25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮಿನಿ-ಅನ್ವೇಷಣಾ-2024

ಉಜಿರೆ: ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜು ಮತ್ತು ಅಗಸ್ತ್ಯ ಅಂತರಾಷ್ಟ್ರೀಯ ಫೌಂಡೇಶನ್, ಬೆಂಗಳೂರು ಸಹಯೋಗದಲ್ಲಿ “ಮಿನಿ-ಅನ್ವೇಷಣಾ-2024 Present your Innovative Ideas”  ಕಾರ್ಯಕ್ರಮವನ್ನು ಅ.18 ರಂದು ಕಾಲೇಜಿನಲ್ಲಿ ಆಯೋಜಿಸಲಾಗಿತ್ತು.

ಈ ಅನ್ವೇಷಣಾ ಕಾರ್ಯಕ್ರಮದಲ್ಲಿ ಒಟ್ಟು ೧೮೦ ವಿದ್ಯಾರ್ಥಿಗಳು 45 ತಂಡಗಳಾಗಿ ಭಾಗವಹಿಸಿದರು. ವಿವಿಧ ಸಮಸ್ಯೆಗಳಿಗೆ ತಂತ್ರಜ್ಞಾನದ ಅಳವಡಿಕೆ ಮೂಲಕ ಪರಿಹಾರ ಕಂಡುಕೊಳ್ಳುವಲ್ಲಿ ವಿದ್ಯಾರ್ಥಿಗಳು ತಮ್ಮ ನವೀನ ಕಲ್ಪನೆಗಳನ್ನು ಪ್ರಸ್ತುತಪಡಿಸಿದರು. ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಪ್ರಾಂಶುಪಾಲರಾದ ಡಾ. ಆಶೋಕ್ ಕುಮಾರ್, ಇಲೆಕ್ಟ್ರಾನಿಕ್ಸ್ ವಿಭಾಗ ಮುಖ್ಯಸ್ಥರಾದ ಡಾ. ಮಧುಸೂದನ ಮತ್ತು ನೇಮಕಾತಿ ಅಧಿಕಾರಿ ಡಾ. ಸುಬ್ರಮಣ್ಯ ತೋಳ್ಪಾಡಿತ್ತಾಯ ಉಪಸ್ಥಿತರಿದ್ದರು.

ಅಗಸ್ತ್ಯ ಫೌಂಡೇಶನ್‌ನ ಭಾಸ್ಕರ್, ಪ್ರೊಫೆಸರ್ ಡಾ. ಸಂದೀಪ್, MITE ಮೂಡಬಿದ್ರಿಯ ಅಸೋಸಿಯೇಟ್ ಪ್ರೊಫೆಸರ್ ಡಾ. ಶಿವರಾಮ್, ಕಾರ್ಯಕ್ರಮ ಸಂಯೋಜಕ ಡಾ. ಮೋಹನ್ ನಾಯ್ಕ ತೀರ್ಪುಗಾರರಾಗಿ ಸಹಕರಿಸಿದರು. ವಿಜೇತ ತಂಡಗಳಿಗೆ ಪ್ರಾಂಶುಪಾಲರು ನಗದು ಬಹುಮಾನ ವಿತರಿಸಿದರು.

ಡಾ. ಆಶೋಕ್ ಕುಮಾರ್
ಪ್ರಾಂಶುಪಾಲರು

Related posts

ಗುಂಡೂರಿ: ಅವಾಚ್ಯ ಶಬ್ದಗಳಿಂದ ನಿಂದನೆ, ಹಲ್ಲೆ ಆರೋಪ: ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಮಿತ್ತಬಾಗಿಲು:ಗ್ರಾಮ ಪಂಚಾಯತ್ ಆರೋಗ್ಯ ಅಮೃತ ಅಭಿಯಾನ ಕಾರ್ಯಕ್ರಮ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ಮಾಜಿ ಸಚಿವ ಸುರೇಶ್ ಕುಮಾರ್ ಭೇಟಿ

Suddi Udaya

ಧರ್ಮಸ್ಥಳವನ್ನು ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ನಗರವನ್ನಾಗಿ ಅನುಷ್ಠಾನಗೊಳಿಸುವ ಬಗ್ಗೆ ಸಮಾಲೋಚನ ಸಭೆ

Suddi Udaya

ದ್ವಿತೀಯ ಪಿ.ಯು.ಸಿ ಫಲಿತಾಂಶ: ಬೆಳ್ತಂಗಡಿ ಸಮಾಜ ಕಲ್ಯಾಣ ಇಲಾಖೆಯ ಪರಿಶಿಷ್ಟ ಜಾತಿಯ ಬಾಲಕ-ಬಾಲಕಿಯರ ವಿದ್ಯಾರ್ಥಿನಿಲಯಕ್ಕೆ ಶೇ.100 ಫಲಿತಾಂಶ

Suddi Udaya

ಕೊಯ್ಯೂರು: ಸೋಮಾವತಿ ನದಿ ಕಿನಾರೆಯಿಂದ ಅಕ್ರಮ ಮರಳು ಸಾಗಟ: ಬೆಳ್ತಂಗಡಿ ಪೊಲೀಸರಿಂದ ದಾಳಿ: ಆರೋಪಿಗಳ ಸಹಿತ ಸ್ಥಳದಲ್ಲಿದ್ದ ರೂ. 23.56 ಲಕ್ಷ ಮೌಲ್ಯದ ವಾಹನ ಹಾಗೂ ಸೊತ್ತುಗಳ ವಶ

Suddi Udaya
error: Content is protected !!