July 23, 2026
Uncategorized

ಅಂಡಿಂಜೆ ಪಾಂಡೀಲು ಹೊಸಮನೆ ಎಂಬಲ್ಲಿ ಮನೆಯ ಬೀಗವನ್ನು ಒಡೆದು ಒಳಗಿದ್ದ ಕಳ್ಳರು: ನಗ-ನಗದು ಸೇರಿದಂತೆ ‌ರೂ. 80 ಸಾವಿರ ಮೌಲ್ಯದ ಸೊತ್ತುಗಳ ಕಳವು

ಬೆಳ್ತಂಗಡಿ : ಅಂಡಿಂಜೆ ಗ್ರಾಮದ ಪಾಂಡೀಲು ಹೊಸಮನೆ ಎಂಬಲ್ಲಿ ರಾತ್ರಿ ಸಮಯ ಮನೆಯೊಂದರ‌ ಬೀಗವನ್ನು ಒಡೆದು
ನುಗ್ಗಿದ ಕಳ್ಳರು ನಗ-ನಗದು ಸೇರಿದಂತೆ ‌ರೂ. 80 ಸಾವಿರ ಮೌಲ್ಯದ ಸೊತ್ತುಗಳನ್ನು ಕಳವುಗೈದ ಘಟನೆ ಅ.28 ರಂದು ವರದಿಯಾಗಿದೆ.
ಅಂಡಿಂಜೆ ಗ್ರಾಮದ ಪಾಂಡೀಲು ಹೊಸ ಮನೆ. ಶ್ರೀಮತಿ ಸುಜಾತ ರಾಘವ ಪುತ್ರನ್ ಅವರ ಮನೆಯಿಂದ ಈ ಕಳ್ಳತನ ನಡೆಸಲಾಗಿದೆ.
ಅ. 27 ರಂದು ಸಂಜೆಯಿಂದ ಅ. 28ರ ಮದ್ಯಾಹ್ನ 12:15 ಗಂಟೆಯ ಮಧ್ಯೆ ಈ ಕಳ್ಳತನ ನಡೆಸಲಾಗಿದೆ.
ಶ್ರೀಮತಿ ಸುಜಾತ ಅವರು
ಮನೆಯ ಬಾಗಿಲಿಗೆ ಬೀಗ ಹಾಕಿ ತನ್ನ ತವರು ಮನೆಯಾದ ಅಳಿಯೂರು ಎಂಬಲ್ಲಿಗೆ ಹೋದ ಸಮಯ ಯಾರೋ ಕಳ್ಳರು ಮನೆಯ ಬಾಗಿಲಿನ ಬೀಗವನ್ನು ಮುರಿದು ಒಳಪ್ರವೇಶಿಸಿ ಮನೆಯ ಗೋದ್ರೇಜ್‌ ಕಪಾಟಿನಲ್ಲಿದ್ದ ನಗದು ಹಣ ರೂ. 25,000/- ಹಾಗೂ 5 ಗ್ರಾಂ ತೂಕದ ಬೆಂಡೋಲೆ ಒಂದು ಜೊತೆ ಹಾಗೂ 4 ಗ್ರಾಂ ತೂಕದ ಚಿನ್ನದ ಉಂಗುರ ಒಂದನ್ನು ಕಳವು ಮಾಡಿಕೊಂಡು ಹೋಗಿದ್ದಾರೆ . ಕಳುವಾದ ಸೊತ್ತುಗಳು, ನಗದು ಸೇರಿ ಒಟ್ಟು ಅಂದಾಜು ಮೌಲ್ಯ 80,000/ ರೂ ಆಗಬಹುದೆಂದು ಅಂದಾಜಿಸಲಾಗಿದೆ.‌ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಕನ್ಯಾಡಿ ಸೇವಾಭಾರತಿಯಿಂದ ಮಡಿಕೇರಿಯ ಅಶ್ವಿನಿ ಆಸ್ಪತ್ರೆಯಲ್ಲಿ 5 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ಸಮಿತಿಯ ನಗರ ಮತ್ತು ಗ್ರಾಮೀಣ ಅಧ್ಯಕ್ಷರ ಮತ್ತು ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳ ನೇಮಕ

Suddi Udaya

ನವ ಭಾರತ’ ಸಂಘಟನೆಯ ಆಶ್ರಯದಲ್ಲಿ ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅ. ಹಿ. ಪ್ರಾ. ಶಾಲೆಯಲ್ಲಿ ಮಕ್ಕಳ ಸಂಸ್ಕಾರ ಶಿಬಿರದ ಉದ್ಘಾಟನೆ

Suddi Udaya

ಸವಣಾಲು ಉದ್ಯಮಿ ಅರುಣ್ ಕುಮಾರ್ ನಿಧನ

Suddi Udaya

ದ.ಕ ಜಿಲ್ಲೆಯಲ್ಲಿ ವ್ಯಾಪಕ ಮಳೆಯ ಹಿನ್ನಲೆ: ಜು.7 ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕರ ಸಂಘದ ಆಪತ್ಕಾಲದ 29ನೇ ಕ್ಷೇಮ ನಿಧಿ ಯೋಜನೆಯ ಸಹಾಯಧನ ವಿತರಣೆ

Suddi Udaya
error: Content is protected !!