25.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorizedಗ್ರಾಮಾಂತರ ಸುದ್ದಿ

ಹೆಜ್ಜೇನು ದಾಳಿಯಿಂದ ಮಗುವನ್ನು ರಕ್ಷಿಸಿದ ಮೇಲಂತ ಬೆಟ್ಟು ಗ್ರಾಮ ಪಂಚಾಯತ್ ಸಿಬ್ಬಂದಿ: ಚಂದ್ರವತಿ ಯವರ ಸಮಯ ಪ್ರಜ್ಞೆ ತಾಯಿ ಮಮತೆ ಧೈರ್ಯಕ್ಕೆ ಗ್ರಾಮಸ್ಥರ ಮೆಚ್ಚುಗೆ

ಮೇಲಂತೂ ಬೆಟ್ಟು: ಅ.26 ಇಂದು ಶನಿವಾರ ಸಂಜೆ ಮೇಲಂತ ಬೆಟ್ಟು ಗ್ರಾಮ ಪಂಚಾಯಿತಿ ಬಳಿ ಹೆಜ್ಜೇನು ಜನರ ಮೇಲೆ ದಾಳಿ ಮಾಡಿತು ಜನ ಭಯ ಯಿಂದ ಓಡಿಹೋದರು ಸುತ್ತಲೂ ಇದ್ದಂತ ಮನೆಯವರು ಭೀತಿ ಯಿಂದ ಮನೆಬಾಗಿಲು ಮುಚ್ಚಿದರು.

ಆಗ ತಾನೆ ಸಂತ ತೆರೆಸಾ ಶಾಲೆ ಯ 8ನೇ ತರಗತಿ ವಿದ್ಯಾರ್ಥಿ ತೀರ್ಥೇಶ್ ಮೇಲಂತ ಬೆಟ್ಟು, ಶಾಲೆಯಿಂದ ಮನೆ ಕಡೆ ಬರುತ್ತಿದ್ದು ಇವರ ಮೇಲೆ ತೀವ್ರ ವಾಗಿ ಹೆಜ್ಜೇನು ದಾಳಿ ನಡೆಸಿತು. ಬಾಲಕ ದಾರಿ ತೋರದೆ ಕೆಲ ಮನೆಗಳಿಗೆ ಓಡಿದ ಭಯಭೀತಿಯಿಂದಾಗಿ ಮನೆ ಬಾಗಿಲು ಮುಚ್ಚಿತ್ತು .


ಹೆಜ್ಜೇನು ದಾಳಿಯಿಂದ ನೋವು ಉರಿ ತಾಳಲಾರದೆ ಅತ್ತು ಕರೆದರೂ ರಕ್ಷಣೆಗೆ ಯಾರು ಇಲ್ಲದಾಗ, ಕೊನೆಗೆ ಉಪಾಯ ಇಲ್ಲದೆ ಪಂಚಾಯತ್ ಬಳಿ ಓಡಿದಾಗ , ಪಂಚಾಯತ್ ಲೈಬ್ರೇಯನ್( ಸಿಬ್ಬಂದಿಯಾದ) ಚಂದ್ರವತಿ ಯೋಗೀಶ್ ಪೂಜಾರಿ ಗೇರುಕಟ್ಟೆ ಇವರು ದೇವತೆ ಯಂತೆ ಬಂದು ಮುಚ್ಚಿದ್ದ ಬಾಗಿಲನ್ನು ತೆರೆದು ಮಗುವನ್ನು ಪಂಚಾಯತ್ ಒಳಗೆ ಕರ್ಕೊಂಡು ಹೋದರು. ಆದರೂ ಬೆನ್ನು ಬಿಡದ ಹೆಜ್ಜೇನು ಅಲ್ಲಿಯೂ ದಾಳಿ ಮಾಡಿತು.
‌‌ಮುಂದಕ್ಕೆ ಅಧ್ಯಕ್ಷರ ಕೊಠಡಿಯ ಒಳಗೆ ಹೋಗಿ ಬಾಗಿಲು ಮುಚ್ಚಿ ನೋಡಿದಾಗ ಅಲ್ಲಿಯೂ ಕೂಡ ಹೆಜ್ಜೇನು ಇದ್ದು ದಾಳಿ ಮಾಡಿತು.

