24 C
ಪುತ್ತೂರು, ಬೆಳ್ತಂಗಡಿ
April 3, 2025
ತಾಲೂಕು ಸುದ್ದಿ

ಹಾಜಿ ಅಬ್ದುಲ್ ಲತೀಫ್ ಸಾಹೇಬ್ ಅವರಿಗೆ ಯುಎಇ 10 ವರ್ಷದ ಗೋಲ್ಡನ್ ವೀಸಾ

ಬೆಳ್ತಂಗಡಿ; ಹಿರಿಯ ಸಾಮಾಜಿಕ ಜನಪರ ಸಂಘಟನೆಯಾದ ಜಮೀಯುಲ್ ಫಲಾಹ್ ಇದರ ಮಾಜಿ ಜಿಲ್ಲಾಧ್ಯಕ್ಷ ಹಾಗೂ ಹಾಲಿ ಗೌರವಾಧ್ಯಕ್ಷ ಮಾಲಾಡಿ ಗ್ರಾಮದ
ಹಾಜಿ ಅಬ್ದುಲ್ ಲತೀಫ್ ಸಾಹೇಬ್ ಕೊಲ್ಪೆದಬೈಲು ಅವರಿಗೆ ಯುಎಇ ಸರ್ಕಾರವು 10 ವರ್ಷಗಳ ಗೋಲ್ಡನ್ ವೀಸಾ ನೀಡಿ ಗೌರವ ತೋರಿದೆ.

ಹಾಜಿ ಅಬ್ದುಲ್ ಲತೀಫ್ ಸಾಹೇಬ್ ಅವರು ಅತ್ಯುತ್ತಮ ಸಂಘಟಕರಾಗಿ, ಕೊಡುಗೈ ದಾನಿಯಾಗಿ ಹಲವು ಸಾಮಾಜಿಕ ಸಂಸ್ಥೆಗಳ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಮುಖ್ಯವಾಗಿ ಶಿಕ್ಷಣ, ಮಕ್ಕಳ ಕಲ್ಯಾಣ ಹಾಗೂ ಮುಸ್ಲಿಂ ಸಮುದಾಯದ ಅಭಿವೃದ್ಧಿ ಕ್ಷೇತ್ರಗಳಲ್ಲಿ ನಿರಂತರವಾಗಿ ಶ್ರಮ ಸೇವೆ ನೀಡಿದ್ದಾರೆ.
ಅವರ ಈ ಸಾಧನೆ ಹಾಗೂ ಸೇವಾ ಕಾರ್ಯಗಳನ್ನು ಗುರುತಿಸಿ ಯುಎಇ ಸರಕಾರ ಅವರಿಗೆ ಈ ಮಾನ್ಯತೆ ನೀಡಿ ಪುರಸ್ಕರಿಸಿದೆ.

ಈ ಗೌರವಾನ್ವಿತ ಗೋಲ್ಡನ್ ವೀಸಾವನ್ನು ಪ್ರಮುಖ ಹೂಡಿಕೆದಾರರು, ಶ್ರೇಷ್ಠ ಉದ್ಯಮಿಗಳು, ಪರಿಣತ ವೃತ್ತಿಪರರು, ವಿಜ್ಞಾನಿಗಳು, ಸಂಶೋಧಕರು ಮತ್ತು ಮಾನವೀಯ ಕಾರ್ಯಗಳಿಗೆ ತೊಡಗಿರುವವರನ್ನು ಅರ್ಹತೆಯ ಮೇಲೆ ಆಯ್ಕೆ ಮಾಡಲಾಗುತ್ತದೆ.
ಯುಎಇ ನಲ್ಲಿ ಸುಧೀರ್ಘ ವಾಸದ ಸೌಲಭ್ಯಗಳನ್ನೂ ಒಳಗೊಂಡ ಈ ವೀಸಾವನ್ನು ನಿರ್ದಿಷ್ಟ ಅರ್ಹತೆಯ ವ್ಯಕ್ತಿಗಳು ಮಾತ್ರ ಪಡೆದುಕೊಳ್ಳುವ ವಿಶಿಷ್ಟ ಗೌರವವೆಂದು ಪರಿಗಣಿಸಲಾಗಿದೆ.

Related posts

ಬೆಳ್ತಂಗಡಿ : ಶ್ರೀ ಧ.ಮಂ.ಆಂ.ಮಾ. ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತೆ ಹಾಗೂ ಸಂಚಾರಿ ನಿಯಮದ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಬಕ್ರೀದ್ ಹಬ್ಬ ಆಚರಣೆ

Suddi Udaya

ಬೀಡಿ ಬ್ರಾಂಚ್ ನ ಕಟ್ಟಡದ ಅಡ್ಡಕ್ಕೆ ವ್ಯಕ್ತಿ ನೇಣು ಹಾಕಿಕೊಂಡು ಆತ್ಮಹತ್ಯೆ

Suddi Udaya

ಎಸ್‌.ಡಿ.ಎಂ ಸ್ನಾತಕೋತ್ತರ ಕೇಂದ್ರದ ಸಮಾಜಕಾರ್ಯ ಮತ್ತು ಸಂಶೋಧನಾ ವಿಭಾಗದಿಂದ ಅಗ್ನಿ ಸುರಕ್ಷತೆ, ಆರೋಗ್ಯ ಸುರಕ್ಷತೆ, ಹಾಗೂ ವಿಪತ್ತು ನಿರ್ವಹಣೆ ಕುರಿತು ಜಾಗೃತಿ ತರಬೇತಿ

Suddi Udaya

ಜಿಲ್ಲಾ ಮಟ್ಟದ ಭಾವೈಕ್ಯತೆ ಮಕ್ಕಳ ಮೇಳ: ಕುಂಭಶ್ರೀ ಶಾಲಾ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಮಡಂತ್ಯಾರು: ಬಿ ಎಂ ಆಟೋ ಚಾಲಕ ಮಾಲಕರ ಸಂಘದ ವಾರ್ಷಿಕ ಸಭೆ

Suddi Udaya
error: Content is protected !!