September 6, 2026
ಗ್ರಾಮಾಂತರ ಸುದ್ದಿ

ಮಿತ್ತಬಾಗಿಲು:‌ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ

ಮಿತ್ತಬಾಗಿಲು: ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ(ಶ್ರೀ ದುರ್ಗಾದೇವಿ) ದೇವಸ್ಥಾನ ಮಿತ್ತ ಬಾಗಿಲು ಮತ್ತು ಕಂಪಾನಿ ಯೋ ನೆಮ್ಮದಿ ವೆಲ್ ನೆಸ್ಸ್ ಸೆಂಟರ್ ಪುತ್ತೂರು ಇದರ ಸಹಯೋಗದಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರವು ದೇವಸ್ಥಾನದ ಕಲ್ಯಾಣ ಮಂಟಪದಲ್ಲಿ ಹದಿನೈದು ದಿನಗಳ ಕಾಲ ನಡೆಯಿತು.

ಕೊನೆಯ ದಿನವಾದ ಸಂಸ್ಥೆಯ ಮುಖ್ಯಸ್ಥ ಹಾಗೂ ಸಿಬಂದಿ ವರ್ಗದವರನ್ನು ಗೌರವಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಸಭಾಧ್ಯಕ್ಷರಾಗಿ ದೇವಾಲಯದ ಆಡಳಿತ ಧಿಕಾರಿಯವರಾದ ಮೋಹನ್ ಬಂಗೇರಾರವರು ವಹಿಸಿದ್ದು, ಮುಖ್ಯ ಅತಿಥಿಗಳಾಗಿ ಮಿತ್ತ ಬಾಗಿಲು ಗ್ರಾಮದ ಗ್ರಾಮಕರಣಿ ರಾದ ಸಂತೋಷ್ ಹಾಗೂ ಸ್ಥಳೀಯರಾದ ಮೋಹನ್ ಪೂಜಾರಿ ಕಿಲ್ಲಾರುರವರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಕಂಪಾನಿಯೋ ಮುಖ್ಯಸ್ಥರಾದ ಪ್ರಭಾಕರ ಸಾಲಿಯಾನ್ ಸಿಬಂದಿಗಳಾದ ಕಾವ್ಯ, ಜ್ಯೋತಿ, ದೀವಾಕರ ಸಾಲಿಯಾನ್ ಇವರುಗಳನ್ನು ಶಾಲು ಹಾಕಿ ಫಲ ಪುಸ್ಪವನ್ನಿತ್ತು ಗೌರವಿಸಲಾಯಿತು. ಶಿಬಿರದಲ್ಲಿ ಮುನ್ನೂರಕ್ಕಿಂತಲೂ ಹೆಚ್ಚು ಶಿಭಿರಾರ್ಥಿಗಳು ಭಾಗವಹಿಸಿದ್ದರು. ಸ್ಥಳೀಯರಾದ ಶ್ರೀಮತಿ ಮಲ್ಲಿಕಾರವರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭಗೊಂಡಿತು. ಅತಿಥಿ ಹಾಗೂ ಶಿಭಿರಾರ್ಥಿಗಳನ್ನು ನೇಮಿರಾಜ್ ಕಿಲ್ಲೂರು ಸ್ವಾಗತಿಸಿದರು. ಕೇಶವ ಪಡ್ಕೆಯವರು ಕಾರ್ಯಕ್ರಮ ನಿರೂಪಿಸಿ, ಧನ್ಯವಾದ ನೀಡಿದರು.

Related posts

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಹಿಂದೂ ರುದ್ರಭೂಮಿಗೆ ಸಿಲಿಕಾನ್ ಚೇಂಬರ್ಅಳವಡಿಸಲು ಸಹಾಯಧನದ ಮಂಜೂರಾತಿ ಪತ್ರ ವಿತರಣೆ

Suddi Udaya

ಹೆಚ್‌ಡಿಎಫ್‌ಸಿ ಬ್ಯಾಂಕ್ ಬೆಳ್ತಂಗಡಿ ಶಾಖೆಯಲ್ಲಿ ಸಿಡಿಎಂ ಸೌಲಭ್ಯ ಆರಂಭ

Suddi Udaya

ಬೆಳ್ತಂಗಡಿ ಆಡಳಿತ ಸೌಧದಲ್ಲಿ ಕಾಯಕ ಶರಣರ ಜಯಂತಿ ಆಚರಣೆ

Suddi Udaya

ಬಾರಿಕೆ ವಳಾಲ್ ಬಸದಿಯಲ್ಲಿ ಪುನಃ ಪ್ರತಿಷ್ಠಾ ಮಹೋತ್ಸವ : ಡಾ. ಕೆ. ಜಯಕೀರ್ತಿ ಜೈನ್ ರವರಿಗೆ ಮಠದ ವತಿಯಿಂದ ಗೌರವ

Suddi Udaya

ಎಸ್.ಡಿ.ಎಂ ಇಂಜಿನಿಯರಿಂಗ್ ಕಾಲೇಜಿನ ಅಸಿಸ್ಟೆಂಟ್ ಪ್ರೊಫೆಸರ್ ಪದ್ಮಪ್ರಸಾದ ಅವರಿಗೆ ಪಿಎಚ್.ಡಿ. ಪದವಿ ಪ್ರದಾನ

Suddi Udaya

ಬದ್ಯಾರು ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿಯಿಂದ 5ನೇ ವರ್ಷದ ‘ಕೆಸರ್ದ ಗೊಬ್ಬು’ ಕಾರ್ಯಕ್ರಮ

Suddi Udaya
error: Content is protected !!