25.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorizedಗ್ರಾಮಾಂತರ ಸುದ್ದಿ

ಹೆಜ್ಜೇನು ದಾಳಿಯಿಂದ ಮಗುವನ್ನು ರಕ್ಷಿಸಿದ ಮೇಲಂತ ಬೆಟ್ಟು ಗ್ರಾಮ ಪಂಚಾಯತ್ ಸಿಬ್ಬಂದಿ: ಚಂದ್ರವತಿ ಯವರ ಸಮಯ ಪ್ರಜ್ಞೆ ತಾಯಿ ಮಮತೆ ಧೈರ್ಯಕ್ಕೆ ಗ್ರಾಮಸ್ಥರ ಮೆಚ್ಚುಗೆ

ಮೇಲಂತೂ ಬೆಟ್ಟು: ಅ.26 ಇಂದು ಶನಿವಾರ ಸಂಜೆ ಮೇಲಂತ ಬೆಟ್ಟು ಗ್ರಾಮ ಪಂಚಾಯಿತಿ ಬಳಿ ಹೆಜ್ಜೇನು ಜನರ ಮೇಲೆ ದಾಳಿ ಮಾಡಿತು ಜನ ಭಯ ಯಿಂದ ಓಡಿಹೋದರು ಸುತ್ತಲೂ ಇದ್ದಂತ ಮನೆಯವರು ಭೀತಿ ಯಿಂದ ಮನೆಬಾಗಿಲು ಮುಚ್ಚಿದರು.

ಆಗ ತಾನೆ ಸಂತ ತೆರೆಸಾ ಶಾಲೆ ಯ 8ನೇ ತರಗತಿ ವಿದ್ಯಾರ್ಥಿ ತೀರ್ಥೇಶ್ ಮೇಲಂತ ಬೆಟ್ಟು, ಶಾಲೆಯಿಂದ ಮನೆ ಕಡೆ ಬರುತ್ತಿದ್ದು ಇವರ ಮೇಲೆ ತೀವ್ರ ವಾಗಿ ಹೆಜ್ಜೇನು ದಾಳಿ ನಡೆಸಿತು. ಬಾಲಕ ದಾರಿ ತೋರದೆ ಕೆಲ ಮನೆಗಳಿಗೆ ಓಡಿದ ಭಯಭೀತಿಯಿಂದಾಗಿ ಮನೆ ಬಾಗಿಲು ಮುಚ್ಚಿತ್ತು .


ಹೆಜ್ಜೇನು ದಾಳಿಯಿಂದ ನೋವು ಉರಿ ತಾಳಲಾರದೆ ಅತ್ತು ಕರೆದರೂ ರಕ್ಷಣೆಗೆ ಯಾರು ಇಲ್ಲದಾಗ, ಕೊನೆಗೆ ಉಪಾಯ ಇಲ್ಲದೆ ಪಂಚಾಯತ್ ಬಳಿ ಓಡಿದಾಗ , ಪಂಚಾಯತ್ ಲೈಬ್ರೇಯನ್( ಸಿಬ್ಬಂದಿಯಾದ) ಚಂದ್ರವತಿ ಯೋಗೀಶ್ ಪೂಜಾರಿ ಗೇರುಕಟ್ಟೆ ಇವರು ದೇವತೆ ಯಂತೆ ಬಂದು ಮುಚ್ಚಿದ್ದ ಬಾಗಿಲನ್ನು ತೆರೆದು ಮಗುವನ್ನು ಪಂಚಾಯತ್ ಒಳಗೆ ಕರ್ಕೊಂಡು ಹೋದರು. ಆದರೂ ಬೆನ್ನು ಬಿಡದ ಹೆಜ್ಜೇನು ಅಲ್ಲಿಯೂ ದಾಳಿ ಮಾಡಿತು.
‌‌ಮುಂದಕ್ಕೆ ಅಧ್ಯಕ್ಷರ ಕೊಠಡಿಯ ಒಳಗೆ ಹೋಗಿ ಬಾಗಿಲು ಮುಚ್ಚಿ ನೋಡಿದಾಗ ಅಲ್ಲಿಯೂ ಕೂಡ ಹೆಜ್ಜೇನು ಇದ್ದು ದಾಳಿ ಮಾಡಿತು.

ಮತ್ತೆ ಚಂದ್ರವತಿಯವರು ಹಿಡುಸುಡಿ ಸಹಾಯದಿಂದ ಬಹಳಷ್ಟು ಸಂಖ್ಯೆ ಯಲ್ಲಿ ಇದ್ದ ಹೆಜ್ಜೇನುವನ್ನು ಕೊಂದು ಬಾಲಕನ ಬಟ್ಟೆ ತೆಗೆಸಿ ಹೆಜ್ಜೇನು ಮುಳ್ಳನ್ನು ತುರ್ತಾಗಿ ತೆಗೆದು ಮನೆಯವರಿಗೆ ಸುದ್ದಿ ಮುಟ್ಟಿಸಿದರು. ನಂತರ ಬಾಲಕನನ್ನು ಆಸ್ಪತ್ರೆ ಗೆ ಸೇರಿಸಿ ಸೂಕ್ತ ಚಿಕಿತ್ಸೆ ನೀಡಲಾಯಿತು. ಬಾಲಕ ಈಗ ಅರೋಗ್ಯ ದಿಂದ ಇದ್ದು ಚೇತರಿಸಿ ಕೊಳ್ಳು ತ್ತಿದ್ದಾನೆ.
ಪಂಚಾಂಯತ್ ನೌಕರ ರಾದ ಚಂದ್ರವತಿ ಯವರ ಸಮಯ ಪ್ರಜ್ಞೆ ತಾಯಿ ಮಮತೆ ಧೈರ್ಯ ವು ಗ್ರಾಮಸ್ಥರ ಪ್ರೀತಿ ಗೆ ಪಾತ್ರವಾಯಿತು

Related posts

ಕಳಿಯ ಗ್ರಾ.ಪಂ. ವ್ಯಾಪಿಯಲ್ಲಿ ಬಿರುಸಿನ ಮತದಾನ: ಗಮನಸೆಳೆದ ಪಿಂಕ್(ಸಖಿ) ಮತಗಟ್ಟೆ : ಮತಗಟ್ಟೆ ಕೇಂದ್ರದಲ್ಲಿ ಮತದಾರರ ವಿವಿಧ ಬೇಡಿಕೆ

Suddi Udaya

ಮಲವಂತಿಗೆ : ಕಜಕ್ಕೆ ಸ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಉಜಿರೆ ಗ್ರಾಮ ಪಂಚಾಯತ್ ದ್ವಿತೀಯ ಹಂತದ ಗ್ರಾಮ ಸಭೆ

Suddi Udaya

ತೆಕ್ಕಾರು ಬಟ್ರೆಬೈಲು ದೇವರಗುಡ್ಡೆ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ನೂತನ ಗರ್ಭಗುಡಿಯ ಪ್ರಧಾನ ಅಂಗವಾದ ಷಢಾಧಾರ ಪ್ರತಿಷ್ಠೆ, ಗಭ೯ನ್ಯಾಸ ಕಾರ್ಯಕ್ರಮ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವ್ಯಾಪಾರ ಮೇಳ

Suddi Udaya

ಬಡಗಕಾರಂದೂರು ಸ.ಉ.ಪ್ರಾ.ಶಾಲಾ ಪ್ರತಿಭಾ ದಿನಾಚರಣೆ ಮತ್ತು ಗುರುವಂದನಾ ಕಾರ್ಯಕ್ರಮ

Suddi Udaya
error: Content is protected !!