25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿ

ಮಿತ್ತಬಾಗಿಲು:‌ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ

ಮಿತ್ತಬಾಗಿಲು: ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ(ಶ್ರೀ ದುರ್ಗಾದೇವಿ) ದೇವಸ್ಥಾನ ಮಿತ್ತ ಬಾಗಿಲು ಮತ್ತು ಕಂಪಾನಿ ಯೋ ನೆಮ್ಮದಿ ವೆಲ್ ನೆಸ್ಸ್ ಸೆಂಟರ್ ಪುತ್ತೂರು ಇದರ ಸಹಯೋಗದಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರವು ದೇವಸ್ಥಾನದ ಕಲ್ಯಾಣ ಮಂಟಪದಲ್ಲಿ ಹದಿನೈದು ದಿನಗಳ ಕಾಲ ನಡೆಯಿತು.

ಕೊನೆಯ ದಿನವಾದ ಸಂಸ್ಥೆಯ ಮುಖ್ಯಸ್ಥ ಹಾಗೂ ಸಿಬಂದಿ ವರ್ಗದವರನ್ನು ಗೌರವಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಸಭಾಧ್ಯಕ್ಷರಾಗಿ ದೇವಾಲಯದ ಆಡಳಿತ ಧಿಕಾರಿಯವರಾದ ಮೋಹನ್ ಬಂಗೇರಾರವರು ವಹಿಸಿದ್ದು, ಮುಖ್ಯ ಅತಿಥಿಗಳಾಗಿ ಮಿತ್ತ ಬಾಗಿಲು ಗ್ರಾಮದ ಗ್ರಾಮಕರಣಿ ರಾದ ಸಂತೋಷ್ ಹಾಗೂ ಸ್ಥಳೀಯರಾದ ಮೋಹನ್ ಪೂಜಾರಿ ಕಿಲ್ಲಾರುರವರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಕಂಪಾನಿಯೋ ಮುಖ್ಯಸ್ಥರಾದ ಪ್ರಭಾಕರ ಸಾಲಿಯಾನ್ ಸಿಬಂದಿಗಳಾದ ಕಾವ್ಯ, ಜ್ಯೋತಿ, ದೀವಾಕರ ಸಾಲಿಯಾನ್ ಇವರುಗಳನ್ನು ಶಾಲು ಹಾಕಿ ಫಲ ಪುಸ್ಪವನ್ನಿತ್ತು ಗೌರವಿಸಲಾಯಿತು. ಶಿಬಿರದಲ್ಲಿ ಮುನ್ನೂರಕ್ಕಿಂತಲೂ ಹೆಚ್ಚು ಶಿಭಿರಾರ್ಥಿಗಳು ಭಾಗವಹಿಸಿದ್ದರು. ಸ್ಥಳೀಯರಾದ ಶ್ರೀಮತಿ ಮಲ್ಲಿಕಾರವರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭಗೊಂಡಿತು. ಅತಿಥಿ ಹಾಗೂ ಶಿಭಿರಾರ್ಥಿಗಳನ್ನು ನೇಮಿರಾಜ್ ಕಿಲ್ಲೂರು ಸ್ವಾಗತಿಸಿದರು. ಕೇಶವ ಪಡ್ಕೆಯವರು ಕಾರ್ಯಕ್ರಮ ನಿರೂಪಿಸಿ, ಧನ್ಯವಾದ ನೀಡಿದರು.

Related posts

ತುಳು ಶಿವಳ್ಳಿ ಸಭಾ: ದಶಮಾನೋತ್ಸವ ಆಮಂತ್ರಣ ಪತ್ರ ಬಿಡುಗಡೆ

Suddi Udaya

ಉಜಿರೆ ಎಸ್ ಡಿ.ಎಂ.ಕಾಲೇಜು ಎನ್.ಎಸ್.ಎಸ್. ಘಟಕಕ್ಕೆ ರಾಜ್ಯ ಪ್ರಶಸ್ತಿ

Suddi Udaya

ಉಜಿರೆ: ದೊಂಪದಪಲ್ಕೆ ಸ.ಹಿ.ಪ್ರಾ. ಶಾಲೆಯಲ್ಲಿ ಎಸ್.ಡಿ.ಎಮ್.ಸಿ ರಚನೆ

Suddi Udaya

ಕುವೆಟ್ಟು :ಶ್ರೀ ಗುರುನಾರಾಯಣ‌ ಸ್ವಾಮಿ ಸೇವಾ‌ ಸಂಘ ಯುವ ಬಿಲ್ಲವ ವೇದಿಕೆ, ಮಹಿಳಾ ಬಿಲ್ಲವ ವೇದಿಕೆ, ಕುವೆಟ್ಟು ಗ್ರಾಮ ಸಮಿತಿಯಿಂದ  ಗುರು ಪೂಜೆ ಹಾಗೂ ಸಾರ್ವಜನಿಕ ಶನೈಶ್ಚರ ಪೂಜೆ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಭಜನಾ ಕಾರ್ಯಕ್ರಮ ಉದ್ಘಾಟನೆ

Suddi Udaya

ಪುದುವೆಟ್ಟು : ಸ್ವರಾಜ್ ನೇಣುಬಿಗಿದು ಆತ್ಮಹತ್ಯೆ

Suddi Udaya
error: Content is protected !!