23.7 C
ಪುತ್ತೂರು, ಬೆಳ್ತಂಗಡಿ
April 24, 2026
ತಾಲೂಕು ಸುದ್ದಿ

ಹಾಜಿ ಅಬ್ದುಲ್ ಲತೀಫ್ ಸಾಹೇಬ್ ಅವರಿಗೆ ಯುಎಇ 10 ವರ್ಷದ ಗೋಲ್ಡನ್ ವೀಸಾ

ಬೆಳ್ತಂಗಡಿ; ಹಿರಿಯ ಸಾಮಾಜಿಕ ಜನಪರ ಸಂಘಟನೆಯಾದ ಜಮೀಯುಲ್ ಫಲಾಹ್ ಇದರ ಮಾಜಿ ಜಿಲ್ಲಾಧ್ಯಕ್ಷ ಹಾಗೂ ಹಾಲಿ ಗೌರವಾಧ್ಯಕ್ಷ ಮಾಲಾಡಿ ಗ್ರಾಮದ
ಹಾಜಿ ಅಬ್ದುಲ್ ಲತೀಫ್ ಸಾಹೇಬ್ ಕೊಲ್ಪೆದಬೈಲು ಅವರಿಗೆ ಯುಎಇ ಸರ್ಕಾರವು 10 ವರ್ಷಗಳ ಗೋಲ್ಡನ್ ವೀಸಾ ನೀಡಿ ಗೌರವ ತೋರಿದೆ.

ಹಾಜಿ ಅಬ್ದುಲ್ ಲತೀಫ್ ಸಾಹೇಬ್ ಅವರು ಅತ್ಯುತ್ತಮ ಸಂಘಟಕರಾಗಿ, ಕೊಡುಗೈ ದಾನಿಯಾಗಿ ಹಲವು ಸಾಮಾಜಿಕ ಸಂಸ್ಥೆಗಳ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಮುಖ್ಯವಾಗಿ ಶಿಕ್ಷಣ, ಮಕ್ಕಳ ಕಲ್ಯಾಣ ಹಾಗೂ ಮುಸ್ಲಿಂ ಸಮುದಾಯದ ಅಭಿವೃದ್ಧಿ ಕ್ಷೇತ್ರಗಳಲ್ಲಿ ನಿರಂತರವಾಗಿ ಶ್ರಮ ಸೇವೆ ನೀಡಿದ್ದಾರೆ.
ಅವರ ಈ ಸಾಧನೆ ಹಾಗೂ ಸೇವಾ ಕಾರ್ಯಗಳನ್ನು ಗುರುತಿಸಿ ಯುಎಇ ಸರಕಾರ ಅವರಿಗೆ ಈ ಮಾನ್ಯತೆ ನೀಡಿ ಪುರಸ್ಕರಿಸಿದೆ.

ಈ ಗೌರವಾನ್ವಿತ ಗೋಲ್ಡನ್ ವೀಸಾವನ್ನು ಪ್ರಮುಖ ಹೂಡಿಕೆದಾರರು, ಶ್ರೇಷ್ಠ ಉದ್ಯಮಿಗಳು, ಪರಿಣತ ವೃತ್ತಿಪರರು, ವಿಜ್ಞಾನಿಗಳು, ಸಂಶೋಧಕರು ಮತ್ತು ಮಾನವೀಯ ಕಾರ್ಯಗಳಿಗೆ ತೊಡಗಿರುವವರನ್ನು ಅರ್ಹತೆಯ ಮೇಲೆ ಆಯ್ಕೆ ಮಾಡಲಾಗುತ್ತದೆ.
ಯುಎಇ ನಲ್ಲಿ ಸುಧೀರ್ಘ ವಾಸದ ಸೌಲಭ್ಯಗಳನ್ನೂ ಒಳಗೊಂಡ ಈ ವೀಸಾವನ್ನು ನಿರ್ದಿಷ್ಟ ಅರ್ಹತೆಯ ವ್ಯಕ್ತಿಗಳು ಮಾತ್ರ ಪಡೆದುಕೊಳ್ಳುವ ವಿಶಿಷ್ಟ ಗೌರವವೆಂದು ಪರಿಗಣಿಸಲಾಗಿದೆ.

Related posts

ಅ.26-27: ಬೆಳ್ತಂಗಡಿಯಲ್ಲಿ ಕೋಲ್ಕತ್ತ ಸಾರಿ ಮೇಳ

Suddi Udaya

ಅಂತರ್ ಕಾಲೇಜು ಚದುರಂಗ ಸ್ಪರ್ಧೆ: ಎಸ್ ಡಿಎಂ ಕಾಲೇಜಿನ ಪುರುಷರ ತಂಡ ಚಾಂಪಿಯನ್

Suddi Udaya

ನಡ : 2024-25ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಪ್ರವಾದಿ (ಸಅ) ಅವಹೇಳನ ಪೋಸ್ಟ್ ಪ್ರಕರಣ; ಚೇತನ್ ಹೊದ್ದೆಟ್ಟಿ ವಿರುದ್ಧ ಅಕ್ಬರ್ ಬೆಳ್ತಂಗಡಿಯಿಂದ ದೂರು ದಾಖಲು

Suddi Udaya

ಅರಸಿನಮಕ್ಕಿ: ವೀಸಾ ಕೊಡಿಸುವುದಾಗಿ ನಂಬಿಸಿ ರೂ. 2.50 ಲಕ್ಷ ವಂಚನೆ-ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬಂಟರ ಯಾನೆ ನಾಡವರ ಸಂಘ, ಕಣಿಯೂರು ಗ್ರಾಮ ಸಮಿತಿ ವತಿಯಿಂದ ಪದಗ್ರಹಣ, ಪ್ರತಿಭಾ ಪುರಸ್ಕಾರ, ಪುಸ್ತಕ ವಿತರಣಾ ಕಾರ್ಯಕ್ರಮ

Suddi Udaya
error: Content is protected !!