23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನ.3: ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ “ಬಂಟೆರೆ ತುಡರ್ ಪರ್ಬ”

ಬೆಳ್ತಂಗಡಿ: ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ, ಮಹಿಳಾ ಬಂಟರ ವಿಭಾಗ ಹಾಗೂ ಯುವ ಬಂಟರ ವಿಭಾಗ ಆಶ್ರಯದಲ್ಲಿ ಬೆಳಕಿನ ಹಬ್ಬ ದೀಪಾವಳಿ ಸಂಭ್ರಮಾಚರಣೆ ಪ್ರಯುಕ್ತ “ಬಂಟೆರೆ ತುಡರ್ ಪರ್ಬ” ನ.3ರಂದು ಗುರುವಾಯನಕೆರೆ ಬಂಟರ ಭವನದಲ್ಲಿ ನಡೆಯಲಿದೆ.

ಅಪರಾಹ್ನ ಗಂಟೆ 3.00ಕ್ಕೆ ದೀಪ ಪ್ರಜ್ವಲನೆ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಜಿಲ್ಲಾ ಉಪಾಧ್ಯಕ್ಷರು ಶ್ರೀಮತಿ ಶಾರದಾ ರೈ ಕಣಿಯೂರು ನೆರವೇರಿಸಲಿದ್ದಾರೆ. ಅಪರಾಹ್ನ ಗಂಟೆ 3.15ರಿಂದ ಬಂಟರ ಮಹಿಳಾ ವಿಭಾಗದ ಸದಸ್ಯರಿಂದ ಭಜನಾ ಕಾರ್ಯಕ್ರಮ, ಸಂಜೆ ಗಂಟೆ 4.30ಕ್ಕೆ ಸಭಾ ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಬೆಳ್ತಂಗಡಿ ಬಂಟರ ಮಹಿಳಾ ವಿಭಾಗ ಅಧ್ಯಕ್ಷೆ ಶ್ರೀಮತಿ ಜಯಲಕ್ಷ್ಮಿ ಎನ್. ಸಾಮಾನಿ, ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಮಂಗಳೂರು ಆಸರೆ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷೆ ಡಾ। ಆಶಾಜ್ಯೋತಿ ರೈ, ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ ಅಧ್ಯಕ್ಷ ಜಯಂತ ಶೆಟ್ಟಿ ಭಂಡಾರಿಗುಡ್ಡೆ, ಬೆಂಗಳೂರು ಕ್ವಾರಿ ಸ್ಟೋನ್ ಕ್ರಶರ್ ಅಸೋಸಿಯೇಶನ್ ರಾಜ್ಯಾಧ್ಯಕ್ಷ ಡಾ| ರವೀಂದ್ರ ಶೆಟ್ಟಿ ಬಜಗೋಳಿ ಭಾಗವಹಿಸಲಿದ್ದಾರೆ.

ಸಂಜೆ ಗಂಟೆ 5.30ರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು, ರಾತ್ರಿ ಗಂಟೆ 7.00ರಿಂದ ದೀಪಾರಾಧನೆ, ಗೋಪೂಜೆ, ಬಲಿಯೇಂದ್ರ ಪೂಜೆ, ಸುಡುಮದ್ದು ಪ್ರದರ್ಶನ ಮತ್ತು ಸಹಭೋಜನ ನಡೆಯಲಿದೆ,

Related posts

ತೆಕ್ಕಾರು: ಸರಳಿಕಟ್ಟೆ ಜಂಕ್ಷನ್ ನಲ್ಲಿ ಮೋರಿ ಕುಸಿತ

Suddi Udaya

ನೈರುತ್ಯ ಪದವೀಧರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ‌ ಮತ್ತು ಜೆಡಿಎಸ್ ಜಂಟಿ ಅಭ್ಯರ್ಥಿಗಳ ಜಯ

Suddi Udaya

ಪಣಕಜೆಯ ಅರ್ಕಜೆ ಬಳಿ ಮನೆಗೆ ಗುಡ್ಡ ಕುಸಿದು ಹಾನಿ: ಮಡಂತ್ಯಾರು ಶೌರ್ಯ ಘಟಕದ ಸ್ವಯಂ ಸೇವಕರಿಂದ ಮಣ್ಣು ತೆರವು ಕಾರ್ಯ

Suddi Udaya

ಮರೋಡಿ: ಜ.27 ರಂದು ಅಂಬ್ಯುಲೆನ್ಸ್ ಲೋಕಾರ್ಪಣೆ

Suddi Udaya

ಮೈಸೂರಿನಲ್ಲಿ ನಾಪತ್ತೆಯಾಗಿದ್ದ ಸ್ಕೂಟರ್ ಉಜಿರೆಯಲ್ಲಿ ಪತ್ತೆ: ಬೆಳ್ತಂಗಡಿ ಸಂಚಾರಿ ಪೊಲೀಸರಿಂದ ಸ್ಕೂಟರ್ ಪತ್ತೆ ಹಚ್ಚಿ ಮಾಲೀಕರಿಗೆ ಹಸ್ತಾಂತರ

Suddi Udaya

ಲಾಯಿಲ: ಕಿಂಡಿ ಅಣೆಕಟ್ಟುವಿನಲ್ಲಿ ಅಡ್ಡಲಾಗಿ ಬಿದ್ದಿದ್ದ ಮರದ ದಿಮ್ಮಿಗಳ ತೆರವು ಕಾರ್ಯ

Suddi Udaya
error: Content is protected !!