಿದ್ದರು. ಸ್ಥಳೀಯರಾದ ಶ್ರೀಮತಿ ಮಲ್ಲಿಕಾರವರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭಗೊಂಡಿತು. ಅತಿಥಿ ಹಾಗೂ ಶಿಭಿರಾರ್ಥಿಗಳನ್ನು ನೇಮಿರಾಜ್ ಕಿಲ್ಲೂರು ಸ್ವಾಗತಿಸಿದರು. ಕೇಶವ ಪಡ್ಕೆಯವರು ಕಾರ್ಯಕ್ರಮ ನಿರೂಪಿಸಿ, ಧನ್ಯವಾದ ನೀಡಿದರು.

Related posts

ವೇಣೂರು: ನಿಟ್ಟಡೆ ಕುಂಭಶ್ರೀ ಶಾಲಾ- ಕಾಲೇಜಿನಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಮುಂಡಾಜೆ: ರಿಕ್ಷಾ-ಪಿಕಪ್ ಡಿಕ್ಕಿ, ಇಬ್ಬರಿಗೆ ಗಂಭೀರ ಗಾಯ

Suddi Udaya

ಭಾರೀ ಮಳೆ : ಪಟ್ರಮೆ ಶಾಂತಿಕಾಯದಲ್ಲಿ ಗುಡ್ಡ ಕುಸಿತ

Suddi Udaya

ಅಳದಂಗಡಿ ಅರಸರಿಂದ ಗಣೇಶ್ ಪೂಜಾರಿ ಬೊಂಟ್ರೋಟ್ಟು ಅವರಿಗೆ ಪಟ್ಟಿ ಪ್ರದಾನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ವೀಲ್ ಚಯರ್ ವಿತರಣೆ

Suddi Udaya

ಶ್ರೀಮತಿ ಮಾಲಿನಿ ಮತ್ತು ರಮಾನಂದ ಗುಡ್ಡಾಜೆ ಇವರ 25ನೇ ವರ್ಷದ ವಿವಾಹ ವಾರ್ಷಿಕೋತ್ಸವ ಸಂಭ್ರಮ

Suddi Udaya
error: Content is protected !!