April 2, 2025
ಗ್ರಾಮಾಂತರ ಸುದ್ದಿ

ಮಿತ್ತಬಾಗಿಲು:‌ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ

ಮಿತ್ತಬಾಗಿಲು: ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ(ಶ್ರೀ ದುರ್ಗಾದೇವಿ) ದೇವಸ್ಥಾನ ಮಿತ್ತ ಬಾಗಿಲು ಮತ್ತು ಕಂಪಾನಿ ಯೋ ನೆಮ್ಮದಿ ವೆಲ್ ನೆಸ್ಸ್ ಸೆಂಟರ್ ಪುತ್ತೂರು ಇದರ ಸಹಯೋಗದಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರವು ದೇವಸ್ಥಾನದ ಕಲ್ಯಾಣ ಮಂಟಪದಲ್ಲಿ ಹದಿನೈದು ದಿನಗಳ ಕಾಲ ನಡೆಯಿತು.

ಕೊನೆಯ ದಿನವಾದ ಸಂಸ್ಥೆಯ ಮುಖ್ಯಸ್ಥ ಹಾಗೂ ಸಿಬಂದಿ ವರ್ಗದವರನ್ನು ಗೌರವಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಸಭಾಧ್ಯಕ್ಷರಾಗಿ ದೇವಾಲಯದ ಆಡಳಿತ ಧಿಕಾರಿಯವರಾದ ಮೋಹನ್ ಬಂಗೇರಾರವರು ವಹಿಸಿದ್ದು, ಮುಖ್ಯ ಅತಿಥಿಗಳಾಗಿ ಮಿತ್ತ ಬಾಗಿಲು ಗ್ರಾಮದ ಗ್ರಾಮಕರಣಿ ರಾದ ಸಂತೋಷ್ ಹಾಗೂ ಸ್ಥಳೀಯರಾದ ಮೋಹನ್ ಪೂಜಾರಿ ಕಿಲ್ಲಾರುರವರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಕಂಪಾನಿಯೋ ಮುಖ್ಯಸ್ಥರಾದ ಪ್ರಭಾಕರ ಸಾಲಿಯಾನ್ ಸಿಬಂದಿಗಳಾದ ಕಾವ್ಯ, ಜ್ಯೋತಿ, ದೀವಾಕರ ಸಾಲಿಯಾನ್ ಇವರುಗಳನ್ನು ಶಾಲು ಹಾಕಿ ಫಲ ಪುಸ್ಪವನ್ನಿತ್ತು ಗೌರವಿಸಲಾಯಿತು. ಶಿಬಿರದಲ್ಲಿ ಮುನ್ನೂರಕ್ಕಿಂತಲೂ ಹೆಚ್ಚು ಶಿಭಿರಾರ್ಥಿಗಳು ಭಾಗವಹಿಸಿದ್ದರು. ಸ್ಥಳೀಯರಾದ ಶ್ರೀಮತಿ ಮಲ್ಲಿಕಾರವರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭಗೊಂಡಿತು. ಅತಿಥಿ ಹಾಗೂ ಶಿಭಿರಾರ್ಥಿಗಳನ್ನು ನೇಮಿರಾಜ್ ಕಿಲ್ಲೂರು ಸ್ವಾಗತಿಸಿದರು. ಕೇಶವ ಪಡ್ಕೆಯವರು ಕಾರ್ಯಕ್ರಮ ನಿರೂಪಿಸಿ, ಧನ್ಯವಾದ ನೀಡಿದರು.

Related posts

ಲಾಯಿಲ: ಕುಂಟಿನಿ ಮುಹಿಯ್ಯುದ್ಧೀನ್ ಅರಬಿಕ್ ಮದರಸ ನೂತನ ಕಟ್ಟಡ ಉದ್ಘಾಟನೆ

Suddi Udaya

ನಡ: ಅರಣ್ಯ ಇಲಾಖೆ, ಗ್ರಾ.ಪಂ. ನಡ ಮತ್ತು ವಿಪತ್ತು ತಂಡದ ವತಿಯಿಂದ ಗಿಡ ನೆಡುವ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ನಿತ್ಯಾನಂದ ನಾವರರವರು ಒಂದೇ ದಿನದಲ್ಲಿ112 ಜೀವ ವಿಮಾ ಪಾಲಿಸಿ ಮಾಡಿ ಒನ್ ಡೇ ಸೆಂಚುರಿಯನ್ ಸಾಧನೆ

Suddi Udaya

ಕೆಎಸ್‌ಆರ್‌ಟಿಸಿ ಧರ್ಮಸ್ಥಳ -ಮಂಗಳೂರು ನಡುವೆ ನಾಲ್ಕು ‘ಸೂಪರ್‌ಫಾಸ್ಟ್’ – ಬಸ್ಸು ಸಂಚಾರ ಪ್ರಾರಂಭ

Suddi Udaya

ಕಾನರ್ಪ ಪುರುಷರ ಬಳಗದ ಪುರುಷರ ರಾಶಿ ಪೂಜೆ

Suddi Udaya

ನೆಟ್ ಬಾಲ್ ಸೀನಿಯರ್ ನ್ಯಾಷನಲ್ ಚಾಂಪಿಯನ್ ಶಿಪ್ ಪಂದ್ಯಾಟ: ಎಸ್ ಡಿ ಎಂ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ದ್ವಿತೀಯ ಸ್ಥಾನ

Suddi Udaya
error: Content is protected !!