July 23, 2026
ತಾಲೂಕು ಸುದ್ದಿ

ಹಾಜಿ ಅಬ್ದುಲ್ ಲತೀಫ್ ಸಾಹೇಬ್ ಅವರಿಗೆ ಯುಎಇ 10 ವರ್ಷದ ಗೋಲ್ಡನ್ ವೀಸಾ

ಬೆಳ್ತಂಗಡಿ; ಹಿರಿಯ ಸಾಮಾಜಿಕ ಜನಪರ ಸಂಘಟನೆಯಾದ ಜಮೀಯುಲ್ ಫಲಾಹ್ ಇದರ ಮಾಜಿ ಜಿಲ್ಲಾಧ್ಯಕ್ಷ ಹಾಗೂ ಹಾಲಿ ಗೌರವಾಧ್ಯಕ್ಷ ಮಾಲಾಡಿ ಗ್ರಾಮದ
ಹಾಜಿ ಅಬ್ದುಲ್ ಲತೀಫ್ ಸಾಹೇಬ್ ಕೊಲ್ಪೆದಬೈಲು ಅವರಿಗೆ ಯುಎಇ ಸರ್ಕಾರವು 10 ವರ್ಷಗಳ ಗೋಲ್ಡನ್ ವೀಸಾ ನೀಡಿ ಗೌರವ ತೋರಿದೆ.

ಹಾಜಿ ಅಬ್ದುಲ್ ಲತೀಫ್ ಸಾಹೇಬ್ ಅವರು ಅತ್ಯುತ್ತಮ ಸಂಘಟಕರಾಗಿ, ಕೊಡುಗೈ ದಾನಿಯಾಗಿ ಹಲವು ಸಾಮಾಜಿಕ ಸಂಸ್ಥೆಗಳ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಮುಖ್ಯವಾಗಿ ಶಿಕ್ಷಣ, ಮಕ್ಕಳ ಕಲ್ಯಾಣ ಹಾಗೂ ಮುಸ್ಲಿಂ ಸಮುದಾಯದ ಅಭಿವೃದ್ಧಿ ಕ್ಷೇತ್ರಗಳಲ್ಲಿ ನಿರಂತರವಾಗಿ ಶ್ರಮ ಸೇವೆ ನೀಡಿದ್ದಾರೆ.
ಅವರ ಈ ಸಾಧನೆ ಹಾಗೂ ಸೇವಾ ಕಾರ್ಯಗಳನ್ನು ಗುರುತಿಸಿ ಯುಎಇ ಸರಕಾರ ಅವರಿಗೆ ಈ ಮಾನ್ಯತೆ ನೀಡಿ ಪುರಸ್ಕರಿಸಿದೆ.

ಈ ಗೌರವಾನ್ವಿತ ಗೋಲ್ಡನ್ ವೀಸಾವನ್ನು ಪ್ರಮುಖ ಹೂಡಿಕೆದಾರರು, ಶ್ರೇಷ್ಠ ಉದ್ಯಮಿಗಳು, ಪರಿಣತ ವೃತ್ತಿಪರರು, ವಿಜ್ಞಾನಿಗಳು, ಸಂಶೋಧಕರು ಮತ್ತು ಮಾನವೀಯ ಕಾರ್ಯಗಳಿಗೆ ತೊಡಗಿರುವವರನ್ನು ಅರ್ಹತೆಯ ಮೇಲೆ ಆಯ್ಕೆ ಮಾಡಲಾಗುತ್ತದೆ.
ಯುಎಇ ನಲ್ಲಿ ಸುಧೀರ್ಘ ವಾಸದ ಸೌಲಭ್ಯಗಳನ್ನೂ ಒಳಗೊಂಡ ಈ ವೀಸಾವನ್ನು ನಿರ್ದಿಷ್ಟ ಅರ್ಹತೆಯ ವ್ಯಕ್ತಿಗಳು ಮಾತ್ರ ಪಡೆದುಕೊಳ್ಳುವ ವಿಶಿಷ್ಟ ಗೌರವವೆಂದು ಪರಿಗಣಿಸಲಾಗಿದೆ.

Related posts

ಗೇರುಕಟ್ಟೆ : ಕಳಿಯ, ನ್ಯಾಯತರ್ಪು ಪ್ರದೇಶದಲ್ಲಿ ಏರ್ ಟೆಲ್ ನೆಟ್ವರ್ಕ್ ಸಮಸ್ಯೆ

Suddi Udaya

ಪರೀಕ್ಷೆಗೆ ಸಂಬಂಧಿಸಿದ ಗೊಂದಲಗಳನ್ನು ಪರಿಹರಿಸಲು ಕೂಡಲೇ ಕ್ರಮಕೈಗೊಳ್ಳುವಂತೆ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ರಿಂದ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಿಗೆ ಆಗ್ರಹ

Suddi Udaya

ಶ್ರೀ ಕ್ಷೇತ್ರ ಪಡ್ಯಾರಬೆಟ್ಟ ಕೊಡಮಣಿತ್ತಾಯ ದೈವಸ್ಥಾನದಲ್ಲಿ ನಾಲ್ಕೆತ್ತು ಕೋಲ

Suddi Udaya

ಮಂಗಳೂರಿನ ಎ.ಆರ್.ಎಂ ಕಿಯಾ ಶೋರೂಮ್‌ನಲ್ಲಿ ನೂತನ “ಕಿಯಾ ಸೆಲ್ಟೋಸ್” ಕಾರು ಅನಾವರಣ

Suddi Udaya

ಜ 29 :ನಾವೂರು ಗೋಪಾಲಕೃಷ್ಣ ದೇವಸ್ಥಾನದಲ್ಲಿ ಬೃಹತ್ ಸಾಮೂಹಿಕ ವಿಷ್ಣುಸಹಸ್ರನಾಮ ಪಠಣ: ಅಳದಂಗಡಿ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಪೂರ್ವಭಾವಿ ಸಭೆ

Suddi Udaya

ಮಹಿಳೆಯರ ಬಗ್ಗೆ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಅವಹೇಳನಕಾರಿ ಹೇಳಿಕೆ ಖಂಡನೀಯ : ಸುಧೀರ್ ಆರ್ ಸುವರ್ಣ

Suddi Udaya
error: Content is protected !!