30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನ.3: ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ “ಬಂಟೆರೆ ತುಡರ್ ಪರ್ಬ”

ಬೆಳ್ತಂಗಡಿ: ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ, ಮಹಿಳಾ ಬಂಟರ ವಿಭಾಗ ಹಾಗೂ ಯುವ ಬಂಟರ ವಿಭಾಗ ಆಶ್ರಯದಲ್ಲಿ ಬೆಳಕಿನ ಹಬ್ಬ ದೀಪಾವಳಿ ಸಂಭ್ರಮಾಚರಣೆ ಪ್ರಯುಕ್ತ “ಬಂಟೆರೆ ತುಡರ್ ಪರ್ಬ” ನ.3ರಂದು ಗುರುವಾಯನಕೆರೆ ಬಂಟರ ಭವನದಲ್ಲಿ ನಡೆಯಲಿದೆ.

ಅಪರಾಹ್ನ ಗಂಟೆ 3.00ಕ್ಕೆ ದೀಪ ಪ್ರಜ್ವಲನೆ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಜಿಲ್ಲಾ ಉಪಾಧ್ಯಕ್ಷರು ಶ್ರೀಮತಿ ಶಾರದಾ ರೈ ಕಣಿಯೂರು ನೆರವೇರಿಸಲಿದ್ದಾರೆ. ಅಪರಾಹ್ನ ಗಂಟೆ 3.15ರಿಂದ ಬಂಟರ ಮಹಿಳಾ ವಿಭಾಗದ ಸದಸ್ಯರಿಂದ ಭಜನಾ ಕಾರ್ಯಕ್ರಮ, ಸಂಜೆ ಗಂಟೆ 4.30ಕ್ಕೆ ಸಭಾ ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಬೆಳ್ತಂಗಡಿ ಬಂಟರ ಮಹಿಳಾ ವಿಭಾಗ ಅಧ್ಯಕ್ಷೆ ಶ್ರೀಮತಿ ಜಯಲಕ್ಷ್ಮಿ ಎನ್. ಸಾಮಾನಿ, ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಮಂಗಳೂರು ಆಸರೆ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷೆ ಡಾ। ಆಶಾಜ್ಯೋತಿ ರೈ, ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ ಅಧ್ಯಕ್ಷ ಜಯಂತ ಶೆಟ್ಟಿ ಭಂಡಾರಿಗುಡ್ಡೆ, ಬೆಂಗಳೂರು ಕ್ವಾರಿ ಸ್ಟೋನ್ ಕ್ರಶರ್ ಅಸೋಸಿಯೇಶನ್ ರಾಜ್ಯಾಧ್ಯಕ್ಷ ಡಾ| ರವೀಂದ್ರ ಶೆಟ್ಟಿ ಬಜಗೋಳಿ ಭಾಗವಹಿಸಲಿದ್ದಾರೆ.

ಸಂಜೆ ಗಂಟೆ 5.30ರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು, ರಾತ್ರಿ ಗಂಟೆ 7.00ರಿಂದ ದೀಪಾರಾಧನೆ, ಗೋಪೂಜೆ, ಬಲಿಯೇಂದ್ರ ಪೂಜೆ, ಸುಡುಮದ್ದು ಪ್ರದರ್ಶನ ಮತ್ತು ಸಹಭೋಜನ ನಡೆಯಲಿದೆ,

Related posts

ಪ್ಯಾಲೆಸ್ತೀನ್ ದೇಶದ ಜನತೆಗೆ ಬೆಂಬಲ ಸೂಚಿಸಿ ಎಸ್‌ಡಿಪಿಐ ವತಿಯಿಂದ ವಿವಿಧೆಡೆ ಭಿತ್ತಿಪತ್ರ ಪ್ರದರ್ಶನ

Suddi Udaya

ಮೋದಿ ಅಭಿಮಾನಿ ಶಿಶಿಲ ದೇನೋಡಿ ಯುವ ಬ್ರಿಗೇಡ್‌ ಕಾರ್ಯಕರ್ತ ತಿಲಕ್ ರ ಮದುವೆ: ಮೋದಿಮಯವಾಗಿ ಪರಿವರ್ತನೆಯಾದ ಮದುವೆ ಮಂಟಪ: “ಮದುವೆ ಒಮ್ಮೆ ಮಾತ್ರ.. ಆದರೆ ಮೋದಿ ಮತ್ತೆ ಮತ್ತೆ ಪ್ರಧಾನಿಯಾಗಬೇಕು” ಎಂಬ ಸಂದೇಶ

Suddi Udaya

ಕೊಲ್ಲಿ: ಸೂರ್ಯ – ಚಂದ್ರ ಜೋಡುಕರೆ ಕಂಬಳ ಸಮಿತಿಗೆ ಡಾ. ಹೆಗ್ಗಡೆಯವರು ಮಂಜೂರು ಮಾಡಿದ 2 ಲಕ್ಷದ ಚೆಕ್ ಹಸ್ತಾಂತರ

Suddi Udaya

ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯಿಂದ ದ.ಕ. ಜಿಲ್ಲೆಯ 7 ಮಸೀದಿಗಳಿಗೆ ಮೃತದೇಹ ಸಂರಕ್ಷಣಾ ಫ್ರೀಝರ್ ಹಸ್ತಾಂತರ

Suddi Udaya

ಮುಂಡಾಜೆ: ಕೊಂಬಿನಡ್ಕ ಸ.ಕಿ.ಪ್ರಾ. ಶಾಲೆ ಎಸ್‌ಡಿಎಂಸಿ ಕಮಿಟಿ ಪುನರ್ ರಚನೆ

Suddi Udaya

ಎಕ್ಸೆಲ್ ಪಿಯು ಕಾಲೇಜು ವಿದ್ಯಾರ್ಥಿಗಳಿಂದ ಅಂತರರಾಷ್ಟ್ರೀಯ ಗಣಿತ ಒಲಿಂಪಿಯಾಡ್‌ನಲ್ಲಿ ಮಹತ್ವದ ಸಾಧನೆ

Suddi Udaya
error: Content is protected !!