September 6, 2026
Uncategorizedಗ್ರಾಮಾಂತರ ಸುದ್ದಿ

ಹೆಜ್ಜೇನು ದಾಳಿಯಿಂದ ಮಗುವನ್ನು ರಕ್ಷಿಸಿದ ಮೇಲಂತ ಬೆಟ್ಟು ಗ್ರಾಮ ಪಂಚಾಯತ್ ಸಿಬ್ಬಂದಿ: ಚಂದ್ರವತಿ ಯವರ ಸಮಯ ಪ್ರಜ್ಞೆ ತಾಯಿ ಮಮತೆ ಧೈರ್ಯಕ್ಕೆ ಗ್ರಾಮಸ್ಥರ ಮೆಚ್ಚುಗೆ

ಮೇಲಂತೂ ಬೆಟ್ಟು: ಅ.26 ಇಂದು ಶನಿವಾರ ಸಂಜೆ ಮೇಲಂತ ಬೆಟ್ಟು ಗ್ರಾಮ ಪಂಚಾಯಿತಿ ಬಳಿ ಹೆಜ್ಜೇನು ಜನರ ಮೇಲೆ ದಾಳಿ ಮಾಡಿತು ಜನ ಭಯ ಯಿಂದ ಓಡಿಹೋದರು ಸುತ್ತಲೂ ಇದ್ದಂತ ಮನೆಯವರು ಭೀತಿ ಯಿಂದ ಮನೆಬಾಗಿಲು ಮುಚ್ಚಿದರು.

ಆಗ ತಾನೆ ಸಂತ ತೆರೆಸಾ ಶಾಲೆ ಯ 8ನೇ ತರಗತಿ ವಿದ್ಯಾರ್ಥಿ ತೀರ್ಥೇಶ್ ಮೇಲಂತ ಬೆಟ್ಟು, ಶಾಲೆಯಿಂದ ಮನೆ ಕಡೆ ಬರುತ್ತಿದ್ದು ಇವರ ಮೇಲೆ ತೀವ್ರ ವಾಗಿ ಹೆಜ್ಜೇನು ದಾಳಿ ನಡೆಸಿತು. ಬಾಲಕ ದಾರಿ ತೋರದೆ ಕೆಲ ಮನೆಗಳಿಗೆ ಓಡಿದ ಭಯಭೀತಿಯಿಂದಾಗಿ ಮನೆ ಬಾಗಿಲು ಮುಚ್ಚಿತ್ತು .


ಹೆಜ್ಜೇನು ದಾಳಿಯಿಂದ ನೋವು ಉರಿ ತಾಳಲಾರದೆ ಅತ್ತು ಕರೆದರೂ ರಕ್ಷಣೆಗೆ ಯಾರು ಇಲ್ಲದಾಗ, ಕೊನೆಗೆ ಉಪಾಯ ಇಲ್ಲದೆ ಪಂಚಾಯತ್ ಬಳಿ ಓಡಿದಾಗ , ಪಂಚಾಯತ್ ಲೈಬ್ರೇಯನ್( ಸಿಬ್ಬಂದಿಯಾದ) ಚಂದ್ರವತಿ ಯೋಗೀಶ್ ಪೂಜಾರಿ ಗೇರುಕಟ್ಟೆ ಇವರು ದೇವತೆ ಯಂತೆ ಬಂದು ಮುಚ್ಚಿದ್ದ ಬಾಗಿಲನ್ನು ತೆರೆದು ಮಗುವನ್ನು ಪಂಚಾಯತ್ ಒಳಗೆ ಕರ್ಕೊಂಡು ಹೋದರು. ಆದರೂ ಬೆನ್ನು ಬಿಡದ ಹೆಜ್ಜೇನು ಅಲ್ಲಿಯೂ ದಾಳಿ ಮಾಡಿತು.
‌‌ಮುಂದಕ್ಕೆ ಅಧ್ಯಕ್ಷರ ಕೊಠಡಿಯ ಒಳಗೆ ಹೋಗಿ ಬಾಗಿಲು ಮುಚ್ಚಿ ನೋಡಿದಾಗ ಅಲ್ಲಿಯೂ ಕೂಡ ಹೆಜ್ಜೇನು ಇದ್ದು ದಾಳಿ ಮಾಡಿತು.

