38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಿತ್ತಬಾಗಿಲು : ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ

ಮಿತ್ತಬಾಗಿಲು: ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ (ಶ್ರೀ ದುರ್ಗಾದೇವಿ) ದೇವಸ್ಥಾನ ಮಿತ್ತಬಾಗಿಲು ಮತ್ತು ಕಂಪಾನಿಯೋ ನೆಮ್ಮದಿ ವೆಲ್ ನೆಸ್ಸ್ ಸೆಂಟರ್ ಪುತ್ತೂರು ಇದರ ಸಹಯೋಗದಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರವು ದೇವಸ್ಥಾನದ ಕಲ್ಯಾಣ ಮಂಟಪದಲ್ಲಿ ಹದಿನೈದು ದಿನಗಳ ಕಾಲ ನಡೆಯಿತು.

ಸಭಾಧ್ಯಕ್ಷತೆಯನ್ನು ದೇವಾಲಯದ ಆಡಳಿತಾಧಿಕಾರಿ ಮೋಹನ್ ಬಂಗೇರರವರು ವಹಿಸಿದ್ದು, ಮುಖ್ಯ ಅತಿಥಿಗಳಾಗಿ ಮಿತ್ತಬಾಗಿಲು ಗ್ರಾಮದ ಗ್ರಾಮಕರಣಿರಾದ ಸಂತೋಷ್ ಹಾಗೂ ಸ್ಥಳೀಯರಾದ ಮೋಹನ್ ಪೂಜಾರಿ ಕಿಲ್ಲೂರು ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಕಂಪಾನಿಯೋ ಮುಖ್ಯಸ್ಥರಾದ ಪ್ರಭಾಕರ ಸಾಲಿಯಾನ್, ಸಿಬಂದಿಗಳಾದ ಕಾವ್ಯ, ಜ್ಯೋತಿ, ದಿವಾಕರ ಸಾಲಿಯಾನ್ ಇವರುಗಳನ್ನು ಶಾಲು ಹಾಕಿ ಫಲ ಪುಷ್ಪವನ್ನಿತ್ತು ಗೌರವಿಸಲಾಯಿತು. ಶಿಬಿರದಲ್ಲಿ ಮುನ್ನೂರಕ್ಕಿಂತಲೂ ಹೆಚ್ಚು ಶಿಬಿರಾರ್ಥಿಗಳು ಭಾಗವಹಿಸಿದ್ದರು. ಸ್ಥಳೀಯರಾದ ಶ್ರೀಮತಿ ಮಲ್ಲಿಕಾರವರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭಗೊಂಡಿತು. ಅತಿಥಿ ಹಾಗೂ ಶಿಬಿರಾರ್ಥಿಗಳನ್ನು ನೇಮಿರಾಜ್ ಕಿಲ್ಲೂರು ಸ್ವಾಗತಿಸಿದರು. ಕೇಶವ ಪಡ್ಕೆಯವರು ಕಾರ್ಯಕ್ರಮ ನಿರೂಪಿಸಿ, ಧನ್ಯವಾದವಿತ್ತರು.

Related posts

ಕನ್ನಡದಲ್ಲಿ ಬರಲಿದೆ ದಸ್ಕತ್ ತುಳು ಚಿತ್ರ

Suddi Udaya

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಕ್ರಿಕೆಟ್ ಪಂದ್ಯಾಟದ ಮೂಲಕ ಸಹಾಯನಿಧಿ ಸಂಗ್ರಹಿಸಿದ ಮಾರ್ನಿಂಗ್ ಫ್ರೆಂಡ್ಸ್ ಅನಾರೋಗ್ಯದಿಂದ ಬಳಲುತ್ತಿದ್ದ ಕೀರ್ತನ್ ಚಿಕಿತ್ಸೆಗೆ ರೂ.2.25 ಲಕ್ಷ ಹಸ್ತಾಂತರ

Suddi Udaya

ಬೆಳ್ತಂಗಡಿ: ವಾಯುಮಾಲಿನ್ಯ ನಿಯಂತ್ರಣ ಮಾಸಾಚರಣೆ, ಹೊಗೆ ರಹಿತ ವಾಹನ ನಿರ್ಮಲ ಪರಿಸರದ ಜೀವನ ಬಗ್ಗೆ ಕಾರ್ಯಕ್ರಮ

Suddi Udaya

ಶಿಶಿಲ: ಕಂಚಿನಡ್ಕ ನಿವಾಸಿ ಸುಂದರಿ ನಿಧನ

Suddi Udaya

ಬೆಳ್ತಂಗಡಿ ಕೋಟಕ್ ಲೈಫ್ 3 ನೇ ವರ್ಷದ ಪಾದರ್ಪಣೆಯ ಸಂಭ್ರಮಾಚರಣೆ

Suddi Udaya
error: Content is protected !!