24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಹೊಕ್ಕಾಡಿಗೋಳಿ: ಮಹಿಷಮರ್ಧಿನಿ ಕಂಬಳ ಸಮಿತಿ ವೀರ ವಿಕ್ರಮ ಜೋಡುಕರೆ ಬಯಲು ಕಂಬಳದ ಪೂರ್ವಾಭಾವಿ ಸಭೆ

ಹೊಕ್ಕಾಡಿಗೋಳಿ: ಪೂಂಜ ಪಂಚದುರ್ಗಾ ಪರಮೇಶ್ವರಿ ಅಮ್ಮನವರ ಮತ್ತು ಮೂಜಿಲ್ನಾಯ ಕೊಡಮಣಿತ್ತಾಯ ದೈವಗಳ ನಂಟು ಹೊಂದಿರುವ ಇತಿಹಾಸ ಪ್ರಸಿದ್ಧ ಮಹಿಷಮರ್ಧಿನಿ ಕಂಬಳ ಸಮಿತಿ ವೀರ ವಿಕ್ರಮ ಜೋಡುಕರೆ ಬಯಲು ಕಂಬಳ ಹೊಕ್ಕಾಡಿಗೋಳಿಯಲ್ಲಿ ಡಿ. 7 ಶನಿವಾರದಂದು ನಡೆಯುವ ಬಗ್ಗೆ ಪೂರ್ವಾಭಾವಿ ಸಭೆಯು ಕಂಬಳ ವಠಾರದಲ್ಲಿ ಕಂಬಳ ಸಮಿತಿ ಅಧ್ಯಕ್ಷ ನೋಣಾಲ್ ಗುತ್ತು ರಶ್ಮಿತ್ ಶೆಟ್ಟಿ ಕೈತ್ರೋಡಿಯವರ ಉಪಸ್ಥಿತಿಯಲ್ಲಿ ಜರಗಿತು.

ಕಂಬಳ ಕರೆಯ ಸುತ್ತಮುತ್ತಲಿನ ಕೆಲಸ ಕಾರ್ಯಗಳು ಶೀಘ್ರವಾಗಿ ಪ್ರಾರಂಭಿಸಿ ಅತೀ ಕುದಿ ಕಂಬಳ ಪ್ರಾರಂಭಗೊಳ್ಳಲಿದೆ. ವಿವಿಧ ತಂಡದ ಸದಸ್ಯರು ಶ್ರಮದಾನದ ಮೂಲಕ ಕೆಲಸ ಕಾರ್ಯಗಳಲ್ಲಿ ಭಾಗವಹಿಸುವಂತೆ ಸಲಹೆ ನೀಡಿದರು. ಕಳೆದ ವರ್ಷ ಕಂಬಳಕ್ಕೆ ಸಹಕರಿಸಿದವರನ್ನು ಅಭಿನಂದಿಸಲಾಯಿತು.

ಸಮಿತಿಯ ಹಿರಿಯ ಸಂಘಟಕರು, ಸ್ಥಳ ದಾನಿಗಳು, ಕಂಬಳ ಸಮಿತಿಯ ಎಲ್ಲಾ ಪದಾಧಿಕಾರಿಗಳು, ವಿವಿಧ ಭಜನಾ ಮಂಡಳಿ ಮತ್ತು ಸಂಘ ಸಂಸ್ಥೆಯ ಸದಸ್ಯರು ಸೂಕ್ತ ಸಲಹೆ ನೀಡಿದರು.

Related posts

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆ: ಲಲಿತ ಸಹಸ್ರನಾಮ ಮತ್ತು ಶ್ರೀ ದೇವಿ ಅಷ್ಟೋತ್ತರ ಪಾರಾಯಣ,ಭಜನಾ ಕಾರ್ಯಕ್ರಮ

Suddi Udaya

ಗರ್ಡಾಡಿ: ಗಾಳಿ ಮಳೆಗೆ ಮಣ್ಣು ಕುಸಿತ, ಮನೆಗೆ ಹಾನಿ

Suddi Udaya

ಕಾಂಗ್ರೆಸ್ ನಾಯಕರು ಆಯೋಜಿಸಿದ್ದ ಗಣೇಶೋತ್ಸವಕ್ಕೆ ಶಾಸಕ ಹರೀಶ್ ಪೂಂಜ ಮುಖ್ಯ ಅತಿಥಿ: ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ಬ್ಯಾನರ್

Suddi Udaya

ಸೋಣಂದೂರು: ಬೆನೆಡಿಕ್ಟ್ ಪಿಂಟೊ ನಿಧನ

Suddi Udaya

ಧರ್ಮಸ್ಥಳ ಮತದಾನ ಕೇಂದ್ರಕ್ಕೆ ದ.ಕ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ ಭೇಟಿ

Suddi Udaya

ಪತ್ತನಾಜೆ ಉತ್ಸವ ಸಮಾಪ್ತಿ: ಧರ್ಮಸ್ಥಳದಲ್ಲಿ ವಿಶೇಷ ಪೂಜೆಗಳು: ಯಕ್ಷಗಾನ ಮೇಳದ ವಾರ್ಷಿಕ ತಿರುಗಾಟಕ್ಕೆ ಮಂಗಳ

Suddi Udaya
error: Content is protected !!