25.5 C
ಪುತ್ತೂರು, ಬೆಳ್ತಂಗಡಿ
April 24, 2026
ತಾಲೂಕು ಸುದ್ದಿ

ಹಾಜಿ ಅಬ್ದುಲ್ ಲತೀಫ್ ಸಾಹೇಬ್ ಅವರಿಗೆ ಯುಎಇ 10 ವರ್ಷದ ಗೋಲ್ಡನ್ ವೀಸಾ

ಬೆಳ್ತಂಗಡಿ; ಹಿರಿಯ ಸಾಮಾಜಿಕ ಜನಪರ ಸಂಘಟನೆಯಾದ ಜಮೀಯುಲ್ ಫಲಾಹ್ ಇದರ ಮಾಜಿ ಜಿಲ್ಲಾಧ್ಯಕ್ಷ ಹಾಗೂ ಹಾಲಿ ಗೌರವಾಧ್ಯಕ್ಷ ಮಾಲಾಡಿ ಗ್ರಾಮದ
ಹಾಜಿ ಅಬ್ದುಲ್ ಲತೀಫ್ ಸಾಹೇಬ್ ಕೊಲ್ಪೆದಬೈಲು ಅವರಿಗೆ ಯುಎಇ ಸರ್ಕಾರವು 10 ವರ್ಷಗಳ ಗೋಲ್ಡನ್ ವೀಸಾ ನೀಡಿ ಗೌರವ ತೋರಿದೆ.

ಹಾಜಿ ಅಬ್ದುಲ್ ಲತೀಫ್ ಸಾಹೇಬ್ ಅವರು ಅತ್ಯುತ್ತಮ ಸಂಘಟಕರಾಗಿ, ಕೊಡುಗೈ ದಾನಿಯಾಗಿ ಹಲವು ಸಾಮಾಜಿಕ ಸಂಸ್ಥೆಗಳ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಮುಖ್ಯವಾಗಿ ಶಿಕ್ಷಣ, ಮಕ್ಕಳ ಕಲ್ಯಾಣ ಹಾಗೂ ಮುಸ್ಲಿಂ ಸಮುದಾಯದ ಅಭಿವೃದ್ಧಿ ಕ್ಷೇತ್ರಗಳಲ್ಲಿ ನಿರಂತರವಾಗಿ ಶ್ರಮ ಸೇವೆ ನೀಡಿದ್ದಾರೆ.
ಅವರ ಈ ಸಾಧನೆ ಹಾಗೂ ಸೇವಾ ಕಾರ್ಯಗಳನ್ನು ಗುರುತಿಸಿ ಯುಎಇ ಸರಕಾರ ಅವರಿಗೆ ಈ ಮಾನ್ಯತೆ ನೀಡಿ ಪುರಸ್ಕರಿಸಿದೆ.

ಈ ಗೌರವಾನ್ವಿತ ಗೋಲ್ಡನ್ ವೀಸಾವನ್ನು ಪ್ರಮುಖ ಹೂಡಿಕೆದಾರರು, ಶ್ರೇಷ್ಠ ಉದ್ಯಮಿಗಳು, ಪರಿಣತ ವೃತ್ತಿಪರರು, ವಿಜ್ಞಾನಿಗಳು, ಸಂಶೋಧಕರು ಮತ್ತು ಮಾನವೀಯ ಕಾರ್ಯಗಳಿಗೆ ತೊಡಗಿರುವವರನ್ನು ಅರ್ಹತೆಯ ಮೇಲೆ ಆಯ್ಕೆ ಮಾಡಲಾಗುತ್ತದೆ.
ಯುಎಇ ನಲ್ಲಿ ಸುಧೀರ್ಘ ವಾಸದ ಸೌಲಭ್ಯಗಳನ್ನೂ ಒಳಗೊಂಡ ಈ ವೀಸಾವನ್ನು ನಿರ್ದಿಷ್ಟ ಅರ್ಹತೆಯ ವ್ಯಕ್ತಿಗಳು ಮಾತ್ರ ಪಡೆದುಕೊಳ್ಳುವ ವಿಶಿಷ್ಟ ಗೌರವವೆಂದು ಪರಿಗಣಿಸಲಾಗಿದೆ.

Related posts

ಹಾಪ್ ಕಾಮ್ಸ್ ನಿರ್ದೇಶಕರಾಗಿ  ರತ್ನರಾಜ್ ಪೇರಂದಬೈಲ್ ಆಯ್ಕೆ        

Suddi Udaya

ಉಜಿರೆ ಶ್ರೀ ಧ. ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ: ಬದುಕಿನ ಸ್ಫೂರ್ತಿ ಪಡೆಯಲು ಎನ್ನೆನ್ನೆಸ್ ಅಡಿಪಾಯ – ಎ. ಜೀವಂಧರ ಕುಮಾರ್

Suddi Udaya

ಕೊಕ್ಕಡ: ಇತ್ತೀಚೆಗೆ ನಿಧನರಾದ ತಿಮ್ಮಪ್ಪ ಗೌಡ ರವರ ಸವಿ ನೆನಪಿಗಾಗಿ ಪುತ್ರ ಗಣೇಶ್ ಗೌಡ ಕಲಾಯಿಯವರಿಂದ 800 ಹಣ್ಣಿನ ಗಿಡ ವಿತರಣೆ

Suddi Udaya

ಜ.17 ಮಡಂತ್ಯಾರು ಜೆಸಿಐ ಪದ ಪ್ರಧಾನ ಸಮಾರಂಭ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಧರ್ಮಸ್ಥಳ: ಶಾಂತಿವನ ಯೋಗ ಮತ್ತು ಪ್ರಕೃತಿ ಚಿಕಿತ್ಸಾಲಯದಲ್ಲಿ ಗಣರಾಜ್ಯೋತ್ಸವ ಆಚರಣೆ – ಭಾರತ ವಿಶ್ವಗುರುವಾಗಬೇಕು : ಎಚ್.ಎನ್. ಚಂದ್ರಶೇಖರ್

Suddi Udaya

ಬಂಗೇರರು ಕೊನೆಯ ಬಾರಿ ವಿಧಾನಸೌಧಕ್ಕೆ ಭೇಟಿ ನೀಡಿ ಶಿಫಾರಸ್ಸು ಮಾಡಿದ ವೇಣೂರು ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘಕ್ಕೆ ಜಮೀನು ಮಂಜೂರು ಮಾಡಿ ಗೌರವ ನೀಡಿದ ಮುಖ್ಯಮಂತ್ರಿಗಳು

Suddi Udaya
error: Content is protected !!