July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ತಾಲೂಕು ಬಂಟರ ಯಾನೆ ನಾಡವರ ಸಂಘದ ನಿರ್ದೇಶಕರ ಹಾಗೂ ವಿಶೇಷ ಆಹ್ವಾನಿತರ ಸಭೆ: ದೀಪಾವಳಿಯ ತುಡಾರು ಪರ್ಬ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ ತಾಲೂಕು ಬಂಟರ ಯಾನೆ ನಾಡವರ ಸಂಘದ ನಿರ್ದೇಶಕರ ಹಾಗೂ ವಿಶೇಷ ಆಹ್ವಾನಿತರ ಸಭೆಯು ಅ.27 ರಂದು ಗುರುವಾಯನಕೆರೆ ಬಂಟರ ಭವನದಲ್ಲಿ ಜಯಂತ ಶೆಟ್ಟಿ ಮಡಂತ್ಯಾರು ಇವರ ಅಧ್ಯಕ್ಷತೆಯಲ್ಲಿ ಜರಗಿತು.

ಕಾರ್ಯದರ್ಶಿ ಸುರೇಶ್ ಶೆಟ್ಟಿ ವರದಿ ವಾಚಿಸಿ ಸದಸ್ಯತನ ಅರ್ಜಿಗಳ ವಿವರವನ್ನು ಸಭೆಯ ಮುಂದಿಟ್ಟರು. ಸಂಘದ ಕೋಶಾಧಿಕಾರಿ ವಸಂತ್ ಶೆಟ್ಟಿ ಶ್ರದ್ದ ತಿಂಗಳ ಲೆಕ್ಕಪತ್ರವನ್ನು ಮಂಡಿಸಿದರು. ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಣೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಲೆಕ್ಕಪತ್ರವನ್ನು, ವಿದ್ಯಾನಿಧಿ ಸಂಚಾಲಕರಾದ ಅಜಿತ್. ಜಿ. ಶೆಟ್ಟಿ. ಮಂಡಿಸಿದರು. ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದ ಸರ್ವರಿಗೂ ಕೃತಜ್ಞತೆ ಸಲ್ಲಿಸಿದರು. ಮಹಿಳಾ ವಿಭಾಗ ಮತ್ತು ಯುವ ವಿಭಾಗದ ವತಿಯಿಂದ ನಡೆಯುವ ದೀಪಾವಳಿಯ ತುಡಾರು ಪರ್ಬ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಸಂಘದ ಮಾಜಿ ಅಧ್ಯಕ್ಷ ಟಿ. ಆರ್. ಅಡ್ಯಂತಾಯ ಬಿಡುಗಡೆಗೊಳಿಸಿದರು.

ವಲಯ ಸಮಿತಿ ಹಾಗೂ ಗ್ರಾಮ ಸಮಿತಿಗಳ ಸಂಘಟನೆಯ ಬಗ್ಗೆ ಸಂಘಟನಾ ಸಂಚಾಲಕರಾದ ರಘುರಾಮ್ ಶೆಟ್ಟಿ ಸಾದನ ಸಭೆಗೆ ವಿವರ ನೀಡಿದರು. ಉಪಾಧ್ಯಕ್ಷ ಉಮೇಶ್ ಶೆಟ್ಟಿ ಉಜಿರೆ ಸ್ವಾಗತಿಸಿದರು. ಸಂಘದ ಜೊತೆ ಕಾರ್ಯದರ್ಶಿ ಕಿರಣ್ ಕುಮಾರ್ ಶೆಟ್ಟಿ ಧನ್ಯವಾದ ನೀಡಿದರು.

Related posts

ಡಿ.7: ಪುದುವೆಟ್ಟುವಿನಲ್ಲಿ ಬಾಯಿತ್ಯಾರು ವೆಲ್ಡಿಂಗ್ & ಹಾರ್ಡ್‌ವೇ‌ರ್ ಸಂಸ್ಥೆ ಶುಭಾರಂಭ

Suddi Udaya

ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ನಿವೃತ್ತ ಕೆ. ಜಯಕೀರ್ತಿ ಜೈನ್ ರವರಿಗೆ ಬೆಳ್ತಂಗಡಿ ಸರಕಾರಿ ನೌಕರರ ಸಂಘದಿಂದ ಸನ್ಮಾನ

Suddi Udaya

ಕನ್ಯಾಡಿ ಶ್ರೀಗಳ ಚಾತುರ್ಮಾಸಕ್ಕೆ ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ಗಣ್ಯರ ಭೇಟಿ

Suddi Udaya

ಕಾಶಿಪಟ್ಣ ಸ.ಪ್ರೌ. ಶಾಲೆಗೆ ಶೇ.100 ಫಲಿತಾಂಶ

Suddi Udaya

ಯೋಗಾಸನ ಸ್ಪರ್ಧೆಯಲ್ಲಿ ಚಿನ್ನದ ಪದಕ ಪಡೆದ ಕೊಕ್ರಾಡಿ ಸ.ಪ್ರೌ. ಶಾಲಾ ಶಿಕ್ಷಕಿ, ಅಕ್ಕಮ್ಮ ರವರಿಗೆ ಶಾಸಕ ಹರೀಶ್ ಪೂಂಜರಿಂದ ಅಭಿನಂದನೆ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದಲ್ಲಿ ಸಂಕ್ರಾಂತಿ ಪೂಜೆ: 3 ಸಾವಿರ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆಯ ಅರ್ಜಿ ಫಾರಂ ವಿತರಣೆ

Suddi Udaya
error: Content is protected !!