July 23, 2026
ಗ್ರಾಮಾಂತರ ಸುದ್ದಿ

ಅಪಘಾತದಲ್ಲಿ ಸಾವು; ನವೋದಯ ಗುಂಪಿನ ಸದಸ್ಯೆಗೆ 1 ಲಕ್ಷ ರೂ. ವಿಮೆ ಚೆಕ್ ಹಸ್ತಾಂತರ

ಬಂಗಾಡಿ ಸಹಕಾರಿ ಸಂಘದ ನಾವೂರು ಶಾಖೆಯಲ್ಲಿ ಖಾತೆಯನ್ನು ಹೊಂದಿರುವ ಶಿವಪಾರ್ವತಿ ನವೋದಯ ಸ್ವ ಸಹಾಯ ಗುಂಪಿನ ಸದಸ್ಯೆ ಕಮಲಾ ಅವರು ವಾಹನ ಅಪಘಾತದಿಂದ ಮೃತಪಟ್ಟಿದ್ದು, ಅವರಿಗೆ ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಚೈತನ್ಯ ವಿಮಾ ಯೋಜನೆಯಡಿಯಲ್ಲಿ ಮಂಜೂರಾದ ಒಂದು ಲಕ್ಷ ರೂ. ಮೊತ್ತದ ಚೆಕ್ ನ್ನು ಅವರ ಕುಟುಂಬಸ್ಥರಿಗೆ ಬಂಗಾಡಿ ಸಹಕಾರಿ ಬ್ಯಾಂಕ್ ನ ಅಧ್ಯಕ್ಷ ಹರೀಶ್ ಸಾಲ್ಯಾನ್ ಮೋರ್ತಾಜೆ ಇವರು ಹಾಸ್ತಾoತರಿಸಿದರು.

ಮೃತರ ನಾಮಿನಿ ಯಾಗಿದ್ದ ಅವರ ಪತಿ ನಾವೂರಿನ ಸಂಜೀವ ಮಲೆಕುಡಿಯ, ಹಾಗೂ ಅವರ ಪುತ್ರ ರಮೇಶ್ ಮಲೆಕುಡಿಯ ಪರಿಹಾರದ ಚೆಕ್ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಸಹಕಾರಿ‌ಸಂಘದ ಸಿಇಒ ದಯಾನಂದ ಶೆಟ್ಟಿಗಾರ್, ಸಹಾಯಕ ಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ, ಸಿಬ್ಬಂದಿಗಳಾದ ರಮಾನಂದ ಮತ್ತು ಮಂಜುನಾಥ ಗೌಡ, ನವೋದಯ ಸಿಬ್ಬಂದಿಗಳಾದ ಸುಮಿತ್ರಾ ಬಂಗಾಡಿ ಮತ್ತು ಜಯರಾಮ ಬಂಗಾಡಿ ಉಪಸ್ಥಿತರಿದ್ದರು.

Related posts

ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯಲ್ಲಿ ವೈಭವದ ಸಿರಿಹಬ್ಬ-2026 ಉದ್ಘಾಟನೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

Suddi Udaya

ಉಜಿರೆ: ಅನುಗ್ರಹ ಆಂ.ಮಾ. ಪ್ರೌಢಶಾಲೆಯಲ್ಲಿ ಮಾದಕ ವಸ್ತುಗಳ ಸೇವನೆ ಹಾಗೂ ದುಷ್ಪರಿಣಾಮಗಳ ಮಾಹಿತಿ ಕಾರ್ಯಾಗಾರ

Suddi Udaya

ಪುದುವೆಟ್ಟು ಮಿಯ್ಯಾರು ಶ್ರೀ ವನದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಪೂಜೆ

Suddi Udaya

ಕೃಷಿ ರಕ್ಷಣೆಗಾಗಿ ಆಯುಧಗಳನ್ನು ಹಿಂಪಡೆಯಲು ಜಿಲ್ಲಾಧಿಕಾರಿ ಮುಲೈ ಮುಹಿಲನ್ ಆದೇಶ

Suddi Udaya

ವೇಣೂರು ಗೋಳಿದಡ್ಕ ನಿವಾಸಿ ಮಂಜಪ್ಪ ದೇವಾಡಿಗ ನಿಧನ

Suddi Udaya
error: Content is protected !!