23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿ

ಅಪಘಾತದಲ್ಲಿ ಸಾವು; ನವೋದಯ ಗುಂಪಿನ ಸದಸ್ಯೆಗೆ 1 ಲಕ್ಷ ರೂ. ವಿಮೆ ಚೆಕ್ ಹಸ್ತಾಂತರ

ಬಂಗಾಡಿ ಸಹಕಾರಿ ಸಂಘದ ನಾವೂರು ಶಾಖೆಯಲ್ಲಿ ಖಾತೆಯನ್ನು ಹೊಂದಿರುವ ಶಿವಪಾರ್ವತಿ ನವೋದಯ ಸ್ವ ಸಹಾಯ ಗುಂಪಿನ ಸದಸ್ಯೆ ಕಮಲಾ ಅವರು ವಾಹನ ಅಪಘಾತದಿಂದ ಮೃತಪಟ್ಟಿದ್ದು, ಅವರಿಗೆ ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಚೈತನ್ಯ ವಿಮಾ ಯೋಜನೆಯಡಿಯಲ್ಲಿ ಮಂಜೂರಾದ ಒಂದು ಲಕ್ಷ ರೂ. ಮೊತ್ತದ ಚೆಕ್ ನ್ನು ಅವರ ಕುಟುಂಬಸ್ಥರಿಗೆ ಬಂಗಾಡಿ ಸಹಕಾರಿ ಬ್ಯಾಂಕ್ ನ ಅಧ್ಯಕ್ಷ ಹರೀಶ್ ಸಾಲ್ಯಾನ್ ಮೋರ್ತಾಜೆ ಇವರು ಹಾಸ್ತಾoತರಿಸಿದರು.

ಮೃತರ ನಾಮಿನಿ ಯಾಗಿದ್ದ ಅವರ ಪತಿ ನಾವೂರಿನ ಸಂಜೀವ ಮಲೆಕುಡಿಯ, ಹಾಗೂ ಅವರ ಪುತ್ರ ರಮೇಶ್ ಮಲೆಕುಡಿಯ ಪರಿಹಾರದ ಚೆಕ್ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಸಹಕಾರಿ‌ಸಂಘದ ಸಿಇಒ ದಯಾನಂದ ಶೆಟ್ಟಿಗಾರ್, ಸಹಾಯಕ ಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ, ಸಿಬ್ಬಂದಿಗಳಾದ ರಮಾನಂದ ಮತ್ತು ಮಂಜುನಾಥ ಗೌಡ, ನವೋದಯ ಸಿಬ್ಬಂದಿಗಳಾದ ಸುಮಿತ್ರಾ ಬಂಗಾಡಿ ಮತ್ತು ಜಯರಾಮ ಬಂಗಾಡಿ ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಎಂಡೋಸ್ಕೋಪಿಕ್ ಸ್ಪೈನಲ್ ಸರ್ಜರಿ

Suddi Udaya

ಜಿಲ್ಲಾ ಉಸ್ತುವಾರಿ ಸಚಿವರಿಂದ138 ಫಲಾನುಭವಿಗಳಿಗೆ 94ಸಿ ಮತ್ತು ‌94 ಸಿಸಿ ಹಕ್ಕು ಪತ್ರ ವಿತರಣೆ

Suddi Udaya

ಶಿಬಾಜೆ ಶಾಲಾ ಮಕ್ಕಳಿಗೆ ಓಣಂ ಪ್ರಯುಕ್ತ ಓಣಂ ಭೋಜನ

Suddi Udaya

ನಾವರ: ಡೆಂಗ್ಯೂ ವಿರೋಧ ಮಾಸಾಚರಣೆ ಮನೆ ಮನೆಗೆ ಭೇಟಿ ಹಾಗೂ ಮುಂಜಾಗೃತ ಮಾಹಿತಿ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಒಂದು ದಿನದ ಕರಡಿಪಾತ್ ಕಾರ್ಯಾಗಾರ

Suddi Udaya

ಬೆಳ್ತಂಗಡಿ ಸ.ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮ

Suddi Udaya
error: Content is protected !!