July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹಾಜಿ ಅಬ್ದುಲ್ ಲತೀಫ್ ಸಾಹೇಬ್ ಅವರಿಗೆ ಯುಎಇ 10 ವರ್ಷದ ಗೋಲ್ಡನ್ ವೀಸಾ

ಬೆಳ್ತಂಗಡಿ; ಹಿರಿಯ ಸಾಮಾಜಿಕ ಜನಪರ ಸಂಘಟನೆಯಾದ ಜಮೀಯುಲ್ ಫಲಾಹ್ ಇದರ ಮಾಜಿ ಜಿಲ್ಲಾಧ್ಯಕ್ಷ ಹಾಗೂ ಹಾಲಿ ಗೌರವಾಧ್ಯಕ್ಷ ಹಾಜಿ ಅಬ್ದುಲ್ ಲತೀಫ್ ಸಾಹೇಬ್ ಕೊಲ್ಪೆದಬೈಲು ಅವರಿಗೆ ಯುಎಇ ಸರ್ಕಾರವು 10 ವರ್ಷಗಳ ಗೋಲ್ಡನ್ ವೀಸಾ ನೀಡಿ ಗೌರವ ತೋರಿದೆ.

ಹಾಜಿ ಅಬ್ದುಲ್ ಲತೀಫ್ ಸಾಹೇಬ್ ಅವರು ಅತ್ಯುತ್ತಮ ಸಂಘಟಕರಾಗಿ, ಕೊಡುಗೈ ದಾನಿಯಾಗಿ ಹಲವು ಸಾಮಾಜಿಕ ಸಂಸ್ಥೆಗಳ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಮುಖ್ಯವಾಗಿ ಶಿಕ್ಷಣ, ಮಕ್ಕಳ ಕಲ್ಯಾಣ ಹಾಗೂ ಮುಸ್ಲಿಂ ಸಮುದಾಯದ ಅಭಿವೃದ್ಧಿ ಕ್ಷೇತ್ರಗಳಲ್ಲಿ ನಿರಂತರವಾಗಿ ಸೇವೆ ನೀಡಿದ್ದಾರೆ.
ಅವರ ಈ ಸಾಧನೆ ಹಾಗೂ ಸೇವಾ ಕಾರ್ಯಗಳನ್ನು ಗುರುತಿಸಿ ಯುಎಇ ಸರಕಾರ ಅವರಿಗೆ ಈ ಮಾನ್ಯತೆ ನೀಡಿ ಪುರಸ್ಕರಿಸಿದೆ.

ಈ ಗೌರವಾನ್ವಿತ ಗೋಲ್ಡನ್ ವೀಸಾವನ್ನು ಪ್ರಮುಖ ಹೂಡಿಕೆದಾರರು, ಶ್ರೇಷ್ಠ ಉದ್ಯಮಿಗಳು, ಪರಿಣತ ವೃತ್ತಿಪರರು, ವಿಜ್ಞಾನಿಗಳು, ಸಂಶೋಧಕರು ಮತ್ತು ಮಾನವೀಯ ಕಾರ್ಯಗಳಿಗೆ ತೊಡಗಿರುವವರನ್ನು ಅರ್ಹತೆಯ ಮೇಲೆ ಆಯ್ಕೆ ಮಾಡಲಾಗುತ್ತದೆ.
ಯುಎಇ ನಲ್ಲಿ ಸುಧೀರ್ಘ ವಾಸದ ಸೌಲಭ್ಯಗಳನ್ನೂ ಒಳಗೊಂಡ ಈ ವೀಸಾವನ್ನು ನಿರ್ದಿಷ್ಟ ಅರ್ಹತೆಯ ವ್ಯಕ್ತಿಗಳು ಮಾತ್ರ ಪಡೆದುಕೊಳ್ಳುವ ವಿಶಿಷ್ಟ ಗೌರವವೆಂದು ಪರಿಗಣಿಸಲಾಗಿದೆ.

Related posts

ಕುರಾಯ ಶ್ರೀ ಸದಾಶಿವ ದೇವಸ್ಥಾನ ಪ್ರತಿಷ್ಠಾ ಮಹೋತ್ಸವ ಹಾಗೂ ವಾರ್ಷಿಕ ಜಾತ್ರೋತ್ಸವಕ್ಕೆ ನವಶಕ್ತಿ ಶಶಿಧರ ಶೆಟ್ಟಿ ಬರೋಡ ಭೇಟಿ

Suddi Udaya

ಇಂದಬೆಟ್ಟು : ಮಾತೃಶ್ರೀ ಮುಗೇರ ಸೇವಾ ಸಂಘದಿಂದ ಪುಸ್ತಕ ವಿತರಣೆ

Suddi Udaya

ಎಸ್ ಎಸ್ ಎಲ್ ಸಿ ಫಲಿತಾಂಶ: ಬೆಳಾಲು ಶ್ರೀ ಧ. ಮಂ. ಪ್ರೌಢಶಾಲೆಗೆ ಶೇ.100 ಸಾಧನೆ

Suddi Udaya

ಉಜಿರೆ: ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಪ್ರೊ. ಎಸ್. ಪ್ರಭಾಕರ್ ರವರ ಪತ್ನಿ ಶ್ರೀಮತಿ ಬಿ. ಸರೋಜಿನಿ ದೇವಿ ನಿಧನ

Suddi Udaya

ಪಶುಪರಿವೀಕ್ಷಕ ಹಲ್ಲೆ ಆರೋಪ; ಪಟ್ರಮೆಯ ನಿವಾಸಿ ಕುಸಿದು ಬಿದ್ದು ಮೃತ್ಯು

Suddi Udaya

ಮಾ.8: ಗುರುವಾಯನಕೆರೆ ಶಶಿಧರ ಶೆಟ್ಟಿಯವರ ನೇತೃತ್ವದಲ್ಲಿ ಭಾರತೀಯರ ಹೃದಯ ಸಾಮ್ರಾಟ್ “ಛತ್ರಪತಿ ಶಿವಾಜಿ” ಪ್ರಥಮ ನಾಟಕ : ನವಶಕ್ತಿ ಕ್ರೀಡಾಂಗಣದಲ್ಲಿ ಪ್ರದರ್ಶನ

Suddi Udaya
error: Content is protected !!