ಮತ್ತೆ ಚಂದ್ರವತಿಯವರು ಹಿಡುಸುಡಿ ಸಹಾಯದಿಂದ ಬಹಳಷ್ಟು ಸಂಖ್ಯೆ ಯಲ್ಲಿ ಇದ್ದ ಹೆಜ್ಜೇನುವನ್ನು ಕೊಂದು ಬಾಲಕನ ಬಟ್ಟೆ ತೆಗೆಸಿ ಹೆಜ್ಜೇನು ಮುಳ್ಳನ್ನು ತುರ್ತಾಗಿ ತೆಗೆದು ಮನೆಯವರಿಗೆ ಸುದ್ದಿ ಮುಟ್ಟಿಸಿದರು. ನಂತರ ಬಾಲಕನನ್ನು ಆಸ್ಪತ್ರೆ ಗೆ ಸೇರಿಸಿ ಸೂಕ್ತ ಚಿಕಿತ್ಸೆ ನೀಡಲಾಯಿತು. ಬಾಲಕ ಈಗ ಅರೋಗ್ಯ ದಿಂದ ಇದ್ದು ಚೇತರಿಸಿ ಕೊಳ್ಳು ತ್ತಿದ್ದಾನೆ.
ಪಂಚಾಂಯತ್ ನೌಕರ ರಾದ ಚಂದ್ರವತಿ ಯವರ ಸಮಯ ಪ್ರಜ್ಞೆ ತಾಯಿ ಮಮತೆ ಧೈರ್ಯ ವು ಗ್ರಾಮಸ್ಥರ ಪ್ರೀತಿ ಗೆ ಪಾತ್ರವಾಯಿತು

Related posts

ಕುಕ್ಕೇಡಿ: ಸುಡುಮದ್ದು ಸ್ಫೋಟ ಪ್ರಕರಣ: ಮತ್ತೋರ್ವ ಆರೋಪಿ ಬಂಧನ: ಬಂಧಿತ ಮೂವರಿಗೂ ಫೆ.17ರವರೆಗೆ ನ್ಯಾಯಾಂಗ ಬಂಧನ

Suddi Udaya

ಶ್ರೀ ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರನ್ನು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ಭೇಟಿ

Suddi Udaya

ಬಂಗಾಡಿ ಶಾಲೆಯ ಶಿಕ್ಷಕ ಅಮಿತಾನಂದ ಹೆಗ್ಡೆ ರವರಿಗೆ ರಾಷ್ಟ್ರಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

Suddi Udaya

ಅರಣ್ಯ ಇಲಾಖೆ ಬುಡಕಟ್ಟು ಸಮುದಾಯದ ಜೊತೆಗೆ ಸರ್ಕಾರವನ್ನು ಕೂಡ ವಂಚಿಸುತ್ತಿದೆ : ಹರೀಶ್ ಎಳನೀರ್

Suddi Udaya

ಧರ್ಮಸ್ಥಳ ಬುರುಡೆ ಪ್ರಕರಣದ ಎಸ್.ಐ.ಟಿ ತನಿಖೆ:ಸತ್ಯದ ಅಗ್ನಿ ಪರೀಕ್ಷೆ ಅಗುತ್ತದೆ, ಸತ್ಯ ಹೊರಗೆ ಬರುತ್ತದೆ ಎಂದು ಕಾಯುತ್ತಿರುವ ಕ್ಷೇತ್ರದ ಭಕ್ತರು ಹಾಗೂ ಸಾರ್ವಜನಿಕರು: ಪತ್ರಿಕಾಗೋಷ್ಠಿಯಲ್ಲಿ ಧರ್ಮಸ್ಥಳ ಗ್ರಾ.ಪಂ ಉಪಾಧ್ಯಕ್ಷ ಶ್ರೀನಿವಾಸ ರಾವ್ ಆಗ್ರಹ

Suddi Udaya

ಉಜಿರೆ: ಪೆರ್ಲ ನಿವಾಸಿ ಕೃಷ್ಣಪ್ಪ ಪೂಜಾರಿ ನಿಧನ

Suddi Udaya
error: Content is protected !!