23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಅಂಡಿಂಜೆ ಪಾಂಡೀಲು ಹೊಸಮನೆ ಎಂಬಲ್ಲಿ ಮನೆಯ ಬೀಗವನ್ನು ಒಡೆದು ಒಳಗಿದ್ದ ಕಳ್ಳರು: ನಗ-ನಗದು ಸೇರಿದಂತೆ ‌ರೂ. 80 ಸಾವಿರ ಮೌಲ್ಯದ ಸೊತ್ತುಗಳ ಕಳವು

ಬೆಳ್ತಂಗಡಿ : ಅಂಡಿಂಜೆ ಗ್ರಾಮದ ಪಾಂಡೀಲು ಹೊಸಮನೆ ಎಂಬಲ್ಲಿ ರಾತ್ರಿ ಸಮಯ ಮನೆಯೊಂದರ‌ ಬೀಗವನ್ನು ಒಡೆದು
ನುಗ್ಗಿದ ಕಳ್ಳರು ನಗ-ನಗದು ಸೇರಿದಂತೆ ‌ರೂ. 80 ಸಾವಿರ ಮೌಲ್ಯದ ಸೊತ್ತುಗಳನ್ನು ಕಳವುಗೈದ ಘಟನೆ ಅ.28 ರಂದು ವರದಿಯಾಗಿದೆ.
ಅಂಡಿಂಜೆ ಗ್ರಾಮದ ಪಾಂಡೀಲು ಹೊಸ ಮನೆ. ಶ್ರೀಮತಿ ಸುಜಾತ ರಾಘವ ಪುತ್ರನ್ ಅವರ ಮನೆಯಿಂದ ಈ ಕಳ್ಳತನ ನಡೆಸಲಾಗಿದೆ.
ಅ. 27 ರಂದು ಸಂಜೆಯಿಂದ ಅ. 28ರ ಮದ್ಯಾಹ್ನ 12:15 ಗಂಟೆಯ ಮಧ್ಯೆ ಈ ಕಳ್ಳತನ ನಡೆಸಲಾಗಿದೆ.
ಶ್ರೀಮತಿ ಸುಜಾತ ಅವರು
ಮನೆಯ ಬಾಗಿಲಿಗೆ ಬೀಗ ಹಾಕಿ ತನ್ನ ತವರು ಮನೆಯಾದ ಅಳಿಯೂರು ಎಂಬಲ್ಲಿಗೆ ಹೋದ ಸಮಯ ಯಾರೋ ಕಳ್ಳರು ಮನೆಯ ಬಾಗಿಲಿನ ಬೀಗವನ್ನು ಮುರಿದು ಒಳಪ್ರವೇಶಿಸಿ ಮನೆಯ ಗೋದ್ರೇಜ್‌ ಕಪಾಟಿನಲ್ಲಿದ್ದ ನಗದು ಹಣ ರೂ. 25,000/- ಹಾಗೂ 5 ಗ್ರಾಂ ತೂಕದ ಬೆಂಡೋಲೆ ಒಂದು ಜೊತೆ ಹಾಗೂ 4 ಗ್ರಾಂ ತೂಕದ ಚಿನ್ನದ ಉಂಗುರ ಒಂದನ್ನು ಕಳವು ಮಾಡಿಕೊಂಡು ಹೋಗಿದ್ದಾರೆ . ಕಳುವಾದ ಸೊತ್ತುಗಳು, ನಗದು ಸೇರಿ ಒಟ್ಟು ಅಂದಾಜು ಮೌಲ್ಯ 80,000/ ರೂ ಆಗಬಹುದೆಂದು ಅಂದಾಜಿಸಲಾಗಿದೆ.‌ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಎಕ್ಸೆಲ್ ಟೆಕ್ನೋ ಶಾಲೆಯಲ್ಲಿ ಫನ್ಪಿನಿಟಿ ಚಿಣ್ಣರ ಪ್ಲೇ ಪಾರ್ಕ್ ಉದ್ಘಾಟನೆ, ಪೋಷಕರಿಗೆ ಆಟೋಟ ಸ್ಪರ್ಧೆ

Suddi Udaya

ನೆರಿಯ: ರಸ್ತೆ ರಿಪೇರಿ ಮಾಡಿ ಮಾದರಿಯಾದ ಅಧ್ಯಾಪಕ ತಮ್ಮಯ್ಯ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದಲ್ಲಿ ಈಸ್ಟರ್ ಹಬ್ಬ

Suddi Udaya

ಮಡಂತ್ಯಾರು: ಬಂಗೇರಕಟ್ಟೆ ಅಕ್ಷರ ಕರಾವಳಿ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ಬಾಲಮೇಳ ಕಾರ್ಯಕ್ರಮ

Suddi Udaya

ಚಿನ್ನಾಭರಣ ಪರೀಕ್ಷಕರನ್ನು ವಜಾ ಮಾಡಿರುವ ಪ್ರಕರಣದ ನಿಗೂಢತೆಯನ್ನು ಬಯಲು ಮಾಡಬೇಕೆಂದು ಅಗ್ರಹಿಸಿ ಕೊಕ್ಕಡ ಕೆನರಾ ಬ್ಯಾಂಕ್ ಮ್ಯಾನೇಜರ್ ಮೂಲಕ ಕೇಂದ್ರ ಕಚೇರಿಗೆ ಮನವಿ

Suddi Udaya

ಮಂಗಳೂರು ವಿ.ವಿ ರಾಣಿ ಅಬ್ಬಕ್ಕ ಅಧ್ಯಯನ ಪೀಠದ ಸಲಹಾ ಸಮಿತಿಯ ನಾಮ ನಿರ್ದೇಶಿತ ಸದಸ್ಯರಾಗಿ ಯೋಗೀಶ್ ಕೈರೋಡಿಆಯ್ಕೆ

Suddi Udaya
error: Content is protected !!