26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನ.3: ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ “ಬಂಟೆರೆ ತುಡರ್ ಪರ್ಬ”

ಬೆಳ್ತಂಗಡಿ: ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ, ಮಹಿಳಾ ಬಂಟರ ವಿಭಾಗ ಹಾಗೂ ಯುವ ಬಂಟರ ವಿಭಾಗ ಆಶ್ರಯದಲ್ಲಿ ಬೆಳಕಿನ ಹಬ್ಬ ದೀಪಾವಳಿ ಸಂಭ್ರಮಾಚರಣೆ ಪ್ರಯುಕ್ತ “ಬಂಟೆರೆ ತುಡರ್ ಪರ್ಬ” ನ.3ರಂದು ಗುರುವಾಯನಕೆರೆ ಬಂಟರ ಭವನದಲ್ಲಿ ನಡೆಯಲಿದೆ.

ಅಪರಾಹ್ನ ಗಂಟೆ 3.00ಕ್ಕೆ ದೀಪ ಪ್ರಜ್ವಲನೆ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಜಿಲ್ಲಾ ಉಪಾಧ್ಯಕ್ಷರು ಶ್ರೀಮತಿ ಶಾರದಾ ರೈ ಕಣಿಯೂರು ನೆರವೇರಿಸಲಿದ್ದಾರೆ. ಅಪರಾಹ್ನ ಗಂಟೆ 3.15ರಿಂದ ಬಂಟರ ಮಹಿಳಾ ವಿಭಾಗದ ಸದಸ್ಯರಿಂದ ಭಜನಾ ಕಾರ್ಯಕ್ರಮ, ಸಂಜೆ ಗಂಟೆ 4.30ಕ್ಕೆ ಸಭಾ ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಬೆಳ್ತಂಗಡಿ ಬಂಟರ ಮಹಿಳಾ ವಿಭಾಗ ಅಧ್ಯಕ್ಷೆ ಶ್ರೀಮತಿ ಜಯಲಕ್ಷ್ಮಿ ಎನ್. ಸಾಮಾನಿ, ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಮಂಗಳೂರು ಆಸರೆ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷೆ ಡಾ। ಆಶಾಜ್ಯೋತಿ ರೈ, ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ ಅಧ್ಯಕ್ಷ ಜಯಂತ ಶೆಟ್ಟಿ ಭಂಡಾರಿಗುಡ್ಡೆ, ಬೆಂಗಳೂರು ಕ್ವಾರಿ ಸ್ಟೋನ್ ಕ್ರಶರ್ ಅಸೋಸಿಯೇಶನ್ ರಾಜ್ಯಾಧ್ಯಕ್ಷ ಡಾ| ರವೀಂದ್ರ ಶೆಟ್ಟಿ ಬಜಗೋಳಿ ಭಾಗವಹಿಸಲಿದ್ದಾರೆ.

ಸಂಜೆ ಗಂಟೆ 5.30ರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು, ರಾತ್ರಿ ಗಂಟೆ 7.00ರಿಂದ ದೀಪಾರಾಧನೆ, ಗೋಪೂಜೆ, ಬಲಿಯೇಂದ್ರ ಪೂಜೆ, ಸುಡುಮದ್ದು ಪ್ರದರ್ಶನ ಮತ್ತು ಸಹಭೋಜನ ನಡೆಯಲಿದೆ,

Related posts

ನಿಡ್ಲೆ: ನೆಡಿಲು ನಾರಾಯಣ ಗೌಡರವರ ತೋಟಕ್ಕೆ ನುಗ್ಗಿದ್ದ ಒಂಟಿ ಸಲಗ: ಹಲವು ಬಾಳೆ ಗಿಡ ಹಾಗೂ ಅಡಿಕೆ ಗಿಡಗಳಿಗೆ ಹಾನಿ

Suddi Udaya

ಕಳೆಂಜ: ಮಣಿಗೇರಿ, ಕುಲಾಡಿ ಕಾಂಕ್ರೀಟ್ ರಸ್ತೆಯ ಕಾಮಗಾರಿ ಅಂತಿಮ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಸಂಭ್ರಮ

Suddi Udaya

ಬೆಳ್ತಂಗಡಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ: ಶಾಸಕರ ವಿರುದ್ಧ ಪ್ರಕರಣ ದಾಖಲು

Suddi Udaya

ಮುಂಡಾಜೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ರೂ. 3 ಕೋಟಿ ಅನುದಾನದಲ್ಲಿ ನಿರ್ಮಾಣಗೊಳ್ಳಲಿರುವ ಫುಟ್ಬಾಲ್ ಕ್ರೀಡಾಂಗಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya

ಕಲ್ಮಂಜ : ಸಿದ್ದಬೈಲು ಪರಾರಿ ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

Suddi Udaya
error: Content is protected !!