23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪದವಿ ಪ್ರದಾನ ಸಮಾರಂಭ

ಉಜಿರೆ: ಇಲ್ಲಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ 2023- 24ನೇ ಸಾಲಿನ ಪದವಿ ಪ್ರದಾನ ಸಮಾರಂಭವು ಅ.26ರಂದು ಇಂದ್ರಪ್ರಸ್ಥ ಸಭಾಂಗಣದಲ್ಲಿ ನಡೆಯಿತು.

ಎಸ್‌ಡಿಎಂ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷರಾದ ಡಾ|| ಡಿ. ವೀರೇಂದ್ರ ಹೆಗ್ಗಡೆ ಯವರು ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ, ಮಾಹಿತಿಗಳನ್ನು ತಿಳಿದುಕೊಂಡಾಗ ಮಾತ್ರ ವ್ಯಕ್ತಿತ್ವವನ್ನು ರೂಪಿಸುವುದಕ್ಕೆ ಸಾಧ್ಯ. ಮುಂದಿನ ದಿನಗಳಲ್ಲಿ ಪ್ರತಿಯೊಬ್ಬರೂ ಕೂಡ ವೇದಿಕೆಯಲ್ಲಿ ಕೂರುವಂತಹ ಖ್ಯಾತಿಯನ್ನು ಪಡೆಯಲಿ ಎಂದು ಪದವಿಯನ್ನು ಸ್ವೀಕರಿಸಿದ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.

ಮುಖ್ಯ ಅಭ್ಯಾಗತರಾಗಿ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಉಪಾಧ್ಯಕ್ಷರು ಮತ್ತು ಗುಲ್ಬರ್ಗಾ ವಿಶ್ವವಿದ್ಯಾಲಯದ ಮಾಜಿ ಉಪಕುಲಪತಿ ಪ್ರೊ. ಎಸ್ ಆರ್. ನಿರಂಜನ ಮತ್ತು ಮಂಗಳೂರು ವಿಶ್ವವಿದ್ಯಾನಿಲಯದ ಉಪಕುಲಪತಿ ಪ್ರೊ. ಪಿ.ಎಲ್. ಧರ್ಮ ಭಾಗವಹಿಸಿ ಶುಭ ಹಾರೈಸಿದರು.

ವೇದಿಕೆಯಲ್ಲಿ ಎಸ್‌ಡಿಎಂ ಎಜ್ಯುಕೇಶನ್ ಸೊಸೈಟಿಯ ಕಾರ್ಯದರ್ಶಿಗಳಾದ ಡಿ. ಹರ್ಷೇಂದ್ರ ಕುಮಾರ್, ಡಾ. ಸತೀಶ್ಚಂದ್ರ ಎಸ್., ಎಸ್‌ಡಿಎಂ ಎಜ್ಯುಕೇಶನ್ ಸೊಸೈಟಿಯ ಉಪಾಧ್ಯಕ್ಷ ಪ್ರೊ. ಎಸ್. ಪ್ರಭಾಕರ್, ಸ್ನಾತಕೋತ್ತರ ಅಧ್ಯಯನದ ಡೀನ್ ಪ್ರೊ. ವಿಶ್ವನಾಥ ಪಿ, ಉಪನ್ಯಾಸಕರಾದ ನಂದ ಕುಮಾರಿ, ಜಿ. ಆರ್. ಭಟ್, ಸವಿತಾ ಕುಮಾರಿ, ಶಕುಂತಲಾ, ಸುವೀರ್ ಜೈನ್ ಉಪಸ್ಥಿತರಿದ್ದರು.

ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಎ. ಕುಮಾರ ಹೆಗ್ಡೆ ಸ್ವಾಗತಿಸಿದರು. ಉಪನ್ಯಾಸಕಿ ಶಲೀಫ ವಂದಿಸಿದರು.

Related posts

ಚಾರ್ಮಾಡಿ : ಬಂಟ್ವಾಳ ಗ್ರಾಮದ ಯುವಕನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಯಲ್ಲಿ ‘ಫೈರ್ ಸೇಫ್ಟಿ ಅಭಿಯಾನ್’ ಕಾರ್ಯಾಗಾರ

Suddi Udaya

ನ.8: ಕಳೆಂಜ ನಡುಜಾರು ಸ.ಕಿ.ಪ್ರಾ. ಶಾಲೆಯಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅರ್ಜುನ್ ಜನ್ಯ ದಂಪತಿ ಭೇಟಿ

Suddi Udaya

ರಾಜ್ಯಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ: ಎಸ್ ಡಿ ಎಂ ಕಾಲೇಜಿನ ವಿದ್ಯಾರ್ಥಿನಿ ನಿತ್ಯಶ್ರೀ. ವಿ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಬಂಗಾಡಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಬೆದ್ರಬೆಟ್ಟು ಮರಿಯಾಂಬಿಕ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!