38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮಿನಿ-ಅನ್ವೇಷಣಾ-2024

ಉಜಿರೆ: ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜು ಮತ್ತು ಅಗಸ್ತ್ಯ ಅಂತರಾಷ್ಟ್ರೀಯ ಫೌಂಡೇಶನ್, ಬೆಂಗಳೂರು ಸಹಯೋಗದಲ್ಲಿ “ಮಿನಿ-ಅನ್ವೇಷಣಾ-2024 Present your Innovative Ideas”  ಕಾರ್ಯಕ್ರಮವನ್ನು ಅ.18 ರಂದು ಕಾಲೇಜಿನಲ್ಲಿ ಆಯೋಜಿಸಲಾಗಿತ್ತು.

ಈ ಅನ್ವೇಷಣಾ ಕಾರ್ಯಕ್ರಮದಲ್ಲಿ ಒಟ್ಟು ೧೮೦ ವಿದ್ಯಾರ್ಥಿಗಳು 45 ತಂಡಗಳಾಗಿ ಭಾಗವಹಿಸಿದರು. ವಿವಿಧ ಸಮಸ್ಯೆಗಳಿಗೆ ತಂತ್ರಜ್ಞಾನದ ಅಳವಡಿಕೆ ಮೂಲಕ ಪರಿಹಾರ ಕಂಡುಕೊಳ್ಳುವಲ್ಲಿ ವಿದ್ಯಾರ್ಥಿಗಳು ತಮ್ಮ ನವೀನ ಕಲ್ಪನೆಗಳನ್ನು ಪ್ರಸ್ತುತಪಡಿಸಿದರು. ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಪ್ರಾಂಶುಪಾಲರಾದ ಡಾ. ಆಶೋಕ್ ಕುಮಾರ್, ಇಲೆಕ್ಟ್ರಾನಿಕ್ಸ್ ವಿಭಾಗ ಮುಖ್ಯಸ್ಥರಾದ ಡಾ. ಮಧುಸೂದನ ಮತ್ತು ನೇಮಕಾತಿ ಅಧಿಕಾರಿ ಡಾ. ಸುಬ್ರಮಣ್ಯ ತೋಳ್ಪಾಡಿತ್ತಾಯ ಉಪಸ್ಥಿತರಿದ್ದರು.

ಅಗಸ್ತ್ಯ ಫೌಂಡೇಶನ್‌ನ ಭಾಸ್ಕರ್, ಪ್ರೊಫೆಸರ್ ಡಾ. ಸಂದೀಪ್, MITE ಮೂಡಬಿದ್ರಿಯ ಅಸೋಸಿಯೇಟ್ ಪ್ರೊಫೆಸರ್ ಡಾ. ಶಿವರಾಮ್, ಕಾರ್ಯಕ್ರಮ ಸಂಯೋಜಕ ಡಾ. ಮೋಹನ್ ನಾಯ್ಕ ತೀರ್ಪುಗಾರರಾಗಿ ಸಹಕರಿಸಿದರು. ವಿಜೇತ ತಂಡಗಳಿಗೆ ಪ್ರಾಂಶುಪಾಲರು ನಗದು ಬಹುಮಾನ ವಿತರಿಸಿದರು.

ಡಾ. ಆಶೋಕ್ ಕುಮಾರ್
ಪ್ರಾಂಶುಪಾಲರು

Related posts

ಉರುವಾಲು: ಶ್ರೀ ಮಹಮ್ಮಾಯಿ ಮರಾಟಿ ಸಮಾಜ ಸೇವಾ ಸಂಘದ ವಾರ್ಷಿಕ ಮಹಾಸಭೆ

Suddi Udaya

ಕಳೆಂಜ: ಸ.ನಂ 309 ರಲ್ಲಿ ವಾಸಿಸುತ್ತಿರುವ ಕುಟುಂಬಗಳಿಗೆ ಹಕ್ಕು ಪತ್ರನೀಡುವ ಸಲುವಾಗಿ ಜಮೀನಿನ ಜಂಟಿ ಸರ್ವೆ ಕಾರ್ಯವನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ಕೆ.ಎಸ್.ಎಂ.ಸಿ.ಎ ನೇತೃತ್ವದಲ್ಲಿ ವಿ.ಪ. ಸದಸ್ಯ ಐವನ್ ಡಿಸೋಜ ರವರಿಗೆ ಮನವಿ

Suddi Udaya

ಜೆಸಿಐ ಭಾರತದ ರಾಷ್ಟ್ರೀಯ ಅಧ್ಯಕ್ಷ ಸಿ.ಆರ್ ರಿಕೇಶ್ ಶರ್ಮಾ ಬಳಂಜ ಶಾಲೆಗೆ ಭೇಟಿ, ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ಬಳಂಜ ಶಾಲೆಗೆ ರೂ.1ಲಕ್ಷ ಮೊತ್ತದ ಯೋಜನೆಗಳ ಹಸ್ತಾಂತರ

Suddi Udaya

ಬಳೆಂಜ: ಕಾಪಿನಡ್ಕದಲ್ಲಿ ಪ್ರವಾಸಿಗರ ಕಾರು ಧರೆಗೆ ಡಿಕ್ಕಿ; ಚಾಲಕ ಸೇರಿದಂತೆ ಪ್ರಯಾಣಿಕರಿಗೆ ಗಾಯ

Suddi Udaya

ಶ್ರೀರಾಮ ಕ್ಷೇತ್ರದ ಪೀಠಾಧೀಶ ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ ವೃತ ಸಮಾರೋಪ ಸಮಾರಂಭ-ಸೀಮೋಲ್ಲಂಘನ

Suddi Udaya

ಧರ್ಮಸ್ಥಳ ಬಿಜೆಪಿ ಶಕ್ತಿ ಕೇಂದ್ರದ ಅಭ್ಯಾಸವರ್ಗ

Suddi Udaya
error: Content is protected !!