23.6 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿ

ಅಪಘಾತದಲ್ಲಿ ಸಾವು; ನವೋದಯ ಗುಂಪಿನ ಸದಸ್ಯೆಗೆ 1 ಲಕ್ಷ ರೂ. ವಿಮೆ ಚೆಕ್ ಹಸ್ತಾಂತರ

ಬಂಗಾಡಿ ಸಹಕಾರಿ ಸಂಘದ ನಾವೂರು ಶಾಖೆಯಲ್ಲಿ ಖಾತೆಯನ್ನು ಹೊಂದಿರುವ ಶಿವಪಾರ್ವತಿ ನವೋದಯ ಸ್ವ ಸಹಾಯ ಗುಂಪಿನ ಸದಸ್ಯೆ ಕಮಲಾ ಅವರು ವಾಹನ ಅಪಘಾತದಿಂದ ಮೃತಪಟ್ಟಿದ್ದು, ಅವರಿಗೆ ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಚೈತನ್ಯ ವಿಮಾ ಯೋಜನೆಯಡಿಯಲ್ಲಿ ಮಂಜೂರಾದ ಒಂದು ಲಕ್ಷ ರೂ. ಮೊತ್ತದ ಚೆಕ್ ನ್ನು ಅವರ ಕುಟುಂಬಸ್ಥರಿಗೆ ಬಂಗಾಡಿ ಸಹಕಾರಿ ಬ್ಯಾಂಕ್ ನ ಅಧ್ಯಕ್ಷ ಹರೀಶ್ ಸಾಲ್ಯಾನ್ ಮೋರ್ತಾಜೆ ಇವರು ಹಾಸ್ತಾoತರಿಸಿದರು.

ಮೃತರ ನಾಮಿನಿ ಯಾಗಿದ್ದ ಅವರ ಪತಿ ನಾವೂರಿನ ಸಂಜೀವ ಮಲೆಕುಡಿಯ, ಹಾಗೂ ಅವರ ಪುತ್ರ ರಮೇಶ್ ಮಲೆಕುಡಿಯ ಪರಿಹಾರದ ಚೆಕ್ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಸಹಕಾರಿ‌ಸಂಘದ ಸಿಇಒ ದಯಾನಂದ ಶೆಟ್ಟಿಗಾರ್, ಸಹಾಯಕ ಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ, ಸಿಬ್ಬಂದಿಗಳಾದ ರಮಾನಂದ ಮತ್ತು ಮಂಜುನಾಥ ಗೌಡ, ನವೋದಯ ಸಿಬ್ಬಂದಿಗಳಾದ ಸುಮಿತ್ರಾ ಬಂಗಾಡಿ ಮತ್ತು ಜಯರಾಮ ಬಂಗಾಡಿ ಉಪಸ್ಥಿತರಿದ್ದರು.

Related posts

ಧರ್ಮಸ್ಥಳ: ಬೊಳಿಯಾರುನಲ್ಲಿ ಕಾಡಾನೆಗಳು ಎಳೆದ ಮರ, ವಿದ್ಯುತ್ ಲೈನಿನ ಮೇಲೆ ಬಿದ್ದು ಕಂಬಗಳಿಗೆ ಹಾನಿ

Suddi Udaya

ರೆಖ್ಯಾ: ಮಕ್ಕಳ ಕುಣಿತ ಭಜನಾ ಸಮಾರೋಪದ ಉದ್ಘಾಟನಾ ಸಮಾರಂಭ

Suddi Udaya

ವಲಯ ಮಟ್ಟದ ಪ್ರಾಥಮಿಕ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆ: ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾಧ್ಯಮ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ 3ನೇ ದಿನದ ಉರೂಸ್ ಸಮಾರಂಭ

Suddi Udaya

ವಿಶ್ವ ಹಿಂದೂ ಪರಿಷದ್ ಬಜರಂಗದಳ ಬೆಳ್ತಂಗಡಿ ಪ್ರಖಂಡ ಷಷ್ಠಿ ಪೂರ್ತಿಯ ಸಮಾರೋಪ ಸಮಾರಂಭ ಕಾರ್ಯಕ್ರಮದ ಪ್ರಯುಕ್ತ ಪೂರ್ವಭಾವಿ ಪ್ರಮುಖರ ಸಮಾಲೋಚನೆ ಸಭೆ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ಹಿಂದುಳಿದ ವರ್ಗಗಳ ಮೊರ್ಚಾದ ಉಪಾಧ್ಯಕ್ಷರಾಗಿ ರಾಜೇಶ್ ಪೂಜಾರಿ ಮೂಡುಕೋಡಿ

Suddi Udaya
error: Content is protected !!