September 6, 2026
Uncategorized

ಅಂಡಿಂಜೆ ಪಾಂಡೀಲು ಹೊಸಮನೆ ಎಂಬಲ್ಲಿ ಮನೆಯ ಬೀಗವನ್ನು ಒಡೆದು ಒಳಗಿದ್ದ ಕಳ್ಳರು: ನಗ-ನಗದು ಸೇರಿದಂತೆ ‌ರೂ. 80 ಸಾವಿರ ಮೌಲ್ಯದ ಸೊತ್ತುಗಳ ಕಳವು

ಬೆಳ್ತಂಗಡಿ : ಅಂಡಿಂಜೆ ಗ್ರಾಮದ ಪಾಂಡೀಲು ಹೊಸಮನೆ ಎಂಬಲ್ಲಿ ರಾತ್ರಿ ಸಮಯ ಮನೆಯೊಂದರ‌ ಬೀಗವನ್ನು ಒಡೆದು
ನುಗ್ಗಿದ ಕಳ್ಳರು ನಗ-ನಗದು ಸೇರಿದಂತೆ ‌ರೂ. 80 ಸಾವಿರ ಮೌಲ್ಯದ ಸೊತ್ತುಗಳನ್ನು ಕಳವುಗೈದ ಘಟನೆ ಅ.28 ರಂದು ವರದಿಯಾಗಿದೆ.
ಅಂಡಿಂಜೆ ಗ್ರಾಮದ ಪಾಂಡೀಲು ಹೊಸ ಮನೆ. ಶ್ರೀಮತಿ ಸುಜಾತ ರಾಘವ ಪುತ್ರನ್ ಅವರ ಮನೆಯಿಂದ ಈ ಕಳ್ಳತನ ನಡೆಸಲಾಗಿದೆ.
ಅ. 27 ರಂದು ಸಂಜೆಯಿಂದ ಅ. 28ರ ಮದ್ಯಾಹ್ನ 12:15 ಗಂಟೆಯ ಮಧ್ಯೆ ಈ ಕಳ್ಳತನ ನಡೆಸಲಾಗಿದೆ.
ಶ್ರೀಮತಿ ಸುಜಾತ ಅವರು
ಮನೆಯ ಬಾಗಿಲಿಗೆ ಬೀಗ ಹಾಕಿ ತನ್ನ ತವರು ಮನೆಯಾದ ಅಳಿಯೂರು ಎಂಬಲ್ಲಿಗೆ ಹೋದ ಸಮಯ ಯಾರೋ ಕಳ್ಳರು ಮನೆಯ ಬಾಗಿಲಿನ ಬೀಗವನ್ನು ಮುರಿದು ಒಳಪ್ರವೇಶಿಸಿ ಮನೆಯ ಗೋದ್ರೇಜ್‌ ಕಪಾಟಿನಲ್ಲಿದ್ದ ನಗದು ಹಣ ರೂ. 25,000/- ಹಾಗೂ 5 ಗ್ರಾಂ ತೂಕದ ಬೆಂಡೋಲೆ ಒಂದು ಜೊತೆ ಹಾಗೂ 4 ಗ್ರಾಂ ತೂಕದ ಚಿನ್ನದ ಉಂಗುರ ಒಂದನ್ನು ಕಳವು ಮಾಡಿಕೊಂಡು ಹೋಗಿದ್ದಾರೆ . ಕಳುವಾದ ಸೊತ್ತುಗಳು, ನಗದು ಸೇರಿ ಒಟ್ಟು ಅಂದಾಜು ಮೌಲ್ಯ 80,000/ ರೂ ಆಗಬಹುದೆಂದು ಅಂದಾಜಿಸಲಾಗಿದೆ.‌ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಮತ್ತೊಬ್ಬ ಆಂಬುಲೆನ್ಸ್ ಚಾಲಕ ಶಶಿರಾಜ್ ಶೆಟ್ಟಿ ರವರಿಗೆ ಎಸ್.ಐ.ಟಿ ಬುಲಾವ್:

Suddi Udaya

ಸಾಮಾಜಿಕ ಮತ್ತು ಆಧ್ಯಾತ್ಮಿಕ ಸೇವೆಗಾಗಿ ಲ| ಬಿ.ಕೆ ವಿಶ್ವನಾಥ ಆರ್. ನಾಯಕ್‌ರಿಗೆ ಡಾಕ್ಟರೇಟ್ ಪದವಿ

Suddi Udaya

ಉಜಿರೆ: ಶ್ರೀ ಧ. ಮಂ. ಆಂ. ಮಾ. ಶಾಲೆಯಲ್ಲಿ ಯೋಗ ಉದ್ಘಾಟನಾ ಕಾರ್ಯಕ್ರಮ

Suddi Udaya

ಮೇಲಂತಬೆಟ್ಟು: ಕೊಡಮಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ವರ್ಷಾವಧಿ ಜಾತ್ರೆ

Suddi Udaya

ಎಕ್ಸೆಲ್ ಗುರುವಾಯನಕೆರೆಯಲ್ಲಿ ನರ್ಸರಿ, ಎಲ್ ಕೆಜಿ, ಯುಕೆಜಿ ಹಾಗೂ ಒಂದನೇ ತರಗತಿ ಪ್ರಾರಂಭ

Suddi Udaya

ಬೆಳ್ತಂಗಡಿ ರಾಷ್ಟ್ರೀಯ ಹಬ್ಬಗಳ ಸಮಿತಿ ವತಿಯಿಂದ ಗಣರಾಜ್ಯೋತ್ಸವ

Suddi Udaya
error: Content is protected !!