ಮತ್ತೆ ಚಂದ್ರವತಿಯವರು ಹಿಡುಸುಡಿ ಸಹಾಯದಿಂದ ಬಹಳಷ್ಟು ಸಂಖ್ಯೆ ಯಲ್ಲಿ ಇದ್ದ ಹೆಜ್ಜೇನುವನ್ನು ಕೊಂದು ಬಾಲಕನ ಬಟ್ಟೆ ತೆಗೆಸಿ ಹೆಜ್ಜೇನು ಮುಳ್ಳನ್ನು ತುರ್ತಾಗಿ ತೆಗೆದು ಮನೆಯವರಿಗೆ ಸುದ್ದಿ ಮುಟ್ಟಿಸಿದರು. ನಂತರ ಬಾಲಕನನ್ನು ಆಸ್ಪತ್ರೆ ಗೆ ಸೇರಿಸಿ ಸೂಕ್ತ ಚಿಕಿತ್ಸೆ ನೀಡಲಾಯಿತು. ಬಾಲಕ ಈಗ ಅರೋಗ್ಯ ದಿಂದ ಇದ್ದು ಚೇತರಿಸಿ ಕೊಳ್ಳು ತ್ತಿದ್ದಾನೆ.
ಪಂಚಾಂಯತ್ ನೌಕರ ರಾದ ಚಂದ್ರವತಿ ಯವರ ಸಮಯ ಪ್ರಜ್ಞೆ ತಾಯಿ ಮಮತೆ ಧೈರ್ಯ ವು ಗ್ರಾಮಸ್ಥರ ಪ್ರೀತಿ ಗೆ ಪಾತ್ರವಾಯಿತು

Related posts

ಜೂ.30: ನಿಮ್ಮ ಸೌಂದರ್ಯದ ರಾಯಭಾರಿ “ನೂರಾ ಗೋಲ್ಡ್ & ಡೈಮಂಡ್ಸ್” ಬೆಳ್ತಂಗಡಿಯಲ್ಲಿ ಶುಭಾರಂಭ

Suddi Udaya

ಗುರುವಾಯನಕೆರೆ: ನವರಾತ್ರಿ, ದೀಪಾವಳಿ ಹಬ್ಬದ ಪ್ರಯುಕ್ತ ಶ್ರೀ ಶಿವಂ ಟೆಕ್ಸ್‌ಟೈಲ್ಸ್ & ರೆಡಿಮೇಡ್ಸ್‌ನಲ್ಲಿ ಡಿಸ್ಕೌಂಟ್ ಆಫರ್

Suddi Udaya

ಬಂಟರ ಯಾನೆ ನಾಡವರ ಮಾತೃ ಸಂಘ ಸಂಚಾಲಕರಾಗಿ ಜಯರಾಮ ಭಂಡಾರಿ ಹಾಗೂ ಸಹ ಸಂಚಾಲಕರಾಗಿ ಕಿರಣ್ ಕುಮಾರ್ ಶೆಟ್ಟಿ : ನಾಮ ನಿರ್ದೇಶನ ನಿರ್ದೇಶಕರಾಗಿ ಜಯಂತ ಶೆಟ್ಟಿ ಹಾಗೂ ಅಜಿತ್ ಜಿ. ಶೆಟ್ಟಿ, ಪುಷ್ಪರಾಜ್ ಶೆಟ್ಟಿ ಆಯ್ಕೆ

Suddi Udaya

ಬರೆಂಗಾಯ : ಮುಳಂಪಾಯ ಎಂಬಲ್ಲಿ ಏರ್‌ಟೆಲ್ ನೆಟ್ ವರ್ಕ್ ಸಮಸ್ಯೆ: ಬಗೆಹರಿಸುವಂತೆ ಸ್ಥಳೀಯರ ಆಗ್ರಹ

Suddi Udaya

ಉಜಿರೆ ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೇವಸ್ಥಾನ ಶ್ರೀ ಕ್ಷೇತ್ರ ಎರ್ನೋಡಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಉದಯ್ ಪೂಜಾರಿಯವರಿಗೆ ಸಾಂತ್ವಾನ ನಿಧಿ ಹಸ್ತಾಂತರ

Suddi Udaya
error: Content is protected !!