25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಅಂಡಿಂಜೆ ಪಾಂಡೀಲು ಹೊಸಮನೆ ಎಂಬಲ್ಲಿ ಮನೆಯ ಬೀಗವನ್ನು ಒಡೆದು ಒಳಗಿದ್ದ ಕಳ್ಳರು: ನಗ-ನಗದು ಸೇರಿದಂತೆ ‌ರೂ. 80 ಸಾವಿರ ಮೌಲ್ಯದ ಸೊತ್ತುಗಳ ಕಳವು

ಬೆಳ್ತಂಗಡಿ : ಅಂಡಿಂಜೆ ಗ್ರಾಮದ ಪಾಂಡೀಲು ಹೊಸಮನೆ ಎಂಬಲ್ಲಿ ರಾತ್ರಿ ಸಮಯ ಮನೆಯೊಂದರ‌ ಬೀಗವನ್ನು ಒಡೆದು
ನುಗ್ಗಿದ ಕಳ್ಳರು ನಗ-ನಗದು ಸೇರಿದಂತೆ ‌ರೂ. 80 ಸಾವಿರ ಮೌಲ್ಯದ ಸೊತ್ತುಗಳನ್ನು ಕಳವುಗೈದ ಘಟನೆ ಅ.28 ರಂದು ವರದಿಯಾಗಿದೆ.
ಅಂಡಿಂಜೆ ಗ್ರಾಮದ ಪಾಂಡೀಲು ಹೊಸ ಮನೆ. ಶ್ರೀಮತಿ ಸುಜಾತ ರಾಘವ ಪುತ್ರನ್ ಅವರ ಮನೆಯಿಂದ ಈ ಕಳ್ಳತನ ನಡೆಸಲಾಗಿದೆ.
ಅ. 27 ರಂದು ಸಂಜೆಯಿಂದ ಅ. 28ರ ಮದ್ಯಾಹ್ನ 12:15 ಗಂಟೆಯ ಮಧ್ಯೆ ಈ ಕಳ್ಳತನ ನಡೆಸಲಾಗಿದೆ.
ಶ್ರೀಮತಿ ಸುಜಾತ ಅವರು
ಮನೆಯ ಬಾಗಿಲಿಗೆ ಬೀಗ ಹಾಕಿ ತನ್ನ ತವರು ಮನೆಯಾದ ಅಳಿಯೂರು ಎಂಬಲ್ಲಿಗೆ ಹೋದ ಸಮಯ ಯಾರೋ ಕಳ್ಳರು ಮನೆಯ ಬಾಗಿಲಿನ ಬೀಗವನ್ನು ಮುರಿದು ಒಳಪ್ರವೇಶಿಸಿ ಮನೆಯ ಗೋದ್ರೇಜ್‌ ಕಪಾಟಿನಲ್ಲಿದ್ದ ನಗದು ಹಣ ರೂ. 25,000/- ಹಾಗೂ 5 ಗ್ರಾಂ ತೂಕದ ಬೆಂಡೋಲೆ ಒಂದು ಜೊತೆ ಹಾಗೂ 4 ಗ್ರಾಂ ತೂಕದ ಚಿನ್ನದ ಉಂಗುರ ಒಂದನ್ನು ಕಳವು ಮಾಡಿಕೊಂಡು ಹೋಗಿದ್ದಾರೆ . ಕಳುವಾದ ಸೊತ್ತುಗಳು, ನಗದು ಸೇರಿ ಒಟ್ಟು ಅಂದಾಜು ಮೌಲ್ಯ 80,000/ ರೂ ಆಗಬಹುದೆಂದು ಅಂದಾಜಿಸಲಾಗಿದೆ.‌ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಬೆಳ್ತಂಗಡಿ ಧರ್ಮಪ್ರಾಂತ್ಯದ ಪ್ರಾಂತೀಯ ಪಾಲನಾ ಸಮಿತಿಯ ವಾರ್ಷಿಕ ಮಹಾಸಭೆ

Suddi Udaya

ಬಂದಾರು ಗ್ರಾ.ಪಂ. ದ್ವಿತೀಯ ಹಂತದ ಗ್ರಾಮ ಸಭೆ

Suddi Udaya

ಆಮಂತ್ರಣ ಪರಿವಾರದ ಸಾರಥ್ಯದಲ್ಲಿ ಸಾವಿರಾರು ಭಜಕರಿಂದ ಅಳದಂಗಡಿ ಅರಮನೆ ನಗರಿಯಲ್ಲಿ ಭಕ್ತಿಯ ಅಲೆ ಎಬ್ಬಿಸಿದ ಕುಣಿತಾ ಭಜನೆ

Suddi Udaya

ಭಾರತೀಯ ಮಜ್ದೂರ್ ಸಂಘದ ರಾಷ್ಟ್ರೀಯ ಪ್ರಮುಖರಿಂದ ಸೇವಾಧಾಮಕ್ಕೆ ಭೇಟಿ

Suddi Udaya

ಬೆಳ್ತಂಗಡಿ : ವರ್ಗಾವಣೆಗೊಂಡ ಪೊಲೀಸ್ ಸಿಬ್ಬಂದಿಗಳಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಜು.7: ಮರಳು ಮತ್ತು ಕೆಂಪು ಕಲ್ಲಿನ ಕೊರತೆಯಿಂದ ಕಾರ್ಮಿಕರು ಎದುರಿಸುತ್ತಿರುವ ಗಂಭೀರ ಸಮಸ್ಯೆಗಳ ವಿರುದ್ಧ ಪ್ರತಿಭಟನೆ

Suddi Udaya
error: Content is protected !!