25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನ.3: ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ “ಬಂಟೆರೆ ತುಡರ್ ಪರ್ಬ”

ಬೆಳ್ತಂಗಡಿ: ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ, ಮಹಿಳಾ ಬಂಟರ ವಿಭಾಗ ಹಾಗೂ ಯುವ ಬಂಟರ ವಿಭಾಗ ಆಶ್ರಯದಲ್ಲಿ ಬೆಳಕಿನ ಹಬ್ಬ ದೀಪಾವಳಿ ಸಂಭ್ರಮಾಚರಣೆ ಪ್ರಯುಕ್ತ “ಬಂಟೆರೆ ತುಡರ್ ಪರ್ಬ” ನ.3ರಂದು ಗುರುವಾಯನಕೆರೆ ಬಂಟರ ಭವನದಲ್ಲಿ ನಡೆಯಲಿದೆ.

ಅಪರಾಹ್ನ ಗಂಟೆ 3.00ಕ್ಕೆ ದೀಪ ಪ್ರಜ್ವಲನೆ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಜಿಲ್ಲಾ ಉಪಾಧ್ಯಕ್ಷರು ಶ್ರೀಮತಿ ಶಾರದಾ ರೈ ಕಣಿಯೂರು ನೆರವೇರಿಸಲಿದ್ದಾರೆ. ಅಪರಾಹ್ನ ಗಂಟೆ 3.15ರಿಂದ ಬಂಟರ ಮಹಿಳಾ ವಿಭಾಗದ ಸದಸ್ಯರಿಂದ ಭಜನಾ ಕಾರ್ಯಕ್ರಮ, ಸಂಜೆ ಗಂಟೆ 4.30ಕ್ಕೆ ಸಭಾ ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಬೆಳ್ತಂಗಡಿ ಬಂಟರ ಮಹಿಳಾ ವಿಭಾಗ ಅಧ್ಯಕ್ಷೆ ಶ್ರೀಮತಿ ಜಯಲಕ್ಷ್ಮಿ ಎನ್. ಸಾಮಾನಿ, ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಮಂಗಳೂರು ಆಸರೆ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷೆ ಡಾ। ಆಶಾಜ್ಯೋತಿ ರೈ, ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ ಅಧ್ಯಕ್ಷ ಜಯಂತ ಶೆಟ್ಟಿ ಭಂಡಾರಿಗುಡ್ಡೆ, ಬೆಂಗಳೂರು ಕ್ವಾರಿ ಸ್ಟೋನ್ ಕ್ರಶರ್ ಅಸೋಸಿಯೇಶನ್ ರಾಜ್ಯಾಧ್ಯಕ್ಷ ಡಾ| ರವೀಂದ್ರ ಶೆಟ್ಟಿ ಬಜಗೋಳಿ ಭಾಗವಹಿಸಲಿದ್ದಾರೆ.

ಸಂಜೆ ಗಂಟೆ 5.30ರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು, ರಾತ್ರಿ ಗಂಟೆ 7.00ರಿಂದ ದೀಪಾರಾಧನೆ, ಗೋಪೂಜೆ, ಬಲಿಯೇಂದ್ರ ಪೂಜೆ, ಸುಡುಮದ್ದು ಪ್ರದರ್ಶನ ಮತ್ತು ಸಹಭೋಜನ ನಡೆಯಲಿದೆ,

Related posts

ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಬಂದಾರು ಕಲ್ಲಿಮಾರು ನಿವಾಸಿ ಹರಿಶ್ಚಂದ್ರರಿಗೆ ಸ್ಪಂದನಾ ಸೇವಾ ಸಂಘದ ಸೇವಾ ಯೋಜನೆಯಿಂದ ಧನಸಹಾಯ

Suddi Udaya

ಕೊಕ್ಕಡ: ಶ್ರೀರಾಮ ಸೇವಾ ಟ್ರಸ್ಟ್ ಸಭೆ: ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ: ಶಾಸಕರ ವಿರುದ್ಧ ಪ್ರಕರಣ ದಾಖಲು

Suddi Udaya

ಭಾರತೀಯ ರಿಸರ್ವ್ ಬ್ಯಾಂಕಿನಿಂದ ಸೇವಾಭಾರತಿಗೆ ಅಂಬ್ಯುಲೆನ್ಸ್ ಕೊಡುಗೆ

Suddi Udaya

2 ಲಕ್ಷ ಮೌಲ್ಯ ದ ಚಿನ್ನದ ಬ್ರೇಸ್ ಲೆಟ್ ಮರಳಿಸಿ‌ ಪ್ರಾಮಾಣಿಕತೆ ಮೆರೆದ ಬದ್ಯಾರಿನ ಝೈನುದ್ದೀನ್

Suddi Udaya

ಲಾಯಿಲ : ಹಳೇಪೇಟೆ ಶ್ರೀ ಸರಸ್ವತಿ ಭಜನಾ ಮಂಡಳಿಯ ನೂತನ ಮಂದಿರದ ಶಿಲಾನ್ಯಾಸ ಕಾರ್ಯಕ್ರಮ

Suddi Udaya
error: Content is protected !!